'ದಿಟ್ಟತನ ತೋರಲು ರಾಜ್ಯ ಸರ್ಕಾರಕ್ಕೆ ಇದು ಸಕಾಲ'
ಬೆಂಗಳೂರು, ಸೆಪ್ಟೆಂಬರ್, 19: ಯಾವ ಕಾರಣಕ್ಕೂ ಕಾವೇರಿ ಮೇಲುಸ್ತುವಾರಿ ಸಮಿತಿ ನೀಡಿರುವ ತೀರ್ಮಾನಕ್ಕೆ ರಾಜ್ಯ ಸರ್ಕಾರ ತಲೆಬಾಗಬಾರದು. ಸಿಎಂ ಸಿದ್ದರಾಮಯ್ಯ ನೀರು ಬಿಡುಗಡೆ ಆದೇಶ ನೀಡಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.
ತಮಿಳುನಾಡಿಗೆ 10 ದಿನಗಳ ಕಾಲ 3 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಕಾವೇರಿ ಮೇಲುಸ್ತುವಾರಿ ಸಮಿತಿ ಸೋಮವಾರ (ಸೆ.19) ಆದೇಶ ನೀಡಿದೆ. ಆದರೆ ಇದನ್ನು ರಾಜ್ಯ ಸರ್ಕಾರ ಮಾನ್ಯ ಮಾಡಬಾರದು ಎಂದು ಬಿಎಸ್ ವೈ ಆಗ್ರಹಿಸಿದ್ದಾರೆ.[ಸೆ. 21ರಿಂದ 30ರ ವರೆಗೆ ಕಾವೇರಿ ನೀರು ಬಿಡಿ: ಶಶಿಶೇಖರ್]
ಸಿಎಂ ಸಿದ್ದರಾಮಯ್ಯ ತೆಗೆದುಕೊಳ್ಳುವ ರೈತ ಪರವಾದ ನಿರ್ಧಾರಕ್ಕೆ ಇಡೀ ರಾಜ್ಯ ಬದ್ಧವಾಗಿರುತ್ತದೆ. ವಿಪಕ್ಷಗಳು ಸಹ ಸಹಮತ ನೀಡುತ್ತವೆ. ರಾಜ್ಯ ಸರ್ಕಾರ ಯಾವ ಕಾರಣಕ್ಕೂ ಮೇಲುಸ್ತುವಾರಿ ಸಮಿತಿಯ ತೀರ್ಮಾನವನ್ನು ಒಪ್ಪಿಕೊಳ್ಳಬಾರದು ಎಂದು ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.[ಸುಪ್ರೀಂಕೋರ್ಟ್ ವಿಚಾರಣೆಗೆ ಸಮಿತಿ ತೀರ್ಮಾನವೇ ಮುನ್ನುಡಿ?]
ಇದು ಸಂಪೂರ್ಣ ಅವೈಜ್ಞಾನಿಕ ತೀರ್ಪಾಗಿದ್ದು ನಮ್ಮ ಬಳಿ ನೀರು ಇದ್ದರೆ ತಾನೆ ಬಿಡಲು ಸಾಧ್ಯ, ಇದನ್ನು ರಾಜ್ಯ ಸರ್ಕಾರ ಮತ್ತು ತಮಿಳುನಾಡು ಸಹ ಅರ್ಥ ಮಾಡಿಕೊಳ್ಳಬೇಕು ಎಂದು ಬಿ ಎಸ್ ವೈ ಹೇಳಿದ್ದಾರೆ.