ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ತೆಗೆದುಹಾಕಲು ಮುಂದಾದ ಬಿಜೆಪಿ ಸರ್ಕಾರ
Recommended Video
ಬೆಂಗಳೂರು, ಅಕ್ಟೋಬರ್ 30: ಟಿಪ್ಪು ಜಯಂತಿ ಆಚರಣೆ ಬಗ್ಗೆ ಅನೇಕ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿ, ಸರ್ಕಾರದಿಂದ ಯಾವುದೇ ಅಧಿಕೃತ ಆಚರಣೆ ಇಲ್ಲ ಎಂಬ ಸಂದೇಶ ಹೊರ ಬಂದ ಬೆನ್ನಲ್ಲೇ ಶಾಲಾ ಪಠ್ಯದಿಂದ ಟಿಪ್ಪು ಸುಲ್ತಾನ್ ಹೆಸರನ್ನು ತೆಗೆದು ಹಾಕಲು ಸರ್ಕಾರ ಮುಂದಾಗಿರುವ ಬಗ್ಗೆ ಸುದ್ದಿ ಬಂದಿದೆ.
ಟಿಪ್ಪು ಸುಲ್ತಾನ್ ಕುರಿತ ಪಾಠವನ್ನು ತೆಗೆದುಹಾಕುವ ಬಗ್ಗೆ ಇತಿಹಾಸ ಪಠ್ಯಪುಸ್ತಕ ರಚನಾ ಸಮಿತಿ ಸಭೆ ಕರೆದು ಮೂರು ದಿನದೊಳಗೆ ವರದಿ ಸಲ್ಲಿಸುವಂತೆ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಪ್ರಾಥಮಿಕ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಆದೇಶಿಸಿದ್ದಾರೆ.
ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅವರು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಇದಕ್ಕೂ ಮುನ್ನ ಈ ಕುರಿತಂತೆ ಮನವಿ ಸಲ್ಲಿಸಿದ್ದರು. ಟಿಪ್ಪು ಸುಲ್ತಾನ್ ಕುರಿತಂತೆ ಪಾಠಗಳನ್ನು ಪಠ್ಯದಿಂದ ತೆಗೆದು ಹಾಕುವಂತೆ ಕೋರಿದ್ದರು. ಇದಾದ ಬಳಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಈ ಸೂಚನೆ ನೀಡಿದ್ದಾರೆ.

ಪಠ್ಯಪುಸ್ತಕ ರಚನಾ ಸಮಿತಿ ಸಭೆಗೆ ಈ ಶಾಸಕರನ್ನೂ ಆಹ್ವಾನಿಸಿ. ಈ ಪಠ್ಯದ ಅಗತ್ಯ ಹಾಗೂ ಅದನ್ನು ಉಳಿಸಿಕೊಳ್ಳುವ ಇಲ್ಲವೇ ತೆಗೆದು ಹಾಕುವ ಕುರಿತು ಸಾಧಕ ಬಾಧಕಗಳ ಕುರಿತಂತೆ ಚರ್ಚಿಸಬೇಕು ಎಂದು ಸಚಿವ ಸುರೇಶ್ ಸೂಚಿಸಿದ್ದಾರೆ
ಪಠ್ಯದಲ್ಲಿ ಟಿಪ್ಪು ಬದಲಿಗೆ ಮುಂದಿನ ಪೀಳಿಗೆಗೆ ದೇಶಪ್ರೇಮ, ರಾಷ್ಟ್ರಭಕ್ತಿ ಮೂಡಿಸುವ ಪಠ್ಯವನ್ನು ಅಳವಡಿಸಬೇಕು ಎಂದು ಶಾಸಕ ಅಪ್ಪಚ್ಚು ರಂಜನ್ ಮನವಿ ಸಲ್ಲಿಸಿದ್ದರು. ಟಿಪ್ಪು ಜಯಂತಿ ಆಚರಣೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಈ ಬಾರಿ ಆಚರಣೆಯನ್ನು ಸರ್ಕಾರ ಕೈಬಿಟ್ಟಿದೆ. ಅದರ ಬೆನ್ನಲ್ಲೇ ಪಠ್ಯದಿಂದಲೂ ಟಿಪ್ಪು ಸುಲ್ತಾನ್ ಚರಿತ್ರೆಯನ್ನು ತೆಗೆಯಬೇಕೆಂಬ ಒತ್ತಾಯ ಕೇಳಿ ಬಂದಿದೆ.
ಹಜರತ್ ಟಿಪ್ಪು ಸುಲ್ತಾನ ಅವರು 1750 ನವೆಂಬರ 10 ರಂದು ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ಜನಿಸಿದರು. ತಂದೆ ಹೈದರಾಲಿ, ತಾಯಿ ಪಾತೀಮಾ ಫಕರುನ್ನೀಸಾ. ಅವರು ಬಾಲ್ಯದಲ್ಲಿಯೇ ಅನೇಕ ಯುದ್ಧ ಕೌಶಲ್ಯಗಳನ್ನು ತಮ್ಮ ತಂದೆ ಹೈದರಾಲಿ ಅವರೊಂದಿಗಿದ್ದ ಫ್ರೆಂಚ್ ಅಧಿಕಾರಿಗಳು ಹಾಗೂ ಅವರ ಗುರು ಮೊಹ್ಮದ ಫಲಕ್ಅಲಿ ಅವರಿಂದ ಕಲಿತಿದ್ದರು. 1799ರಲ್ಲಿ ಟಿಪ್ಪು ಸುಲ್ತಾನ್ ಮೃತರಾಗಿದ್ದು, ಶ್ರೀರಂಗಪಟ್ಟಣದಲ್ಲಿ ಸಮಾಧಿ ಇದೆ.












Click it and Unblock the Notifications