ಕರ್ನಾಟಕ ಸರ್ಕಾರದ 2017ನೇ ವರ್ಷದ ಕ್ಯಾಲೆಂಡರ್ ಬಿಡುಗಡೆ
ಬೆಂಗಳೂರು, ಡಿಸೆಂಬರ್.29 : ಕರ್ನಾಟಕ ಸರ್ಕಾರದ 2017ನೇ ವರ್ಷದ ಕ್ಯಾಲೆಂಡರ್ ಮತ್ತು ಡೈರಿಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಬುಧವಾರ ಇಂದು ಬಿಡುಗಡೆ ಮಾಡಿದರು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಕೃಷಿ ಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ, ಅನ್ನಭಾಗ್ಯ, ಗಾಂಧೀಜಿ ಕನಸು ಕರ್ನಾಟಕದಲ್ಲಿ ನನಸು ಮತ್ತು ಮೆಟ್ರೋಗಳ ವರ್ಣ ರೇಖಾ ಚಿತ್ರದಿಂದ ಕೂಡಿರುವ ಈ ಕ್ಯಾಲೆಂಡರ್ ಯೋಜನೆಗಳ ಸಂಕ್ಷಿಪ್ತ ಮಾಹಿತಿ ಮತ್ತು ಚಿತ್ರಣಗಳನ್ನು ಒಳಗೊಂಡಿದೆ.

ಸರ್ಕಾರಿ ಮುದ್ರಣಾಲಯದಲ್ಲಿ 20 ರುಗಳಿಗೆ ಕ್ಯಾಲೆಂಡರ್ ಮತ್ತು 50 ರುಗಳಿಗೆ ಡೈರಿ ದೊರೆಯಲಿವೆ.
ಖ್ಯಾತ ರೇಖಾಚಿತ್ರ ಕಲಾವಿದ ಚಂದ್ರನಾಥ್ ಆಚಾರ್ಯ ಅವರು ರಚಿಸಿರುವ ಈ ವಿಶೇಷ ಕ್ಯಾಲೆಂಡರಿನ ಪರಿಕಲ್ಪನೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್.ಆರ್. ವಿಶುಕುಮಾರ್ ಅವರದ್ದಾಗಿದೆ.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಜಯ್ ಸೇಠ್, ಸರ್ಕಾರಿ ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಯ ಇಲಾಖೆಯ ನಿರ್ದೇಶಕ ಎಂ. ರವಿಶಂಕರ್ ಹಾಗೂ ಸರ್ವ ಶಿಕ್ಷಣ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕ ಡಾ: ಪಿ.ಸಿ. ಜಾಫರ್ ಉಪಸ್ಥಿತರಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications