Government Jobs: ಸರ್ಕಾರಿ ಉದ್ಯೋಗ ಈ ಕಾರಣಕ್ಕೆ ಅರ್ಹರಿಗೆ ಸಿಗಲ್ಲ: ಸಿ.ಟಿ.ರವಿ ಹೀಗಂದಿದ್ದೇಕೆ?
ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳಬೇಕು ಎನ್ನುವುದು ಈಗಿನ ಯುವಜನರ ದೊಡ್ಡ ಕನಸು. ಆದರೆ ಅದು ಅಷ್ಟು ಸುಲಭದ ಮಾತಲ್ಲ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಸರ್ಕಾರಿ ಹುದ್ದೆಗಳು ಖಾಲಿ ಇರುವುದು ಗೊತ್ತೇ ಇದೆ. ಸರ್ಕಾರದ 43 ಇಲಾಖೆಗಳಲ್ಲಿ ಖಾಲಿ ಇರುವ 2.86 ಲಕ್ಷ ಹುದ್ದೆಗಳಿಗೆ ನೇಮಕಾತಿ ಆಗುತ್ತಿಲ್ಲ ಎಂದು ಆಕಾಂಕ್ಷಿಗಳು ಬೀದಿಗಿಳಿದು ಪ್ರತಿಭಟನೆಯೂ ನಡೆಸಿದ್ದಾರೆ. ಆದರೆ ಆ ಒಂದು ಕಾರಣಕ್ಕೆ ಅರ್ಹ ಅಭ್ಯರ್ಥಿಗಳು ಸರ್ಕಾರಿ ಉದ್ಯೋಗ ಪಡೆಯುವ ಅವಕಾಶದಿಂದ ವಂಚಿತರಾಗುತ್ತಾರೆ ಎಂದು ರಾಜಕಾರಣಿಯೊಬ್ಬರು ಹೇಳಿದ್ದಾರೆ.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.86 ಲಕ್ಷ ಹುದ್ದೆಗಳಿಗೆ ನೇಮಕಾತಿ ನಡೆಸುವಂತೆ ಆಗ್ರಹಿಸಿ, ವಿಜಯಪುರದಲ್ಲಿ ಸಾವಿರಾರು ಯುವಕರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದ ಭವಿಷ್ಯವಾದ ಯುವ ಜನತೆ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರೆ ಇದು ಯಾವುದರ ಚಿಂತೆಯೂ ಇಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಲಾಬಿಯಲ್ಲಿ ನಿರತರಾಗಿದ್ದಾರೆ ಬಿಜೆಪಿ ಪಕ್ಷದ ವಿಧಾನದ ಪರಿಷತ್ ಸದಸ್ಯ ಸಿ.ಟಿ.ರವಿ ಬೇಸರ ವ್ಯಕ್ತಪಡಿಸಿದ್ದಾರೆ.

ವಿಳಂಬವಾದರೆ ಸರ್ಕಾರಿ ಉದ್ಯೋಗ ಸಿಗಲ್ಲ
ಇದೇ ರೀತಿ ನೇಮಕಾತಿಯಲ್ಲಿ ವರ್ಷಗಟ್ಟಲೆ ವಿಳಂಬವಾದರೆ, ಸಾವಿರಾರು ಅರ್ಹ ಅಭ್ಯರ್ಥಿಗಳು ವಯೋಮಿತಿಯ ಕಾರಣದಿಂದ ಸರ್ಕಾರಿ ಉದ್ಯೋಗ ಪಡೆಯುವ ಅವಕಾಶದಿಂದ ವಂಚಿತರಾಗುತ್ತಾರೆ. ಇದು ಕೇವಲ ನಿರ್ಲಕ್ಷ್ಯ ಮಾತ್ರವಲ್ಲ, ಕರ್ನಾಟಕದ ಯುವಕರಿಗೆ ಸರ್ಕಾರ ಬಗೆಯುತ್ತಿರುವ ದ್ರೋಹ. ಇಷ್ಟಾದರೂ ಕಾಂಗ್ರೆಸ್ ಸರ್ಕಾರ ಈ ಜ್ವಲಂತ ಸಮಸ್ಯೆಯನ್ನು ಹಾಗೆಯೇ ಕಡೆಗಣಿಸುತ್ತಿದೆ ಎಂದು ಸಿಟಿ ರವಿ ಕಳವಳ ವ್ಯಕ್ತಪಡಿಸಿದ್ದಾರೆ.
2 ವರ್ಷದಿಂದ ನೇಮಕಾತಿ ಆಗಿಲ್ಲ. ಯುವಕರಿಗೆ ಉದ್ಯೋಗವಿಲ್ಲ. ಕೊಟ್ಟ ಭರವಸೆ ಈಡೇರಿಸಿಲ್ಲ. 2.5 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿಯಿದ್ದರೂ ಭರ್ತಿ ಮಾಡಿಲ್ಲ ಎಂದು ಬಿಜೆಪಿ ಕೂಡ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ನಿರುದ್ಯೋಗ ನಿಯಂತ್ರಣಕ್ಕೆ ಕ್ರಮವಿಲ್ಲ. ಎರಡು ವರ್ಷಗಳಲ್ಲಿ ಯುವಕರ ಕೈಗೆ ಚಿಪ್ಪು ಕೊಟ್ಟಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ. ಸಿದ್ದರಾಮಯ್ಯ ನವರೇ, ಯುವಕರ ನೋವಿನ ಸಮಸ್ಯೆ ಆಲಿಸಿ, ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭಿಸಿ, ಉದ್ಯೋಗಕಾಂಕ್ಷಿಗಳಿಗೆ ನ್ಯಾಯ ಒದಗಿಸಿ ಎಂದು ಬಿಜೆಪಿ ಆಗ್ರಹಿಸಿತ್ತು.
ಇತ್ತೀಚೆಗೆ ಸರ್ಕಾರಿ ನೇಮಕಾತಿ ಪ್ರಾರಂಭಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಧಾರವಾಡ ಹಾಗೂ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ಕೂಡ ನಡೆಸಿದರು. ಸರ್ಕಾರ ಈಗಲೂ ಎಚ್ಚೆತ್ತುಕೊಳ್ಳದಿದ್ದರೆ ಈ ಹೋರಾಟ ಇನ್ನು ತೀವ್ರವಾಗುತ್ತದೆ ಎಂದು ಎಚ್ಚರಿಕೆಯೂ ನೀಡಿದ್ದರು. ಶಾಕಸ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಈ ಬಗ್ಗೆ ಧ್ವನಿಗೂಡಿಸಿದ್ದರು. ರೋಸ್ಟರ್ ಬಿಂದುವನ್ನು ನೇಮಕಾತಿಯಲ್ಲಿ ಅಳವಡಿಸಬೇಕೆಂದು 3A, 3B ವರ್ಗದ ಅಭ್ಯರ್ಥಿಗಳು ವಿಜಯಪುರದಲ್ಲಿ ನಡೆಸಿದ ಪ್ರತಿಭಟನೆಗೆ ನನ್ನ ಸಂಪೂರ್ಣ ಬೆಂಬಲವಿದೆ. ಸರ್ಕಾರದ ಅತಾರ್ಕಿಕ ನೀತಿಗಳಿಂದ ಈ ವರ್ಗದ ಅಭ್ಯರ್ಥಿಗಳಿಗೆ ಸಾಕಷ್ಟು ಅನ್ಯಾಯವಾಗಲಿದೆ. ಸರ್ಕಾರ ಕೂಡಲೇ ಎಚೆತ್ತು, ಇವರಿಗೆ ನ್ಯಾಯ ದೊರಕಿಸಿಕೊಡಬೇಕು. ಬಾಕಿ ಇರುವ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಬೇಕು. ಈ ನೇಮಕಾತಿಯನ್ನು ಭ್ರಷ್ಟ ಮುಕ್ತವಾಗಿ ನಡೆಸಬೇಕು ಎಂದು ಆಗ್ರಹಿಸಿದ್ದರು.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications