Karnataka Government: ಹೊಸ ವರ್ಷಕ್ಕೆ ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ಭಾಗ್ಯ
ರಾಜ್ಯ ಸರ್ಕಾರವು ಹೊಸ ವರ್ಷದ ಹೊತ್ತಲ್ಲೇ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದೆ. ಹೊಸ ವರ್ಷದ ಕೊಡುಗೆಯಾಗಿ 67 ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜನವರಿ 1 ಇಂದಿನಿಂದಲೇ ಅನ್ವಯವಾಗುವಂತೆ ಐಎಎಸ್ ಅಧಿಕಾರಿಗಳಿಗೆ ವಿವಿಧ ಶ್ರೇಣಿಗೆ ಬಡ್ತಿ ನೀಡಿದೆ. ಅಲ್ಲದೆ ಐಪಿಎಸ್ ಅಧಿಕಾರಿಗಳಿಗೆ ಮತ್ತು 50 ಎಸ್ಪಿಗಳಿಗೆ ಎಸ್ಪಿಪಿಯಾಗಿ ಬಡ್ತಿ ನೀಡಿದೆ.
ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ಕೆಲ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಇದೀಗ ಹೊಸ ವರ್ಷದ ಆರಂಭದಲ್ಲೇ ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಬಡ್ತಿಭಾಗ್ಯ ನೀಡಿದೆ. ಈ ಮೂಲಕ ರಾಜ್ಯದ ಆಡಳಿತ ಯಂತ್ರವನ್ನು ಚುರುಕುಗೊಳಿಸಿದೆ.

ಐಪಿಎಸ್ ಅಧಿಕಾರಿಗಳಾದ ರಮಣ ಗುಪ್ತಾ (ಹೆಚ್ಚುವರಿ ಪೊಲೀಸ್ ಆಯುಕ್ತ, ಗುಪ್ತಚರ ವಿಭಾಗ), ಚೇತನ್ ಸಿಂಗ್ ರಾಥೋಡ್ ಐಜಿಪಿ (ಈಶಾನ್ಯ ವಲಯ ಬೆಳಗಾವಿ), ವಿಕಾಸ್ ಕುಮಾರ್ (ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ಪಶ್ಚಿಮ), ಅಮಿತ್ ಸಿಂಗ್ (ಪಶ್ಚಿಮ ವಲಯ ಐಜಿಪಿ ಮಂಗಳೂರು), ವಂಶಿಕೃಷ್ಣ (ಡಿಐಜಿ, ಪೊಲೀಸ್ ನೇಮಕಾತಿ ವಿಭಾಗ, ಬೆಂಗಳೂರು), ಕಾರ್ತಿಕ್ ರೆಡ್ಡಿ (ರಾಮನಗರ ಪೊಲೀಸ್ ವರಿಷ್ಠಾಧಿಕಾರಿ) ಕುಲದೀಪ್ ಕುಮಾರ್ ಜೈನ್ (ಡಿಐಜಿ, ಆಡಳಿತ ವಿಭಾಗದ ಜಂಟಿ ಪೊಲೀಸ್ ಆಯುಕ್ತ), ಸಂತೋಷ್ ಬಾಬು ಅವರಿಗೆ ಗುಪ್ತಚರ ಇಲಾಖೆ ಡಿಐಜಿಯಾಗಿ ಬಡ್ತಿ ನೀಡಲಾಗಿದೆ.
ಗುಪ್ತಚರ ಇಲಾಖೆಯ ಡಿಐಜಿಯಾಗಿ ಇಶಾ ಪಂತ್ ಬಡ್ತಿ ಪಡೆದಿದ್ದಾರೆ. ಜಿ.ಸಂಗೀತಾ (ಸಿಐಡಿ ಅರಣ್ಯ ಘಟಕ, ಡಿಐಜಿ), ಮೈಸೂರು ಕಮಿಷನರ್ ಆಗಿ ಸೀಮಾ ಲಾಟ್ಕರ್ ಮುಂದುವರಿಕೆ ಜೊತೆಗೆ ಡಿಐಜಿ ಬಡ್ತಿ, ರೇಣುಕಾ ಕೆ.ಸುಕುಮಾರ್ (ಡಿಸಿಆರ್ಇ, ಬೆಂಗಳೂರು ಡಿಐಜಿಯಾಗಿ ಬಡ್ತಿ), ಭೀಮಾಶಂಕರ ಗುಳೇದ್ (ಬೆಳಗಾವಿ ಎಸ್ಪಿಯಾಗಿ ಮುಂದುವರಿಕೆ), ಎನ್.ಶಶಿ ಕುಮಾರ್ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಮಹಾನಿರೀಕ್ಷಕರಾಗಿ ಬಡ್ತಿ, ವೈ.ಎಸ್.ರವಿ ಕುಮಾರ್ (ಇನ್ಸ್ಪೆಕ್ಟರ್ ಜನರಲ್ ಆಫ್ ಪೋಲಿಸ್ ಆಗಿ ಬಡ್ತಿ ಇಂಟಲಿಜೆನ್ಸ್, ಬೆಂಗಳೂರು) ಸೇರಿದಂತೆ 50 ಎಸ್ಪಿಗಳಿಗೆ ಎಸ್ಪಿಪಿಯಾಗಿ ಬಡ್ತಿ ನೀಡಲಾಗಿದೆ.

ಕಳೆದ ಅಕ್ಟೋಬರ್ನಲ್ಲಿಯೂ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ನಡೆದಿತ್ತು. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳ 7 ಡಿವೈಎಸ್ಪಿ ಹಾಗೂ 55 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ 7 ಮಂದಿ ಡಿವೈಎಸ್ಪಿ ಹಾಗೂ 55 ಇನ್ಸ್ಪೆಕ್ಟರ್ ಅವರನ್ನು ವರ್ಗಾವಣೆ ಮಾಡಲಾಗಿತ್ತು.
ಆಗ ಡಿವೈಎಸ್ಪಿ ಕೆ.ಎಂ.ಸತೀಶ್ ಅವರನ್ನು ಎಲೆಕ್ಟ್ರಾನಿಕ್ಸಿಟಿ ಉಪ ವಿಭಾಗಕ್ಕೆ ವರ್ಗಾಯಿಸಿ, ಗೋಪಾಲ್ ನಾಯಕ್ ಅವರನ್ನು ಬೆಂಗಳೂರಿನ ಬಿಎಂಟಿಎಫ್ಗೆ ವರ್ಗಾಯಿಸಲಾಗಿತ್ತು. ಉಳಿದ ಡಿವೈಎಸ್ಪಿಗಳನ್ನು ರಾಜ್ಯದ ವಿವಿಧ ಜಿಲ್ಲೆಗಳಿಗೆ ವರ್ಗಾವಣೆ ಮಾಡಲಾಗಿತ್ತು. 55 ಮಂದಿ ಇನ್ಸ್ಪೆಕ್ಟರ್ಗಳಲ್ಲಿ ರೇಣುಕಾ ಅವರನ್ನು ವೈಟ್ಫೀಲ್ಡ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಲಿಂಗರಾಜು ಅವರು ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ಟ್ರಾನ್ಸ್ಫರ್ ಆಗಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications