ಹೊಸ ಕಾರು, ಬೈಕ್ ಖರೀದಿಸುವವರಿಗೆ ರಾಜ್ಯ ಸರ್ಕಾರದಿಂದ ದೊಡ್ಡ ಶಾಕ್
ಈಗಾಗಲೇ ಕಾರು ಹಾಗೂ ಬೈಕ್ ದರಗಳು ಗಗನಕ್ಕೇರಿವೆ. ಈ ದುಬಾರಿ ದುನಿಯಾದಲ್ಲಿ ಸಿಲುಕಿರುವ ಬಡ ಹಾಗೂ ಮಧ್ಯಮವರ್ಗವು ಇನ್ನೇನು ಹೊಸ ವರ್ಷದ ಸಂದರ್ಭದಲ್ಲಿ ಹೊಸ ಬೈಕು ಕಾರು ಖರೀದಿಸುವ ಪ್ಲ್ಯಾನ್ನಲ್ಲಿದ್ದಾರೆ. ಆದರೆ ರಾಜ್ಯ ಸರ್ಕಾರವು ಇವರಿಗೆಲ್ಲ ಶಾಕ್ ಕೊಡಲು ಮುಂದಾಗಿದೆ.
ಹೊಸ ಕಾರು ಖರೀದಿಗೆ 1000 ರೂಪಾಯಿ ಮತ್ತು ಹೊಸ ಬೈಕ್ಗಳಿಗೆ 500 ರೂಪಾಯಿವರೆಗೆ ಸೆಸ್ (ಉಪ ತೆರಿಗೆ) ಏರಿಸಲು ತೀರ್ಮಾನಿಸಿದೆ. ದ್ವಿಚಕ್ರ ವಾಹನಗಳಿಗೆ ಮತ್ತು ಸಾರಿಗೆಯೇತರ ಕಾರುಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುವ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ಈ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ವರದಿಯಾಗಿದೆ.

ಮತ್ತೊಂದೆಡೆ ಸರ್ಕಾರದ ಈ ನಿರ್ಧಾರಕ್ಕೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ವಿರೋಧ ವ್ಯಕ್ತಪಡಿಸಿವೆ. ಕಾಂಗ್ರೆಸ್ ಸರ್ಕಾರ ಈಗ ಹೊಸ ಕಾರು ಮತ್ತು ಬೈಕ್ಗಳಿಗೆ ಕ್ರಮವಾಗಿ ₹500 ಮತ್ತು ₹1000 ಸೆಸ್ ಏರಿಸಲು ತೀರ್ಮಾನಿಸಿದ್ದು ಸಂಪೂರ್ಣ ದಿವಾಳಿಯಾಗಿರುವ ಸರ್ಕಾರ ಕನ್ನಡಿಗರ ಜೇಬಿಗೆ ಕನ್ನ ಹಾಕುವುದಕ್ಕೆ ಸದಾ "ಸಿದ್ದ" ಎಂದು ಬಿಜೆಪಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದೆ.
ಮುದ್ರಾಂಕ ಶುಲ್ಕ, ನೋಂದಣಿ ಶುಲ್ಕ, ರಸ್ತೆ ತೆರಿಗೆಗಳನ್ನು ಈಗಾಗಲೇ ಏರಿಸಿರುವ ಕಾಂಗ್ರೆಸ್ ಸರ್ಕಾರ ಈಗ ಹೊಸ ಕಾರು ಮತ್ತು ಬೈಕ್ಗಳಿಗೆ ಕ್ರಮವಾಗಿ ₹500 ಮತ್ತು ₹1000 ಸೆಸ್ ಏರಿಸಲು ತೀರ್ಮಾನಿಸಿದ್ದು, ಇದು ಕಾಂಗ್ರೆಸ್ನ ಜನವಿರೋಧಿ ಮನಸ್ಥಿತಿಯ ಸುಸ್ಪಷ್ಟ ನಿದರ್ಶನ. ಸಿಎಂ ಸಿದ್ದರಾಮಯ್ಯ ಅವರೆ, ಸುಳ್ಳು ಹೇಳುವುದನ್ನು ಬಿಟ್ಟು, ನಿಮ್ಮ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ ಎಂದು ಕೂಡಲೇ ಶ್ವೇತಪತ್ರ ಹೊರಡಿಸಿ ಎಂದು ಆಗ್ರಹಿಸಿದೆ.

ಗ್ಯಾರಂಟಿಗೆ ಹಣ ಹೊಂದಿಸಲು ಸರ್ಕಸ್: ಜೆಡಿಎಸ್
ರಾಜ್ಯ ಸರ್ಕಾರದ ಈ ನಿಲುವಿಗೆ ಜೆಡಿಎಸ್ ಪಕ್ಷ ಕೂಡ ಆಕ್ಷೇಪ ವ್ಯಕ್ತಪಡಿಸಿದೆ. ಮಧ್ಯಮ ವರ್ಗದವರನ್ನು ಸುಲಿಗೆ ಮಾಡುವುದೇ ಕಾಂಗ್ರೆಸ್ ಸರ್ಕಾರದ ಖಯಾಲಿ ಆಗಿಬಿಟ್ಟಿದೆ. ಗ್ಯಾರಂಟಿಗಾಗಿ ಹಣ ಹೊಂದಿಸಲು ಸರ್ಕಸ್ ಮಾಡುತ್ತಿರುವ ಸಿದ್ದರಾಮಯ್ಯ ಸರ್ಕಾರ ಈಗ ಸೆಸ್ ನೆಪದಲ್ಲಿ ರಾಜ್ಯದಲ್ಲಿ ಲೂಟಿಗೆ ಇಳಿದಿದೆ ಎಂದು ಕಿಡಿಕಾರಿದೆ.
ದ್ವಿಚಕ್ರ ವಾಹನಗಳಿಗೆ ಮತ್ತು ಸಾರಿಗೆಯೇತರ ಮೋಟಾರು ಕಾರುಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುವ ವಿಧೇಯಕವನ್ನು ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿದೆ. ಇನ್ನು ಮುಂದೆ ಹೊಸ ವಾಹನ ಖರೀದಿ ವೇಳೆ ಖರೀದಿದಾರರು ಹೆಚ್ಚುವರಿ ತೆರಿಗೆಯನ್ನು ಪಾವತಿಸಬೇಕು. ಖಾಲಿಯಾಗಿರುವ ಬೊಕ್ಕಸ ತುಂಬಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಮಧ್ಯಮ ವರ್ಗವನ್ನು ಟಾರ್ಗೆಟ್ ಮಾಡಿ ತೆರಿಗೆ ಬರೆ ಎಳೆಯುತ್ತಿದೆ ಎಂದು ಆರೋಪ ಮಾಡಿದೆ.
ಈಗಾಗಲೇ ಹೊಸ ವಾಹನಗಳ ದರವು ವರ್ಷದಿಂದ ವರ್ಷಕ್ಕೆ ಏರುತ್ತಲೇ ಇದ್ದು, ಮತ್ತೊಂದೆಡೆ ಇಲ್ಲಸಲ್ಲದ ತೆರಿಗೆಗಳನ್ನು ಹಾಕಿ ಸಾರ್ವಜನಿಕರ ತಲೆ ಮೇಲೆ ಹೊರೆ ಇಟ್ಟಿದೆ. ಈಗ ಮತ್ತೆ ತೆರಿಗೆ ಹೆಚ್ಚಾದರೆ ಇಂತದ ದುಬಾರಿ ಜೀವನ ನಮ್ಮಿಂದ ನಡೆಸಲು ಸಾಧ್ಯವೇ ಎಂದು ಸಾರ್ವಜನಿಕರು ಕೂಡ ಸರ್ಕಾರದ ಈ ನಿರ್ಣಯವನ್ನು ವಿರೋಧ ಮಾಡುತ್ತಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications