ತಮಿಳುನಾಡಿಗೆ 5 ಕೋಟಿ ನೆರವು ಘೋಷಿಸಿದ ಕರ್ನಾಟಕ

ಬೆಂಗಳೂರು, ಡಿಸೆಂಬರ್ 02 : ಭಾರೀ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ತಮಿಳುನಾಡು ರಾಜ್ಯಕ್ಕೆ ಕರ್ನಾಟಕ ಸರ್ಕಾರ 5 ಕೋಟಿ ರೂ.ಗಳ ನೆರವು ಘೋಷಣೆ ಮಾಡಿದೆ. ಔಷಧಿ ಸೇರಿದಂತೆ ಅಗತ್ಯ ಸಾಮಗ್ರಿಗಳನ್ನು ಪೂರೈಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಈ ಕುರಿತು ಮಾಹಿತಿ ನೀಡಿದರು. 'ಜಲಪ್ರಳಯದಿಂದ ಸಂಕಷ್ಟಕ್ಕೆ ಸಿಲುಕಿರುವ ತಮಿಳುನಾಡು ರಾಜ್ಯಕ್ಕೆ 5 ಕೋಟಿ ರೂ. ಪರಿಹಾರ ನೀಡುತ್ತಿದ್ದೇವೆ. ತಮಿಳುನಾಡಿನ ಅಧಿಕಾರಿಗಳ ಜೊತೆ ಚರ್ಚಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ' ಎಂದು ಹೇಳಿದರು. [ಮಳೆಯಿಂದ ಜರ್ಝರಿತ ತಮಿಳುನಾಡಿನ ಇತ್ತೀಚಿನ ವರದಿಗಳು]

siddaramaiah

'5 ಕೋಟಿ ಹಣದ ಜೊತೆಗೆ ಔಷಧ ಸೇರಿ ಅಗತ್ಯ ಪರಿಹಾರ ಸಾಮಗ್ರಿಗಳನ್ನು ತಮಿಳುನಾಡಿಗೆ ಪೂರೈಕೆ ಮಾಡಲಾಗುತ್ತದೆ. ಮುಖ್ಯಕಾರ್ಯರ್ಶಿಗಳ ಕೌಶಿಕ್ ಮುಖರ್ಜಿ ಅವರು ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಪರಿಹಾರಗಳನ್ನು ಪೊರೈಕೆ ಮಾಡಲಾಗುತ್ತದೆ' ಎಂದರು. [ಗ್ಯಾಲರಿ: ಹಚ್ಚಿ ಹೊಡೆಯುತ್ತಿರುವ ಮಳೆಗೆ ತತ್ತರಿಸಿದ ಚೆನ್ನೈ]

ಸಿಎಫ್‌ಟಿಆರ್‌ಐನಿಂದ ಪಲಾವ್, ಉಪ್ಪಿಟ್ಟು ರವಾನೆ : ಮಳೆಯಿಂದಾಗಿ ನಿರಾಶ್ರಿತರಾಗಿರುವ ಚೆನ್ನೈನ ಜನರಿಗೆ ಮೈಸೂರಿನ ಸಿಎಫ್‌ಟಿಆರ್‌ಐ ಉಪ್ಪಿಟ್ಟು, ಪಲಾವ್, ಚಪಾತಿ ಮುಂತಾದ ಆಹಾರ ಪದಾರ್ಥಗಳನ್ನು ರವಾನೆ ಮಾಡುತ್ತಿದೆ. ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ) ಸುಮಾರು 3 ಟನ್ ಆಹಾರಗಳನ್ನು ರವಾನಿಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+