ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡಿಗೆ 5 ಕೋಟಿ ನೆರವು ಘೋಷಿಸಿದ ಕರ್ನಾಟಕ

|
Google Oneindia Kannada News

ಬೆಂಗಳೂರು, ಡಿಸೆಂಬರ್ 02 : ಭಾರೀ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ತಮಿಳುನಾಡು ರಾಜ್ಯಕ್ಕೆ ಕರ್ನಾಟಕ ಸರ್ಕಾರ 5 ಕೋಟಿ ರೂ.ಗಳ ನೆರವು ಘೋಷಣೆ ಮಾಡಿದೆ. ಔಷಧಿ ಸೇರಿದಂತೆ ಅಗತ್ಯ ಸಾಮಗ್ರಿಗಳನ್ನು ಪೂರೈಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಈ ಕುರಿತು ಮಾಹಿತಿ ನೀಡಿದರು. 'ಜಲಪ್ರಳಯದಿಂದ ಸಂಕಷ್ಟಕ್ಕೆ ಸಿಲುಕಿರುವ ತಮಿಳುನಾಡು ರಾಜ್ಯಕ್ಕೆ 5 ಕೋಟಿ ರೂ. ಪರಿಹಾರ ನೀಡುತ್ತಿದ್ದೇವೆ. ತಮಿಳುನಾಡಿನ ಅಧಿಕಾರಿಗಳ ಜೊತೆ ಚರ್ಚಿಸಲು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ' ಎಂದು ಹೇಳಿದರು. [ಮಳೆಯಿಂದ ಜರ್ಝರಿತ ತಮಿಳುನಾಡಿನ ಇತ್ತೀಚಿನ ವರದಿಗಳು]

siddaramaiah

'5 ಕೋಟಿ ಹಣದ ಜೊತೆಗೆ ಔಷಧ ಸೇರಿ ಅಗತ್ಯ ಪರಿಹಾರ ಸಾಮಗ್ರಿಗಳನ್ನು ತಮಿಳುನಾಡಿಗೆ ಪೂರೈಕೆ ಮಾಡಲಾಗುತ್ತದೆ. ಮುಖ್ಯಕಾರ್ಯರ್ಶಿಗಳ ಕೌಶಿಕ್ ಮುಖರ್ಜಿ ಅವರು ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಪರಿಹಾರಗಳನ್ನು ಪೊರೈಕೆ ಮಾಡಲಾಗುತ್ತದೆ' ಎಂದರು. [ಗ್ಯಾಲರಿ: ಹಚ್ಚಿ ಹೊಡೆಯುತ್ತಿರುವ ಮಳೆಗೆ ತತ್ತರಿಸಿದ ಚೆನ್ನೈ]

ಸಿಎಫ್‌ಟಿಆರ್‌ಐನಿಂದ ಪಲಾವ್, ಉಪ್ಪಿಟ್ಟು ರವಾನೆ : ಮಳೆಯಿಂದಾಗಿ ನಿರಾಶ್ರಿತರಾಗಿರುವ ಚೆನ್ನೈನ ಜನರಿಗೆ ಮೈಸೂರಿನ ಸಿಎಫ್‌ಟಿಆರ್‌ಐ ಉಪ್ಪಿಟ್ಟು, ಪಲಾವ್, ಚಪಾತಿ ಮುಂತಾದ ಆಹಾರ ಪದಾರ್ಥಗಳನ್ನು ರವಾನೆ ಮಾಡುತ್ತಿದೆ. ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ) ಸುಮಾರು 3 ಟನ್ ಆಹಾರಗಳನ್ನು ರವಾನಿಸುತ್ತಿದೆ.

English summary
Karnataka Chief Minister Siddaramaiah announced financial assistance of Rs 5 core for the flood-hit Tamil Nadu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X