Karnataka Mini Airport: ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ 'ಮಿನಿ ಏರ್ಪೋರ್ಟ್'
ಬೆಂಗಳೂರು, ಡಿಸೆಂಬರ್ 26: ಕರ್ನಾಟಕದಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಸಜ್ಜಾಗಿರುವ ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 'ಮಿನಿ ಏರ್ಪೋರ್ಟ್' ನಿರ್ಮಿಸುವ ಯೋಜನೆಗೆ ಕೈ ಹಾಕಿದೆ. ಆರಂಭಿಕ ಹಂತದಲ್ಲಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಜಾಗ ಅಂತಿಮ ಮಾಡಿರುವ ಸರ್ಕಾರ ಡಿಪಿಆರ್ ಸಿದ್ಧಪಡಿಸುವಲ್ಲಿ ನಿರತವಾಗಿದೆ. ಭವಿಷ್ಯದಲ್ಲಿ ಇದರಿಂದ ಪ್ರವಾಸೋದ್ಯಮಕ್ಕೆ ಭಾರೀ ಉತ್ತೇಜನ ಸಿಗುವ ವಿಶ್ವಾಸ ಇದೆ.
ಪ್ರವಾಸೋದ್ಯಮ ಬೆಂಬಲಿಸುವುದು ಮಾತ್ರವಲ್ಲದೇ ಕೈಗಾರಿಕೆ ಅಭಿವೃದ್ಧಿ, ನೈಸರ್ಗಿಕ ವಿಕೋಪಗಳು ಎದುರಾದ ಸಂದರ್ಭದಲ್ಲಿ ತ್ವರಿತಗತಿಯಲ್ಲಿ ಪ್ರತಿಕ್ರಿಯಿಸುವ ಸಂಬಂಧ ಮಿನಿ ಏರ್ಪೋರ್ಟ್ ಸ್ಥಾಪಿಸಲು ನಿರ್ಧರಿಸಲಾಗಿದೆ. ಯಾವೆಲ್ಲ ಜಿಲ್ಲೆಗಳಲ್ಲಿ ಪ್ರಸ್ತುತದಲ್ಲಿ ವಿಮಾನ ನಿಲ್ದಾಣಗಳನ್ನು ಹೊಂದಿಲ್ಲವೇ ಅಂತಹ ಜಿಲ್ಲೆಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆಯು 'ಏರ್ಸ್ಟ್ರಿಪ್' ನಿರ್ಮಿಸಲು ಮುಂದಾಗಿದೆ.

ಈಗಾಗಲೇ ಮೂರು ಜಿಲ್ಲೆಗಳಲ್ಲಿ ಈ ಮಿನಿ ಏರ್ಪೋರ್ಟ್ ಅಥವಾ ಏರ್ಸ್ಟ್ರಿಪ್ ಸ್ಥಾಪಿಸಲು ಸಿದ್ಧತೆ ಆರಂಭಿಸಿದೆ. ಎರಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗಿನಲ್ಲಿ ಸರ್ಕಾರ ಜಾಗವನ್ನು ಹುಡುಕಿ ಇಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಜಾಗ ಗುರುತಿಸುವುದು ಬಾಕಿ ಇದೆ. ಶೀಗ್ರವೇ ಇಲ್ಲಿ ಜಾಗ ಅಂತಿಮಗೊಳ್ಳುವ ನಿರೀಕ್ಷೆ ಇದೆ.
ಏರ್ಸ್ಟ್ರಿಪ್: ಸಾರ್ವಜನಿಕ ಹಾರಾಟಕ್ಕೆ ಅವಕಾಶ ಇದೆಯೆ?
ಈ ಮೂರು ಕಡೆಗಳಲ್ಲಿ ನಿರ್ಮಾಣವಾಗುತ್ತಿದ್ದಂತೆ ರಾಜ್ಯದಲ್ಲಿ ಏರ್ಪೋರ್ಟ್ ಇಲ್ಲದ ಇತರ ಜಿಲ್ಲೆಗಳಲ್ಲಿ 'ಏರ್ಸ್ಟ್ರಿಪ್' ಅಭಿವೃದ್ಧಿಪಡಿಸಲು ಇಲಾಖೆ ನಿರ್ಧರಿಸಿದೆ. ಈ 'ಏರ್ಸ್ಟ್ರಿಪ್' ಅನ್ನು ಸಾರ್ವಜನಿಕ ವಾಯು ಹಾರಾಟ ಸೇವೆ ಬಳಕೆ ಮಾಡದೇ, ಖಾಸಗಿ ಹಾಗೂ ಸರ್ಕಾರಿ ಕಾರ್ಯ ಚಟುವಟಿಕೆಗಳಿಗೆ ವಿಮಾನಗಳ ಹಾರಾಟ, ಇಳಿಸುವಿಕೆಗೆ ಬಳಕೆ ಮಾಡಲು ನಿರ್ಧರಿಸಲಾಗಿದೆ ಎಂದು ಸರ್ಕಾರಿ ಮೂಲಗಳು ಮಾಹಿತಿ ನೀಡಿವೆ.
ಕರ್ನಾಟಕ ಬಜೆಟ್ನಲ್ಲಿ ಘೋಷಣೆ
ಏರ್ಸ್ಟ್ರಿಪ್ ಅಭಿವೃದ್ಧಿ ಯೋಜನೆಯನ್ನು ಕಳೆದ 2023-2024ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ನಲ್ಲಿ ಸರ್ಕಾರ ಘೋಷಿಸಿತ್ತು. ಇದೀಗ ಘೊಷಣೆಯಂತೆ ಕಾರ್ಯೋನ್ಮುಖವಾದ ಸರ್ಕಾರ, ಅಗತ್ಯ ಸಿದ್ಧತೆ ಆರಂಭಿಸಿದೆ.
ಮಳೆ ಹಾನಿ, ಪ್ರವಾಹ ಇನ್ನಿತರ ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ಸರ್ಕಾರ, ವಿಪತ್ತು ನಿರ್ವಹಣೆ, ರಕ್ಷಣಾ ತಂಡ ಇನ್ನಿತರ ತ್ವರಿತ ಪ್ರತಿಕ್ರಿಯೆಗೆ ಈ ಮಿನಿ ಏರ್ಪೋರ್ಟ್ ಸಹಾಯಕವಾಗಲಿದೆ. ತುರ್ತು ವೇಳೆ ರಸ್ತೆ ಸಾರಿಗೆಗಿಂತಲೂ ಈ ವಾಯು ಸಾರಿಗೆ ಮೂಲಕ ಆಯಾ ಜಿಲ್ಲೆ ತಲುಪಲು ಸಾಧ್ಯವಾಗುತ್ತದೆ. ಈ ಕಾರಣದಿಂದ ಎಲ್ಲ ಜಿಲ್ಲೆಗಳಲ್ಲಿ ಏರ್ಸ್ಟ್ರಿಪ್ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ.
ಎಷ್ಟು ಎಕರೆ ಭೂಮಿ ಬೇಕು
ಈ ಮಿನಿ ಏರ್ಪೋರ್ಟ್ ಬೃಹತ್ ಏರ್ಪೋರ್ಟ್ ರೀತಿಯಲ್ಲಿ ಇರುವುದಿಲ್ಲ. ಬದಲಾಗಿ ಒಂದು ರನ್ವೇ ಇರಲಿದೆ. ಏರ್ ಟ್ರಾಪಿಕ್ ಕಂಟ್ರೋಲರ್ ಇರುತ್ತದೆ. ಇದಕ್ಕಾಗಿ ಒಟ್ಟು 140 ಎಕರೆ ಭೂಮಿ ಬೇಕಾಗುತ್ತದೆ. ಅಗತ್ಯವಿರುವ ಎಲ್ಲ ಮೂಲ ಸೌಕರ್ಯ ನಿರ್ಮಿಸಲಾಗುವುದು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Davanagere By Election: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ: ಸಿ.ಎಂ ಸಿದ್ದರಾಮಯ್ಯ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು











Click it and Unblock the Notifications