Beer Price Hike: ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆ ಶಾಕ್? ಬಿಯರ್ ಬೆಲೆ ಹೆಚ್ಚಳ ಸಾಧ್ಯತೆ
ಕರ್ನಾಟಕದಲ್ಲಿ ಮತ್ತೆ ಮದ್ಯದ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದ್ದು, ಮದ್ಯ ಪ್ರಿಯರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಕರ್ನಾಟಕ ಸರ್ಕಾರವು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು (ಎಇಡಿ) ಮತ್ತೊಮ್ಮೆ ಹೆಚ್ಚಿಸಲು ಪ್ರಸ್ತಾಪಿಸಿದೆ, ಇದರ ಪರಿಣಾಮವಾಗಿ ಪ್ರತಿ 650 ಮಿಲಿ ಬಾಟಲಿಗೆ 8-10 ರೂ ಹೆಚ್ಚಳವಾಗುವ ಸಾಧ್ಯತೆ ಇದೆ.
ಕರ್ನಾಟಕ ಅಬಕಾರಿ (ಅಬಕಾರಿ ಸುಂಕ ಮತ್ತು ಶುಲ್ಕಗಳು) ನಿಯಮಗಳು, 1968 ಕ್ಕೆ ತಿದ್ದುಪಡಿ ಮಾಡಲು ಕರಡು ಅಧಿಸೂಚನೆಯಲ್ಲಿ ಹೆಚ್ಚಳವನ್ನು ಸರ್ಕಾರ ಪ್ರಸ್ತಾಪಿಸಿದೆ. ಹೆಚ್ಚಳಕ್ಕೆ ಅವಕಾಶ ನೀಡುವ ಹೊಸ ನಿಯಮಗಳು ಈ ತಿಂಗಳು ಅಥವಾ ಫೆಬ್ರವರಿ ಆರಂಭದಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ ಎಂದು ಡಿಹೆಚ್ ವರದಿ ಮಾಡಿದೆ.

"ಬಿಯರ್ ಮಾರಾಟದಲ್ಲಿ ದೊಡ್ಡ ಬೆಳವಣಿಗೆ ಇರುವುದರಿಂದ" ಸರ್ಕಾರವು ಬೆಲೆ ಹೆಚ್ಚಳ ಮಾಡಲು ನಿರ್ಧಾರ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಗ್ಯಾರಂಟಿ ಯೋಜನೆಗಾಗಿ ಬೆಲೆ ಏರಿಕೆ
ಕಾಂಗ್ರೆಸ್ನ ಐದು ಭರವಸೆಗಳನ್ನು ಈಡೇರಿಸಲು ಈ ಬೆಲೆ ಹೆಚ್ಚಳ ಮಾಡಲಾಗುತ್ತಿದೆ ಎನ್ನುವ ಆರೋಪಗಳು ಕೂಡ ಕೇಳಿ ಬಂದಿವೆ. ಕರಡು ಅಧಿಸೂಚನೆಯ ಪ್ರಕಾರ, ಕರ್ನಾಟಕದಲ್ಲಿ ತಯಾರಿಸಲಾದ ಅಥವಾ ರಾಜ್ಯಕ್ಕೆ ಆಮದು ಮಾಡಿಕೊಳ್ಳುವ ಬಾಟಲಿಯ ಬಿಯರ್ನ ಮೇಲೆ ಎಇಡಿಯನ್ನು ಶೇಕಡಾ 185 ರಿಂದ ಶೇಕಡಾ 195 ಕ್ಕೆ ಶೇಕಡಾ 10 ರಷ್ಟು ಹೆಚ್ಚಿಸಲಾಗುವುದು.
ಆರು ತಿಂಗಳ ಅವಧಿಯಲ್ಲಿ ಇದು ಎರಡನೇ ಬಾರಿ ಮದ್ಯದ ಬೆಲೆಯಲ್ಲಿ ಏರಿಕೆಯಾಗಲಿದೆ. ಕಳೆದ ವರ್ಷ ಜುಲೈನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರತೀಯ ನಿರ್ಮಿತ ಮದ್ಯದ ಮೇಲೆ ಶೇ.20ರಷ್ಟು ಮತ್ತು ಬಿಯರ್ ಮೇಲೆ ಶೇ.175ರಿಂದ ಶೇ.185ಕ್ಕೆ ಎಇಡಿ ಹೆಚ್ಚಿಸಿದ್ದರು.
ರಾಜ್ಯ ಸರಕಾರಕ್ಕೆ ಅಬಕಾರಿ ಆದಾಯವೇ ನಿರ್ಣಾಯಕ. 2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕವು ಅಬಕಾರಿಯಿಂದ 36,000 ಕೋಟಿ ರೂಪಾಯಿ ಆದಾಯ ಗಳಿಸುವ ಗುರಿಯನ್ನು ಹೊಂದಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾರ್ಚ್ 23ರ ದರಪಟ್ಟಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications