ರಂಜಾನ್ಗೆ ಉರ್ದು ಶಾಲೆಗಳ ಸಮಯ ಬದಲಾವಣೆ: ಸರ್ಕಾರದ ಈ ನಿರ್ಧಾರ 'ಓಲೈಕೆ' ಅಲ್ಲ ಎಂದ ಜಿ.ಪರಮೇಶ್ವರ್
ರಾಜ್ಯದಲ್ಲಿನ ಉರ್ದು ಮಾಧ್ಯಮ ಶಾಲೆಗಳ ಶಾಲಾ ಸಮಯವನ್ನು ರಂಜಾನ್ ತಿಂಗಳ ಹಿನ್ನೆಲೆಯಲ್ಲಿ ಬದಲಾವಣೆ ಮಾಡಿ ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರಂಜಾನ್ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಬೆಳಿಗ್ಗೆ 8ರಿಂದ ಮಧ್ಯಾಹ್ನ 12.45ರವರೆಗೆ ತರಗತಿ
ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯ ಪ್ರಕಾರ, ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಉರ್ದು ಮಾಧ್ಯಮದ ಕಿರಿಯ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಈ ಪರಿಷ್ಕೃತ ಸಮಯ ಅನ್ವಯವಾಗಲಿದೆ. ರಂಜಾನ್ ತಿಂಗಳು ಆರಂಭವಾಗುವ ದಿನದಿಂದ 2026ರ ಮಾರ್ಚ್ 20ರವರೆಗೆ ಶಾಲೆಗಳು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.45ರವರೆಗೆ ಕಾರ್ಯನಿರ್ವಹಿಸಲಿವೆ. ಸಾಮಾನ್ಯ ದಿನಗಳಲ್ಲಿ ಶಾಲೆಗಳು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.20ರವರೆಗೆ ನಡೆಯುತ್ತಿದ್ದವು. ಆದರೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮನವಿಯನ್ನು ಪುರಸ್ಕರಿಸಿ ಮತ್ತು 2002ರಲ್ಲಿದ್ದ ಹಳೆಯ ಆದೇಶವನ್ನು ಪರಿಶೀಲಿಸಿ ಸರ್ಕಾರ ಈ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಇದು ಓಲೈಕೆಯ ರಾಜಕೀಯವಲ್ಲ: ಪರಮೇಶ್ವರ್ ಸ್ಪಷ್ಟನೆ
ಸರ್ಕಾರದ ಈ ನಡೆಗೆ ವಿರೋಧ ಪಕ್ಷಗಳಿಂದ 'ಅಲ್ಪಸಂಖ್ಯಾತರ ಓಲೈಕೆ' ಎಂಬ ಟೀಕೆ ವ್ಯಕ್ತವಾಗಿರುವ ಬೆನ್ನಲ್ಲೇ, ಗೃಹ ಸಚಿವ ಜಿ. ಪರಮೇಶ್ವರ್ ಅವರು ಸರ್ಕಾರದ ನಿರ್ಧಾರವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. "ಇದು ಅಲ್ಪಸಂಖ್ಯಾತರ ಓಲೈಕೆಯ ಪ್ರಶ್ನೆಯಲ್ಲ. ಸಂವಿಧಾನದಲ್ಲಿ ಎಸ್ಸಿ/ಎಸ್ಟಿ ಸಮುದಾಯಗಳಿಗೆ ಮೀಸಲಾತಿ ನೀಡಿರುವುದು ಮತ್ತು ಹಿಂದುಳಿದ ವರ್ಗಗಳನ್ನು ಪರಿಗಣಿಸಿರುವುದು ಅವರನ್ನು ಇತರರಿಗೆ ಸಮಾನರನ್ನಾಗಿ ಮಾಡಲು. ಸಾವಿರಾರು ವರ್ಷಗಳಿಂದ ನಿರ್ಲಕ್ಷ್ಯಕ್ಕೊಳಗಾದ ಸಮುದಾಯಗಳನ್ನು ಮೇಲೆತ್ತಲು ಇಂತಹ ಪ್ರೋತ್ಸಾಹ ಅಗತ್ಯ," ಎಂದು ಅವರು ಹೇಳಿದ್ದಾರೆ. ಉರ್ದು ಮಾಧ್ಯಮದ ಮಕ್ಕಳು ಇತರರೊಂದಿಗೆ ಸಮಾನವಾಗಿ ಬೆಳೆಯಬೇಕು ಎಂಬ ಉದ್ದೇಶದಿಂದ ಸರ್ಕಾರ ಇಂತಹ ಕಾರ್ಯಕ್ರಮಗಳ ಮೂಲಕ ಸಣ್ಣ ಪ್ರೋತ್ಸಾಹ ನೀಡುತ್ತಿದೆ. ಇದನ್ನು ಸಹಿಸದಿದ್ದರೆ, ನೀವು ಸಮಾನತೆಯ ವಿರೋಧಿಗಳು ಎಂದು ಅರ್ಥವಾಗುತ್ತದೆ ಎಂದು ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಈ ಹಿಂದೆಯೂ 2002ರ ಅಕ್ಟೋಬರ್ 31ರಂದು ಹೊರಡಿಸಲಾಗಿದ್ದ ಆದೇಶದಲ್ಲಿ ಉರ್ದು ಶಾಲೆಗಳಿಗೆ ಬೆಳಿಗ್ಗೆ ತರಗತಿ ನಡೆಸಲು ಅವಕಾಶ ನೀಡಲಾಗಿತ್ತು. ಇದೀಗ 2026ರ ಜನವರಿ 17ರಂದು ಸಂಘ ಸಲ್ಲಿಸಿದ ಮನವಿಯ ಮೇರೆಗೆ, ರಂಜಾನ್ ಆಚರಣೆಯ ದೃಷ್ಟಿಯಿಂದ ವಿಷಯವನ್ನು ಮರುಪರಿಶೀಲಿಸಿ ಜನವರಿ 30ರಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications