Government Employees: ಸರ್ಕಾರಿ ನೌಕರರ ಸಂಬಳ ಪ್ಯಾಕೇಜ್ನಲ್ಲಿ ನೋಂದಣಿ ಅವಧಿ ವಿಸ್ತರಣೆ: ಸರ್ಕಾರ ಮಹತ್ವದ ಆದೇಶ
ಬೆಂಗಳೂರು: ಸರ್ಕಾರದಿಂದ ನೇರವಾಗಿ ಹಾಗೂ ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ ಎ', 'ಬಿ' ಮತ್ತು 'ಸಿ' ಗುಂಪಿನ ಅರ್ಹ ಅಧಿಕಾರಿಗಳು/ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವಲ್ಲಿ ಕಾಲಾವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ ಆದೇಶ ಪತ್ರದಲ್ಲಿ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ ಎಲ್ಲಾ ಅರ್ಹ "ಎ", "ಬಿ" ಮತ್ತು "ಸಿ" ಗುಂಪಿನ ಅಧಿಕಾರಿಗಳು/ನೌಕರರಿಗೆ ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ದಿನಾಂಕ: 15.12.2025 ರೊಳಗಡೆ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು.

ಆದರೆ, ಹಲವು ಅಧಿಕಾರಿಗಳು ಹಾಗೂ ನೌಕರರು ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವಲ್ಲಿ ಇನ್ನೂ ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ, 'ಎ' ಮತ್ತು "ಬಿ" ಗುಂಪಿನ ಅಧಿಕಾರಿಗಳಿಗೆ ಹಾಗೂ 'ಸಿ' ಗುಂಪಿನ ನೌಕರರಿಗೆ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳಲು ದಿನಾಂಕ: 16.01.2026ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.
ಆರೋಗ್ಯ ಸಂಜೀವಿನಿ ಯೋಜನೆಯ ಅನುಷ್ಠಾನ ಕುರಿತು ಮಾಹಿತಿ
ವೈದ್ಯಕೀಯ ಶಿಕ್ಷಣ ಇಲಾಖೆಯ ಸ್ವಾಯತ್ತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ/ನೌಕರರು ಕೆ.ಜಿ.ಐ.ಡಿ. ಮತ್ತು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಹೆಚ್.ಆರ್.ಎಂ.ಎಸ್. ತಂತ್ರಾಂಶದಲ್ಲಿ ಅವಕಾಶ ಕಲ್ಪಿಸುವ ಕುರಿತು ನೌಕರರ ಕೇಂದ್ರ ಸಂಘದ ಮನವಿ ಮಾಡಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಸ್ವಾಯತ್ತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ವೃಂದದ ಅಧಿಕಾರಿ/ನೌಕರರು ಎದುರಿಸುತ್ತಿರುವ ಈ ಕೆಳಕಂಡ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ತಮ್ಮಲ್ಲಿ ಕೋರಿದೆ.
ಕೆ.ಜಿ.ಐ.ಡಿ. ಸಂಖ್ಯೆಯನ್ನು ಹೊಂದಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ನೌಕರರ KGID ಸಂಖ್ಯೆಗೆ ಬದಲಾಗಿ Employee No. ನೀಡಲಾಗುತ್ತಿದ್ದು, KGID ಸಂಖ್ಯೆಯನ್ನೇ ನೌಕರರ Pay Slip ನಲ್ಲಿ ನಮೂದಿಸುವುದು. ಸ್ವಾಯತ್ತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ KGID. ವಂತಿಕೆ ಹಣ ಕಟಾವು ಮಾಡಲಾಗುತ್ತಿದ್ದು, ಕಟಾವು ಮಾಡಲಾದ ವಂತಿಗೆ ಹಣ ಯಾವ ಬಾಬ್ರಿಗೆ ಕಟಾವಣೆ ಮಾಡಲಾಗಿದೆ ಎಂಬುದನ್ನು Pay Slip ನಲ್ಲಿ ಸ್ಪಷ್ಟವಾಗಿ ನಮೂದಿಸುವುದು.
ಸರ್ಕಾರವು ಇತ್ತೀಚೆಗೆ ಜಾರಿಗೊಳಿಸಿರುವ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ"ಗೆ ಸೇರ್ಪಡೆಗೊಳ್ಳಲು ಸ್ವಾಯತ್ತ ಸಂಸ್ಥೆಗಳಲ್ಲಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ/ನೌಕರರಿಗೆ ಅವಕಾಶ ಕಲ್ಪಿಸುವುದು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ?












Click it and Unblock the Notifications