ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಕಡ್ಡಾಯ: ಸರ್ಕಾರ ಆದೇಶ
ಬೆಂಗಳೂರು, ಅಕ್ಟೋಬರ್, 6: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಕ್ಟೋಬರ್ 7ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಡ್ಡಾಯವಾಗಿ ಆಚರಣೆ ಮಾಡಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅಕ್ಟೋಬರ್ 7, 2025ರಂದು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ ಮತ್ತು ಸಂಸ್ಥೆಗಳಲ್ಲಿ ವಾಲ್ಮೀಕಿ ಅವರ ಜಯಂತಿಯನ್ನು ಕಡ್ಡಾಯವಾಗಿ ಆಚರಣೆ ಮಾಡಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಇದರಲ್ಲಿ ಈ ಆದೇಶವನ್ನು ಹೊರಡಿಸಿದೆ.

ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅಕ್ಟೋಬರ್ 7, 2025ರಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ ಮತ್ತು ಸಂಸ್ಥೆಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಅವರು ನಿರ್ದೇಶಿಸಿದ್ದಾರೆ.
ಇನ್ನು ಹಿಂದೂ ಪಂಚಾಂಗದ ಪ್ರಕಾರ, ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಪ್ರತಿ ವರ್ಷ ಅಶ್ವಿನಿ ಮಾಸದ ಪೂರ್ಣಿಮಾ ದಿನದಂದು ಬರುತ್ತದೆ. ಗೌರವಾನ್ವಿತ ಋಷಿ ಮತ್ತು ಕವಿ ಮಹರ್ಷಿ ವಾಲ್ಮೀಕಿ, ವಿಶೇಷವಾಗಿ ಅವರ ಮಹಾಕಾವ್ಯವಾದ ರಾಮಾಯಣದ ಮೂಲಕ ಹಿಂದೂ ಧರ್ಮಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ಇವರನ್ನು ಪೂಜಿಸಲಾಗುತ್ತದೆ.
ರತ್ನಾಕರನಾಗಿ ಜನಿಸಿದ ಋಷಿ ವಾಲ್ಮೀಕಿಯ ಜೀವನವು ನಾರದ ಋಷಿಯನ್ನು ಭೇಟಿಯಾದ ನಂತರ ತಿರುವು ಪಡೆದು, ಅವರನ್ನು ತಪಸ್ಸಿಗೆ ಕರೆದೊಯ್ದು ಅಂತಿಮವಾಗಿ ಮಹಾನ್ ಕವಿಯಾದ ನಂತರ ತಿರುವು ಪಡೆದುಕೊಂಡಿತು. ಅವರನ್ನು ಸಂಸ್ಕೃತ ಸಾಹಿತ್ಯದ ಮೊದಲ ಕವಿಯಾಗಿ ಆದಿ ಕವಿ ಎಂದು ಪೂಜಿಸಲಾಗುತ್ತದೆ ಮತ್ತು ಅವರ ಕೆಲಸವು ಭಾರತೀಯ ಸಂಸ್ಕೃತಿಯ ಮೇಲೆ ಆಳವಾದ ಪ್ರಭಾವ ಬೀರಿದೆ.
ವಾಲ್ಮೀಕಿಯ ಬೋಧನೆಗಳು ರಾಮನ ಮೌಲ್ಯಗಳನ್ನು ಉತ್ತೇಜಿಸುತ್ತವೆ. ಸತ್ಯ, ಕರ್ತವ್ಯ ಮತ್ತು ಕರುಣೆಯನ್ನು ಒತ್ತಿಹೇಳುತ್ತವೆ. ಮುಖ್ಯವಾಗಿ ಗುಜರಾತ್, ಪಂಜಾಬ್ ಮತ್ತು ರಾಜಸ್ಥಾನದಲ್ಲಿ ಕಂಡುಬರುವ ವಾಲ್ಮೀಕಿ ಸಮುದಾಯವು ಅವರನ್ನು ತಮ್ಮ ಪೂರ್ವಜ ಮತ್ತು ದೇವರೆಂದು ಪೂಜಿಸುತ್ತಾರೆ. ಇನ್ನು ವಾಲ್ಮೀಕಿ ಮಹರ್ಷಿಗಳ ಆರಂಭಿಕ ಹೆಸರು ರತ್ನಾಕರ ಆಗಿದೆ. ವಾಲ್ಮೀಕಿಯವರು ಮಹರ್ಷಿಗಳಾಗಿ ಬದಲಾಗುವುದಕ್ಕೂ ಮುಂಚೆ ದರೋಡೆಕಾರರಾಗಿದ್ದವರು.
ಅವರು ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದ ಪ್ರತಿಯೊಬ್ಬರನ್ನು ಭಯಗೊಳಿಸಿ ದರೋಡೆ ಮಾಡುತ್ತಿದ್ದರು. ಒಂದು ದಿನ ಅವರು ಹೀಗೆ ದರೋಡೆ ಮಾಡಲು ಹೋಗುತ್ತಿದ್ದ ವೇಳೆ ಅವರಿಗೆ ನಾರದ ಮಹರ್ಷಿಗಳು ಎದುರಾಗುತ್ತಾರೆ. ನಾರದರು ವಾಲ್ಮೀಕಿ ಮಹರ್ಷಿಗಳಿಗೆ ರಾಮನ ಭಕ್ತಿಯ ಕಡೆಗೆ ಮಾರ್ಗದರ್ಶನವನ್ನು ನೀಡುತ್ತಾರೆ. ಇದರಿಂದಾಗಿ ರತ್ನಾಕರನಾಗಿದ್ದ ವಾಲ್ಮೀಕಿಯವರ ಜೀವನ ಬದಲಾವಣೆ ಆಯಿತು.
ಆಗ ಅವರು ವರ್ಷಗಳ ಕಾಲ ತಪಸ್ಸು ಮಾಡಿದರು. ರಾಮ ನಾಮ ಪಠಣದ ಮೂಲಕ, ರತ್ನಾಕರ ಆಧ್ಯಾತ್ಮಿಕ ಜ್ಞಾನೋದಯವನ್ನು ಪಡೆದು ಮಹರ್ಷಿ ವಾಲ್ಮೀಕಿಯಾದರು. ಈ ಮೂಲಕ ದರೋಡೆಕೋರರಾಗಿದ್ದ ಅವರು ಬಳಿಕ ಋಷಿಯಾಗಿ ಅವರ ಪ್ರಯಾಣವು ಪಶ್ಚಾತ್ತಾಪ, ಭಕ್ತಿ ಮತ್ತು ರೂಪಾಂತರದ ಶಕ್ತಿಯನ್ನು ಸಂಕೇತಿಸುತ್ತದೆ. ಲಕ್ಷಾಂತರ ಭಕ್ತರಿಗೆ ಸದಾಚಾರದ ಮಾರ್ಗವನ್ನು ಅನುಸರಿಸಲು ಪ್ರೇರೇಪಿಸುತ್ತದೆ. ಮಹರ್ಷಿ ವಾಲ್ಮೀಕಿ ತ್ರೇತಾಯುಗದಲ್ಲಿ ಜನಿಸಿದರು. ಮಹರ್ಷಿ ವಾಲ್ಮೀಕಿಯವರ ಸಂಪೂರ್ಣ ಜೀವನವು ದುಷ್ಟ ಕಾರ್ಯಗಳನ್ನು ತ್ಯಜಿಸಲು ಮತ್ತು ಒಳ್ಳೆಯ ಕಾರ್ಯಗಳು ಮತ್ತು ಭಕ್ತಿಯ ಮಾರ್ಗವನ್ನು ಅನುಸರಿಸಲು ದಾರಿ ಮಾಡಿಕೊಡುತ್ತದೆ. ಈ ಮಹಾನ್ ಸಂದೇಶವನ್ನು ಜನರಿಗೆ ಹರಡಲು ಹಾಗೂ ಅವರಿಗೆ ಗೌರವವನ್ನು ಸಲ್ಲಿಸುವುದಕ್ಕಾಗಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಗುತ್ತದೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications