ಸರ್ಕಾರದಿಂದಲೇ ಡ್ರೋನ್ ಹಾರಿಸುವ ಉಚಿತ ತರಬೇತಿ: ಅರ್ಜಿ ಸಲ್ಲಿಕೆ, ಅರ್ಹತೆ ವಿವರ
ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ (ಎಸ್ಸಿ) ಅಭ್ಯರ್ಥಿಗಳಿಗೆ ಡ್ರೋನ್ ಉಪಕರಣವನ್ನು ಉಪಯೋಗಿಸುವ ಸಂಬಂಧ 15 ದಿನಗಳ ವಸತಿಯುತ ತರಬೇತಿ ನೀಡಲಿದೆ. ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ 2025-26ನೇ ಸಾಲಿನ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಡೋನ್ ಉಪಕರಣವನ್ನು ಲಾಜಿಸ್ಟಿಕ್ ಸರ್ವೇಲೆನ್ಸ್ (Logistics Surveillance), ಕೃಷಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ಉಪಯೋಗಿಸುವ ಸಂಬಂಧ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗಗಳು, ಬೆಂಗಳೂರು ಮತ್ತು ಮೈಸೂರು ಕಂದಾಯ ವಿಭಾಗಗಳಿಗೆ ಪ್ರತ್ಯೇಕವಾಗಿ 15 ದಿನಗಳ ವಸತಿಯುತ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ತರಬೇತಿ ಅವಧಿ, ತರಬೇತಿ ವಿವರ, ಅರ್ಜಿ ಸಲ್ಲಿಸಬೇಕಾದ ವೆಬ್ ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳನ್ನು ನೀಡಿದ್ದಾರೆ. ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಉತ್ತರ ಎಂದು ಕರೆಯಲ್ಪಡುವ ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗಗಳು ಹಾಗೂ ದಕ್ಷಿಣ ವಿಭಾಗ ಎಂದು ಕರೆಯಲ್ಪಡುವ ಬೆಂಗಳೂರು ಮತ್ತು ಮೈಸೂರು ಕಂದಾಯ ವಿಭಾಗಗಳ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ಡ್ರೋನ್ ಉಪಕರಣವನ್ನು ಉಪಯೋಗಿಸುವ ಸಂಬಂಧ 15 ದಿನಗಳ ವಸತಿಯುತ ತರಬೇತಿ ಸಿಗಲಿದೆ.

ಅರ್ಹತೆಗಳು
* ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು
* ಈ ತರಬೇತಿ ಪಡೆಯುವವರ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ.
* ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
* ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
* ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ 5 ಲಕ್ಷ ರೂ. ಮೀರಿರಬಾರದು.
ಮೊದಲು ಅರ್ಜಿ ಸಲ್ಲಿಸದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಆಸಕ್ತರು https://igccd.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-09-2025 ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಅಭ್ಯರ್ಥಿಯು ಆಯ್ಕೆ ಮಾಡಿದ ವಿಭಾಗದ ಪ್ರಕಾರ ತರಬೇತಿ ವಿಭಾಗವನ್ನು ನಿಯೋಜಿಸಲಾಗುತ್ತದೆ.
ಅಭ್ಯರ್ಥಿಯ ತರಬೇತಿ ವಿಭಾಗವನ್ನು ಬದಲಾಯಿಸುವ ಅಧಿಕಾರವನ್ನು ಇಲಾಖೆ ಹೊಂದಿರುತ್ತದೆ. ಅಭ್ಯರ್ಥಿಯು ತರಬೇತಿಯ ಎಲ್ಲ ನಿಯಮಗಳು ಮತ್ತು ನಿಬಂಧನೆಗಳನ್ನು ಪಾಲಿಸಬೇಕು. ತರಬೇತಿಯ ವೇಳಾಪಟ್ಟಿಯನ್ನು ನಿರ್ವಹಿಸಬೇಕು. ತರಬೇತಿಯ ನಿಯಮಗಳನ್ನು ಪಾಲಿಸದಿದ್ದರೇ, ಅಂತಹ ಅಭ್ಯರ್ಥಿಯನ್ನು ಅನರ್ಹಗೊಳಿಸುವ ಅಧಿಕಾರವನ್ನು ಇಲಾಖೆ ಹೊಂದಿರುತ್ತದೆ.
ತರಬೇತಿ ಸಂಸ್ಥೆ, ಅಧ್ಯಾಪಕ ಸದಸ್ಯರು ಅಥವಾ ಬೋಧಕರ ಕಡೆಗೆ ಅವಿಧೇಯತೆ ಅಥವಾ ದುರ್ನಡತೆ ಪ್ರದರ್ಶಿಸುವ ಯಾವುದೇ ಅಭ್ಯರ್ಥಿಯನ್ನು ತಕ್ಷಣವೇ ಅನರ್ಹಗೊಳಿಸಲಾಗುತ್ತದೆ. ಅಭ್ಯರ್ಥಿಯು 15 ದಿನಗಳ ತರಬೇತಿಯನ್ನು ಪೂರ್ಣಗೊಳಿಸಬೇಕು. ತುರ್ತು ಸಂದರ್ಭದಲ್ಲಿ ಮಾತ್ರವೇ ಅಭ್ಯರ್ಥಿಯು ತರಬೇತಿ ಸಂಸ್ಥೆ ಮತ್ತು ಇಲಾಖೆಯ ಅನುಮತಿಯೊಂದಿಗೆ ತರಬೇತಿ ಆವರಣದಿಂದ ಹೊರಗೆ ಹೋಗಬಹುದು. ಪರೀಕ್ಷೆಯನ್ನು ನಡೆಸಿ, ಅದರ ಫಲಿತಾಂಶದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಪೂರ್ಣ ಅಧಿಕಾರವನ್ನು ಇಲಾಖೆಯು ಹೊಂದಿದೆ ಎಂದು ಸ್ಪಷ್ಟಪಡಿಸಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications