ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ
ಬೆಂಗಳೂರು, ಡಿಸೆಂಬರ್ 5: ರಾಜ್ಯದಲ್ಲಿ ಸರ್ಕಾರವು ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಆಗಾಗ ಮಹತ್ವದ ಮಾಹಿತಿಯನ್ನ ನೀಡುತ್ತಲಿರುತ್ತದೆ. ಇದೀಗ ಸಚಿವ ಸಂಪುಟ ಸಭೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಲಾಗಿದೆ. ಹಾಗಾದ್ರೆ ಅದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆದಿದ್ದು, ಈ ವೇಳೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ಅಗತ್ಯ ವಿಷಯಗಳಲ್ಲಿ ಪದವಿ ಹೊಂದಿದ್ದು, 1ರಿಂದ 5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಪ್ರಮಾಣ ಪತ್ರ ಅಗತ್ಯ ಇಲ್ಲ ಎಂದು ಹೇಳಲಾಗಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಅಧಿಕೃತ ನಿರ್ಣಯ ಕೈಗೊಳ್ಳಲಾಗಿದೆ. ಪದವಿ ಪೂರೈಸಿದ ಪ್ರಾಥಮಿಕ ಶಿಕ್ಷಕರಿಗೆ ಟಿಇಟಿ ಕಡ್ಡಾಯ ಷರತ್ತಿನಿಂದ ವಿನಾಯಿತಿ ನೀಡಲಾಗಿದೆ. ಸಂಪುಟ ಸಭೆ ನಂತರ ಕಾನೂನು ಸಚಿವ ಎಚ್.ಕೆ.ಪಾಟೀಲ್ ಈ ಬಗ್ಗೆ ಮಾತನಾಡಿ, 1ರಿಂದ 5ನೇ ತರಗತಿವರೆಗೆ ಬೋಧಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಪ್ರಮಾಣ ಪತ್ರ ಅಗತ್ಯ ಇಲ್ಲ. 6 ಮತ್ತು 7ನೇ ತರಗತಿ ಹಾಗೂ ಮುಂದಿನ ತರಗತಿಗಳಿಗೆ ಟಿಇಟಿ ಅಗತ್ಯ ಎಂದು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.
ಹೊಸ ಪಿಂಚಣಿ ಕುರಿತು ಮಾಹಿತಿ: ರಾಜ್ಯದಲ್ಲಿ ಶಿಕ್ಷಕರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಲು ಈ ವರ್ಷದಲ್ಲಿ ನೇಮಕಗೊಂಡ ಶಿಕ್ಷಕರು ಅರ್ಹರು ಎಂದು ತಿಳಿಸಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣದ ನಿರ್ದೇಶಕರು ಏಪ್ರಿಲ್ 1, 2006ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಿಂದ ಅಥವಾ ನಂತರದಲ್ಲಿ ಸೇವೆಗೆ ಸೇರಿದ ಶಿಕ್ಷಕರಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಹಳೆಯ ಪಿಂಚಣಿ ಸೌಲಭ್ಯಕ್ಕೆ ಒಳಪಡಿಸುವ ಸಂಬಂಧ ಮಾಹಿತಿಯನ್ನು ಸಿದ್ಧಪಡಿಸಿ ಕಚೇರಿಗೆ ಸಲ್ಲಿಕೆ ಮಾಡಲಾಗಿದೆ.
ಸದರಿ ಮಾಹಿತಿಯನ್ನಯ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ಈ ಸಂಬಂಧ ದೃಡೀಕರಣ ಪತ್ರವನ್ನು ಸಲ್ಲಿಸಲು ಸೂಚಿಸಲಾಗಿದ್ದು, ಅದರಂತೆಯೇ ಬೆಂಗಳೂರು ಮತ್ತು ಮೈಸೂರು ವಿಭಾಗದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಹಿಂದಿನ ಡಿಫೈನ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ದೃಢೀಕರಿಸಲಾಗಿದೆ ಎಂದು ತಿಳಿಸಲಾಗಿದೆ.
ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಆದೇಶದಲ್ಲಿ ಏಪ್ರಿಲ್ 1, 2006 ಪೂರ್ವದಲ್ಲಿ ಹೊರಡಿಸಲಾಗಿರುವ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆ ಹೊಂದಿ ಅಥವಾ ತದನಂತರ ನೇಮಕಗೊಂಡ ಬೆಂಗಳೂರು ಮತ್ತು ಮೈಸೂರು ವಿಭಾಗದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಮಾರ್ಚ್ 10, 2025ರ ಪತ್ರದೊಂದಿಗೆ ಸಲ್ಲಿಕೆ ಮಾಡಲಾಗಿದೆ.
ಒಟ್ಟು 2,302 ಪ್ರಾಥಮಿಕ ಶಾಲಾ ಶಿಕ್ಷಕರ ಮಾಹಿತಿಯನ್ನು ಪರಿಶೀಲನೆ ಮಾಡಲಾಗಿದೆ. ಈ ಪ್ರಾಥಮಿಕ ಶಾಲಾ ಶಿಕ್ಷಕರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಅರ್ಹರಿರಾಗಿದ್ದಾರೆ ಎಂದು ಈ ಮೂಲಕ ದೃಡೀಕರಿಸಿದೆ ಎಂದು ತಿಳಿಸಲಾಗಿದ ಎಂದು ಉಲ್ಲೇಖ ಮಾಡಲಾಗಿದೆ.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications