Good News: ರಾಜ್ಯದಲ್ಲಿ ಕೊನೆಗೂ ಜಾತಿ ಗಣತಿ ಸಮೀಕ್ಷಾದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಸರ್ಕಾರ
Good News: ರಾಜ್ಯದಲ್ಲಿ ಜಾತಿ ಗಣತಿ ವೇಳೆ ಬಳಕೆ ಮಾಡಿಕೊಂಡಿದ್ದ ಸಮೀಕ್ಷಾದಾರರಿಗೆ ಗೌರವಧನ ಬಿಡುಗಡೆ ಮಾಡಲಾಗಿದೆ. ಎಲ್ಲಾ ಅಡೆತಡೆಗಳನ್ನು ಎದುರಿಸಿ ಈ ಕಾರ್ಯವನ್ನು ಮಾಡಲಾಗಿತ್ತು. ಹಾಗಾದ್ರೆ ಇದೀಗ ಸರ್ಕಾರ ಎಷ್ಟು ಅನುದಾನ ರಿಲೀಸ್ ಮಾಡಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಜಾತಿ ಗಣತಿ ಸಮೀಕ್ಷೆದಾರರಿಗೆ ಗುಡ್ ನ್ಯೂಸ್ ನೀಡಿದ್ದು, ಗೌರವಧನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಉಲ್ಲೇಖ(1)ರ ಆದೇಶದನ್ವಯ ರಾಜ್ಯಾದ್ಯಂತ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳಲಾಗಿರುತ್ತದೆ. ಉಲ್ಲೇಖ (2)ರ ಆದೇಶದಲ್ಲಿ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಕೈಗೊಳ್ಳಲಾಗುವ ಸಮೀಕ್ಷೆಯಲ್ಲಿ ಪಾಲ್ಗೊಂಡ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ಈ ಕೆಳಕಂಡಂತೆ ಗೌರವಧನವನ್ನು ನಿಗದಿಪಡಿಸಿ ಆದೇಶಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಕಾರ್ಯನಿರ್ವಹಿಸಿರುವ ಸಮೀಕ್ಷಾದಾರರಿಗೆ ಅನುದಾನ ಬಿಡುಗಡೆಗೊಳಿಸಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಒಟ್ಟು 127,73,45,200 ರೂಪಾಯಿ (ನೂರ ಇಪ್ಪತ್ತೇಳು ಕೋಟಿ ಎಪ್ಪತ್ಮೂರು ಲಕ್ಷದ ನಲವತ್ತೈದು ಸಾವಿರದ ಇನ್ನೂರು ರೂಪಾಯಿಗಳು ಮಾತ್ರ) ಗಳನ್ನು ಒಳಪಟ್ಟು ಬಿಡುಗಡೆ ಮಾಡಿ ಆದೇಶಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾರ್ಗದರ್ಶನದಲ್ಲಿ ಈ ಮೊತ್ತವನ್ನು ಮೊದಲ ಕಂತಿನಲ್ಲಿ ಜಿಲ್ಲಾಧಿಕಾರಿಗಳ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ.
ಪ್ರಮುಖ ಅಂಶಗಳು
* ಒಂದು ಮತ್ತು ಎರಡು ಸದಸ್ಯರಿರುವ ಮನೆಗಳನ್ನು ಸಮೀಕ್ಷೆ ಮಾಡಿರುವವರಿಗೆ ತಲಾ 50 ರೂಪಾಯಿನಂತೆ ಹಾಗೂ ಮೂರು ಮತ್ತು ಮೂರಕ್ಕಿಂತ ಹೆಚ್ಚು ಸದಸ್ಯರಿರುವ ಮನೆಗಳನ್ನು ಸಮೀಕ್ಷೆ ಮಾಡಿರುವವವರಿಗೆ ತಲಾ 100 ರೂಪಾಯಿನಂತೆ ಪಾವತಿಸಲಾಗುವುದು.
* EDCS ನಿಂದ ಪಡೆದಿರುವಂತೆ ಸಮೀಕ್ಷಾದಾರರ ಹೆಸರು ಮತ್ತು ಅವರಿಗೆ ಪಾವತಿಸಬೇಕಾಗಿರುವ ಮೊತ್ತದ ವಿವರವನ್ನು ಜಿಲ್ಲಾವಾರು ಪ್ರತ್ಯೇಕವಾಗಿ ನೀಡಲಾಗಿದೆ.
* ಸಮೀಕ್ಷೆಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾಗುವ ಅನುದಾನ ಹಾಗೂ ವೆಚ್ಚದ ವಿವರಗಳನ್ನು ಪ್ರತ್ಯೇಕವಾಗಿ ನಿರ್ವಹಿಸುವುದು ಹಾಗೂ ನಿಯಮಾನುಸಾರ ವೆಚ್ಚಗಳನ್ನು ಭರಿಸಿದ ನಂತರ ಹಣ ವಿನಿಯೋಗ ಪ್ರಮಾಣ ಪತ್ರವನ್ನು ಆಯೋಗಕ್ಕೆ ಸಲ್ಲಿಸುವುದು.
ಆಯೋಗದ ಪ್ರಕಟಣೆಯ ಪ್ರಕಾರ, ರಾಜ್ಯಾದ್ಯಂತ 1,46,48,053 ಮನೆಗಳ ಸಮೀಕ್ಷೆ ಕಾರ್ಯ ನಡೆದಿದ್ದು, ಇದಕ್ಕೆ ಈ ಮೊತ್ತ ಮೀಸಲಾಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಗೆ ಸಮೀಕ್ಷೆದಾರರಿಗೆ ಗೌರವಧನ ವಿತರಣೆಗೆ ಸಕಾಲದಲ್ಲಿ ಹಣ ಹಂಚಿಕೆ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಮೇಲ್ವಿಚಾರಕರಿಗೆ ತಲಾ 10,000 ರೂಪಾಯಿಗಳನ್ನು ನೀಡುವ ಪ್ರತ್ಯೇಕ ಪ್ರೋತ್ಸಾಹಧನವನ್ನು ಸಹ ಸರ್ಕಾರ ಅನುಮೋದನೆ ನೀಡಿದೆ. ಈ ನಿರ್ಧಾರದಿಂದ ರಾಜ್ಯಾದ್ಯಂತ ಸಮೀಕ್ಷೆದಾರರು ಮತ್ತು ಮೇಲ್ವಿಚಾರಕರು ನೇರವಾಗಿ ಪ್ರಯೋಜನ ಪಡೆಯಲಿದ್ದಾರೆ ಎಂದು ಹೇಳಲಾಗುತ್ತದೆ. ಹೀಗೆ ಸಮೀಕ್ಷೆಯಲ್ಲಿ ಪಾಲ್ಗೊಂಡವರಿಗೆ ರಾಜ್ಯ ಸರ್ಕಾರ ಗೌರವಧನವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications