ಅಡುಗೆಗೆ ಬಳಸುವ ಟೇಸ್ಟಿಂಗ್ ಪೌಡರ್ ನಿಷೇಧಕ್ಕೆ ಚಿಂತನೆ
ಆರೋಗ್ಯದ ದೃಷ್ಟಿಯಿಂದ ಗೋಬಿ ಮಂಚೂರಿ, ಫ್ರೈಡ್ ರೈಸ್ ಸೇರಿದಂತೆ ಇತರೆ ಚೈನೀಸ್ ಫುಡ್ ಗಳಲ್ಲಿ ರುಚಿ ಹೆಚ್ಚಿಸಲು ಈ ಅಜಿನೊಮೊಟೊ ಎಂಬ ರುಚಿ ನೀಡುವ ಪೌಡರನ್ನು ನಿಷೇಧಿಸಲು ಸರ್ಕಾರ ಮುಂದಾಗಿದೆ.
ಬೆಂಗಳೂರು, ಮಾರ್ಚ್.21 : ಅಡುಗೆಗೆ ರುಚಿವರ್ಧಕ ಅಂಶವಾಗಿ ಬಳಕೆಯಾಗುತ್ತಿರುವ ಅಜಿನೊಮೊಟೊ ನಿಷೇಧಕ್ಕೆ ರಾಜ್ಯ ಸರ್ಕಾರ ಚಿಂತಿಸಿದೆ. ಈ ಬಗ್ಗೆ ಸೋಮವಾರ ವಿಧಾನ ಪರಿಷತ್ ನಲ್ಲಿ ಆರೋಗ್ಯ ಸಚಿವ ರಮೇಶ್ ಕುಮಾರ್ ಸುಳಿವು ಕೊಟ್ಟಿದ್ದಾರೆ.
ಗೋಬಿ ಮಂಚೂರಿ, ಫ್ರೈಡ್ ರೈಸ್ ಸೇರಿದಂತೆ ಇತರೆ ಚೈನೀಸ್ ಫುಡ್ ಗಳಲ್ಲಿ ರುಚಿ ಹೆಚ್ಚಿಸಲು ಹೋಟೆಲ್ ಗಳಲ್ಲಿ ಈ ಅಜಿನೊಮೊಟೊ ಎಂಬ ರುಚಿ ನೀಡುವ ಪೌಡರನ್ನು ಬಳಸಲಾಗುತ್ತದೆ. ಇದು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಅಜಿನೊಮೊಟೊನ್ನು ನಿಷೇಧಿಸಲು ಸರ್ಕಾರ ಮುಂದಾಗಿದೆ.

ಬೀದಿಗಳಲ್ಲಿ ತಯಾರಿಸುವ ಗೋಬಿ ಮಂಚೂರಿ ಮತ್ತು ಫ್ರೈಡ್ ರೈಸ್ ಹೆಚ್ಚಿನ ರುಚಿಗಾಗಿ ಟೇಸ್ಟಿಂಗ್ ಪೌಡರನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸುತ್ತಿರುವುದು ವೈಜ್ಞಾನಿಕವಾಗಿ ಹಲವು ರೋಗಗಳಿಗೆ ಕಾರಣವಾಗಿರುವುದು ವಿವಿಧ ಅಧ್ಯಯನಗಳಿಂದ ಬೆಳಕಿಗೆ ಬಂದಿದೆ.
ಇದರಿಂದ ತಲೆನೋವು, ಹೊಟ್ಟೆ ತೊಳಸುವುದು, ಎದೆನೋವು, ತಲೆಸುತ್ತು, ನಿಶಕ್ತಿಯಂತಹ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆಗಳಿದ್ದು, ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕಗಳನ್ನು ಬಳಸುವುದು ಅಪರಾಧವಾಗಿದೆ ಈ ಬಗ್ಗೆ ಸರಕಾರ ಸೂಕ್ತ ಕ್ರಮ ವಹಿಸಲಿದೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಹೇಳಿದ್ದಾರೆ.
-
Davanagere By Election: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ: ಸಿ.ಎಂ ಸಿದ್ದರಾಮಯ್ಯ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
Vastu Tips for Home: ಮನೆಗೆ ಎರಡು ಮುಖ್ಯ ಪ್ರವೇಶ ದ್ವಾರಗಳು ಇರಬಹುದೇ? ವಾಸ್ತು ಹೇಳುವುದು ಏನು -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ?











Click it and Unblock the Notifications