ಮೈಕ್ರೋಫೈನಾನ್ಸ್ ಕಂಪನಿಗಳ ಹಾವಳಿಗೆ ಕಡಿವಾಣ, ಸಿಎಂಗೆ ಸಂಪೂರ್ಣ ಅಧಿಕಾರ: ಎಚ್.ಕೆ.ಪಾಟೀಲ್
ಹುಬ್ಬಳ್ಳಿ, ಫೆಬ್ರವರಿ 02: ಕರ್ನಾಟಕದಲ್ಲಿ ಬಡವರಿಗೆ, ಶ್ರಮಿಕರಿಗೆ ಮಿತಿ ಮೀರಿ ಸಾಲ ನೀಡಿ, ಸಾಲಕ್ಕಾಗಿ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ತರಲು ಮುಂದಾಗಿದೆ. ಆದರೆ ಇನ್ನೂ ಮಂಡನೆ ಆಗಿಲ್ಲ. ಈ ಬಗ್ಗೆ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾತನಾಡಿದ್ದಾರೆ. ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ಸರ್ಕಾರ ಸಿದ್ಧವಾಗಿದೆ ಎಂದಿದ್ದಾರೆ.
ಭಾನುವಾರ ನಗರದಲ್ಲಿ ಮಾತನಾಡಿದ ಅವರು, ಮೈಕ್ರೋ ಪೈನಾನ್ಸ್ ಕಂಪನಿ, ಬಡ್ಡಿ ದಂಧೆಕೋರರ ಹಾವಳಿ ಹೆಚ್ಚಾಗಿದೆ. ಇದರಿಂದ ಸಾವು, ನೋವು ಉಂಟಾಗಿದೆ. ಈಹಿನ್ನೆಲೆಯಲ್ಲಿ ಈ ಮೈಕ್ರೋ ಪೈನಾನ್ಸ್ ಹಾವಳಿ ತಡೆಗೆ ಈಗಾಗಲೇ ಸುಗ್ರೀವಾಜ್ಞೆ ಮಸೂದೆಯನ್ನ ತಯಾರು ಮಾಡಿ ಮುಖ್ಯಮಂತ್ರಿಗಳಿಗೆ ಕಳುಹಿಸಿ ಕೊಡಲಾಗಿದೆ.

ಬಡವರನ್ನ, ಜನಸಾಮಾನ್ಯರನ್ನು ರಕ್ಷಣೆ ಮಾಡಬೇಕಾಗಿದೆ. ಬಡವರನ್ನ ಮನಬಂದಂತೆ ಥಳಿಸಿ ಸಾಲ ವಸೂಲಿ ಮಾಡಲಾಗುತ್ತಿದೆ. ಆದ್ದರಿಂದ ಮೈಕ್ರೋಪೈನಾನ್ಸ್, ಬಡ್ಡಿ ದಂಧೆಕೋರರಿಗೆ ಲಗಾಮು ಹಾಕಬೇಕಾಗಿದೆ. ಈ ಸಂಬಂಧ ಸುಗ್ರಿವಾಜ್ಞೆ ತಯಾರು ಮಾಡಲಾಗಿದೆ. ಓಂಬಡ್ಸ್ ಮನ್ ನೇಮಕ ಮಾಡಲಾಗುತ್ತಿದೆ. ಇನ್ನು ಪೊಲೀಸ್ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರಿ ನೀಡಲಾವುದು. ಜನರ ಭಾವನೆ ಹಾಗೂ ಬದಕುಕಿನ ವಿರುದ್ಧ ವಸೂಲಿ ಮಾಡುವ ಪ್ರಕ್ರಿಯೆ ನಾವು ಒಪ್ಪಲ್ಲ ಎಂದು ಅವರು ತಿಳಿಸಿದರು.
ಈ ಮಸೂದೆ ಜಾರಿಗೆ ಎಲ್ಲ ಬಗೆಯ ಸಿದ್ಧತೆ ಆಗಿದ್ದು. ಮುಖ್ಯಮಂತ್ರಿಗಳಿಗೆ ಸಹ ಈಗಾಗಲೇ ಕಳುಹಿಸಿ ಕೊಡಲಾಗಿದೆ. ಜಾರಿ ಮಾಡುವುದು ಮಾತ್ರವೇ ಬಾಕಿ ಇದ್ದು, ಮುಖ್ಯಮಂತ್ರಿಗಳು ಸುಗ್ರೀವಾಜ್ಞೆಯ ಪರಿಶೀಲನೆ ಮಾಡಲಿದ್ದಾರೆ. ಇದರ ಸಂಪೂರ್ಣ ಅಧಿಕಾರ ಮುಖ್ಯಮಂತ್ರಿಗಳಿಗೆ ಇದೆ ಎಂದು ಅವರು ವಿವರಿಸಿದರು.
ರಾಜ್ಯಪಾಲರಿಗೆ ಕಳುಹಿಸುವ ಮುನ್ನ ಸಿಎಂ ಅವರು ಪರಿಶೀಲನೆ ಮಾಡಬೇಕಾಗುತ್ತದೆ. ಸಚಿವ ಸಂಪುಟದಲ್ಲಿ ಪಾಸ್ ಮಾಡಲು ಸಿಎಂ ಅವರಿಗೆ ಅಧಿಕಾರ ನೀಡಲಾಗಿದೆ. ಈ ಮಸೂದೆಯನ್ನು ಸಿಎಂ ಸಿದ್ದರಾಮಯ್ಯ ಅವರೇ ರಾಜ್ಯಪಾಲರಿಗೆ ರವಾನಿಸಲಿದ್ದಾರೆ. ಆದಷ್ಟು ಶೀಘ್ರವೇ ಮೈಕ್ರೋಪೈನಾನ್ಸ್ ಕಂಪನಿ ಸಿಬ್ಬಂದಿ, ಬಡ್ಡಿ ದಂಧೇಕೋರರ ದೌರ್ಜನ್ಯಕ್ಕೆ ಕಡಿವಾಣ ಬೀಳಲಿದೆ ಎಂದು ಅವರು ಹೇಳಿದರು.
ನಿಯಮಗಳು ಪಾಲನೆ ಆಗುತ್ತಿಲ್ಲ: ಕೇಂದ್ರದ ವಿರುದ್ಧ ಸಚಿವ ಕಿಡಿ
ಇಂತಹ ದೌರ್ಜನ್ಯ ಮಾಡುವವರ ವಿರುದ್ಧ ಕಠಿಣ ಕ್ರಮ ಜಾರಿ ಮಾಡಲಾಗುತ್ತಿದೆ. ದೌರ್ಜನ್ಯಕ್ಕೆ ಒಳಗಾಗುವವರ ವಿರುದ್ಧ ರಕ್ಷಣೆ ನೀಡಲಾಗುವುದು ಎಂದ ಅವರು ಆರ್ ಬಿ ಐ ಮಾರ್ಗದರ್ಶಿ ಪಾಲನೆ ಮಾಡಬೇಕು. ಆದರೆ ಕೇಂದ್ರ ಸರ್ಕಾರದ ಅಧೀನದಲ್ಲಿ ಆರ್ ಬಿಐ ಇದೆ. ಯಾವುದೇ ನಿಯಮ ಪಾಲನೆ ಆಗತ್ತಿಲ್ಲ ಎಂದು ಬಿಜೆಪಿ ವಿರುದ್ಧ ದೂರಿದರು.
ಇದೇ ಸಮಯದಲ್ಲಿ ರಾಜಕೀಯ ಸಲಹೆಗಾರ, ಶಾಸಕ ಬಿ.ಆರ್ ಪಾಟೀಲ್ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ವಿಚಾರವಾಗಿ, ಮಾತನಾಡಿದ ಅವರು ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಯಾವ ಉದ್ದೇಶ ಇರಿಸಿಕೊಂಡು ರಾಜೀನಾಮೆ ಕೊಟ್ಟಿದ್ದಾರೆ ಗೊತ್ತಿಲ್ಲ. ಇದಕ್ಕೆ ಈಗಾಗಲೇ ಸಿಎಂ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಬಿ. ಆರ್ ಪಾಟೀಲ್ ರನ್ನ ಕರೆದು ಮಾತನಾಡುತ್ತೇನೆ ಎಂದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications