ಸಿಇಟಿ ಕಾಯ್ದೆ ಜಾರಿಗೆ ಬಂದರೆ, ಕಾಮೆಡ್-ಕೆ ರದ್ದು?
ಬೆಂಗಳೂರು. 20 : ಕರ್ನಾಟಕ ಸರ್ಕಾರ ವೃತ್ತಿ ಶಿಕ್ಷಣ ಸಂಸ್ಥೆಗಳ ಕಾಯ್ದೆಗೆ ಕೆಲವು ತಿದ್ದುಪಡಿಗಳನ್ನು ತಂದು 2015-16ನೇ ಸಾಲಿನಿಂದ ಜಾರಿಗೊಳಿಸಲು ಸಿದ್ಧತೆ ಆರಂಭಿಸಿದೆ. ಕರ್ನಾಟಕ ವೃತ್ತಿಪರ ಶಿಕ್ಷಣ ಕಾಯ್ದೆ 2006ನ್ನು ಜಾರಿಗೊಳಿಸಬೇಕಾದರೆ ಕಾಮೆಡ್-ಕೆ ಪರೀಕ್ಷೆಯನ್ನು ರದ್ದುಗೊಳಿಸಿ ಎಂದು ವಿದ್ಯಾರ್ಥಿ ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಿವೆ.
ಡಿ.9ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕರ್ನಾಟಕ ವೃತ್ತಿಪರ ಶಿಕ್ಷಣ ಕಾಯ್ದೆ 2006ರ ತಿದ್ದುಪಡಿ ಕಾಯ್ದೆಯನ್ನು ಮಂಡಿಸಿ ಉಭಯ ಸದನಗಳಲ್ಲಿ ಒಪ್ಪಿಗೆ ಪಡೆದು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. [ಸಿಇಟಿ ಕಾಯ್ದೆ ಯಾರಿಗೆ ಲಾಭ? ಯಾರಿಗೆ ನಷ್ಟ?]

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮತ್ತು ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರು ವಿದ್ಯಾರ್ಥಿ ಸಂಘಟನೆಗಳ ಪ್ರತಿನಿಧಿಗಳು, ವಿವಿಧ ಕಾಲೇಜು ವಿದ್ಯಾರ್ಥಿಗಳು, ಪೋಷಕರೊಂದಿಗೆ ಸಭೆ ನಡೆಸಿ ಈ ಬಗ್ಗೆ ಅವರ ಅಭಿಪ್ರಾಯವನ್ನು ಸಂಗ್ರಹಣೆ ಮಾಡಿದ್ದಾರೆ. [ಸಿಇಟಿ ಗೊಂದಲಕ್ಕೆ ತೆರೆಎಳೆದ ಸಿಎಂ ಸಿದ್ದರಾಮಯ್ಯ]
ಕಳೆದ ವರ್ಷ ಕರ್ನಾಟಕ ವೃತ್ತಿಪರ ಶಿಕ್ಷಣ ಕಾಯ್ದೆ 2006ನ್ನು ಜಾರಿಗೆ ತರಲು ಸರ್ಕಾರ ಮುಂದಾಗಿತ್ತು. ಆಗ ವಿದ್ಯಾರ್ಥಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದರಿಂದ ತನ್ನ ನಿರ್ಧಾರವನ್ನು ಸರ್ಕಾರ ವಾಪಸ್ ಪಡೆದಿತ್ತು. ಸದ್ಯ, ಕಾಯ್ದೆಗೆ ಕೆಲವೊಂದು ತಿದ್ದುಪಡಿ ತಂದು ಜಾರಿಗೊಳಿಸಲು ಮುಂದಾಗಿದೆ.
2006ರ ಕಾಯ್ದೆಯನ್ನು ಜಾರಿಗೆ ತರುವುದಾದದರೆ ಕರ್ನಾಟಕ ಖಾಸಗಿ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್-ಕೆ)ಯನ್ನು ರದ್ದುಮಾಡಿ ಎಂದು ವಿದ್ಯಾರ್ಥಿ ಸಂಘಟನೆಗಳ ಪ್ರಮುಖರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಾಮೆಡ್ ಕೆ ಪರೀಕ್ಷೆ ಮೂಲಕ ಭರ್ತಿ ಮಾಡುವ ವೃತ್ತಿಪರ ಸೀಟುಗಳನ್ನೂ ಸಿಇಟಿ ಮೂಲಕವೇ ಭರ್ತಿ ಮಾಡಿ ಎಂದು ಹೇಳಿರುವ ವಿದ್ಯಾರ್ಥಿಗಳು ಕಾಯ್ದೆಗೆ ತಿದ್ದುಪಡಿ ತಂದರೂ ಖಾಸಗಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳು ಕಡಿಮೆಯಾಗಬಾರದು ಎಂದು ಒತ್ತಾಯಿಸಿದ್ದಾರೆ.
ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರು,ಈ ಬಗ್ಗೆ ಖಾಸಗಿ ಕಾಲೇಜುಗಳೊಂದಿಗೆ ಮಾತುಕತೆ ನಡೆಸಿ ನಂತರ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ. ಕರ್ನಾಟಕ ವೃತ್ತಿಪರ ಶಿಕ್ಷಣ ಕಾಯ್ದೆ 2006ನ್ನು ಜಾರಿಗೆ ತರುವ ಪ್ರಯತ್ನವಂತೂ ನಡೆಯುತ್ತಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications