ಉದ್ಯೋಗಿಗಳ ಜೇಬಿಗೆ ಕರ್ನಾಟಕ ಸರ್ಕಾರದ ಕತ್ತರಿ, ತೆರಿಗೆ ಏರಿಕೆ
ಬೆಂಗಳೂರು, ಮಾರ್ಚ್ 06: ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ಬಜೆಟ್ ಮಂಡನೆ ಮಾಡುವ ಮೊದಲೇ ಕರ್ನಾಟಕದಲ್ಲಿ ಸಂಬಳ ಪಡೆಯುವ ಉದ್ಯೋಗಿಗಳ ಜೇಬಿಗೆ ಕತ್ತರಿ ಹಾಕಿದ್ದಾರೆ. ಮಾರ್ಚ್ 7ರ ಶುಕ್ರವಾರ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದು, ಇನ್ನಷ್ಟು ತೆರಿಗೆ ಏರಿಕೆಯನ್ನು ನಿರೀಕ್ಷೆ ಮಾಡಲಾಗಿದೆ. ಜನರು ಬಜೆಟ್ನಲ್ಲಿ ಇನ್ನು ಯಾವ ಬೆಲೆ ಜಾಸ್ತಿ ಆಗಲಿದೆ ಎಂದು ಲೆಕ್ಕಾಚಾರ ಹಾಕುತ್ತಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವೃತ್ತಿಪರ ತೆರಿಗೆಯನ್ನು ಏರಿಕೆ ಮಾಡಲು ಅನುಮತಿ ನೀಡಲಾಗಿದೆ. 100 ರೂ. ತೆರಿಗೆ ಏರಿಕೆಯಾಗಲಿದ್ದು, ಈ ಕುರಿತು ಶೀಘ್ರವೇ ಆದೇಶ ಪ್ರಕಟವಾಗಲಿದೆ. ವೇತನ ಪಡೆಯುವ ಎಲ್ಲರೂ ಈ ತೆರಿಗೆ ಪಾವತಿಸಬೇಕು.

ರಾಜ್ಯ ಸರ್ಕಾರ ಸಂಬಳ ಪಡೆಯುವ ವ್ಯಕ್ತಿಗಳು, ವೃತ್ತಿಪರರು ಅಥವಾ ಯಾವುದೇ ವ್ಯಾಪಾರ ಅಥವಾ ಉದ್ಯೋಗದಲ್ಲಿ ತೊಡಗಿರುವ ವ್ಯಕ್ತಿಗಳ ಮೇಲೆ ವಿಧಿಸುವ ತೆರಿಗೆಯೇ ವೃತ್ತಿಪರ ತೆರಿಗೆಯಾಗಿದೆ. ಸದ್ಯ 200 ರೂ. ವೃತ್ತಿಪರ ತೆರಿಗೆ ರಾಜ್ಯದಲ್ಲಿದ್ದು, ಇದು 300 ರೂ.ಗಳಿಗೆ ಏರಿಕೆಯಾಗಲಿದೆ.
ವಿಧೇಯಕಕ್ಕೆ ತಿದ್ದುಪಡಿ: ಕರ್ನಾಟಕದಲ್ಲಿ ವೃತ್ತಿಪರ ತೆರಿಗೆಯನ್ನು ಏರಿಕೆ ಮಾಡಲು 'ಕರ್ನಾಟಕ ವೃತ್ತಿ, ಕಸುಬು, ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆ ತಿದ್ದುಪಡಿ ವಿಧೇಯಕ-2025' ಮಂಡಿಸಿ ಅನುಮೋದನೆ ಪಡೆಯಲಾಗುತ್ತದೆ.
ರಾಜ್ಯದಲ್ಲಿ ಪ್ರಸ್ತುತ ಮಾಸಿಕ 15,000 ರೂ.ಗಳಿಗಿಂತ ಹೆಚ್ಚು ಆದಾಯಗಳಿಸುವ (ಉದ್ಯೋಗ, ವೃತ್ತಿ, ವ್ಯಾಪಾರ) ಮಾಡುವ ವ್ಯಕ್ತಿಗಳು ಮಾಸಿಕ 200 ರೂ. ವೃತ್ತಿಪರ ತೆರಿಗೆಯನ್ನು ಪಾವತಿ ಮಾಡಬೇಕು.
ವರ್ಷದ 11 ತಿಂಗಳು 200 ರೂ. ಮತ್ತು ಒಂದು ತಿಂಗಳು ಮಾತ್ರ 300 ರೂ. ಸೇರಿಸಿ
ವಾರ್ಷಿಕ 2,500 ರೂ. ತೆರಿಗೆಯನ್ನು ರಾಜ್ಯ ಸರ್ಕಾರಕ್ಕೆ ಪಾವತಿ ಮಾಡಬೇಕು. ಈಗ ಕರ್ನಾಟಕ ಸರ್ಕಾರ ಈ ತೆರಿಗೆಯನ್ನು ಮಾಸಿಕ 300 ರೂ. ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.
ಕರ್ನಾಟಕದ ಬಜೆಟ್ ಅಧಿವೇಶನ ಮಾರ್ಚ್ 21ರ ತನಕ ನಡೆಯಲಿದೆ. ವೃತ್ತಿಪರ ತೆರಿಗೆಯನ್ನು ಏರಿಕೆ ಮಾಡಲು 'ಕರ್ನಾಟಕ ವೃತ್ತಿ, ಕಸುಬು, ಆಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆ ತಿದ್ದುಪಡಿ ವಿಧೇಯಕ-2025'ವನ್ನು ಈ ಬಾರಿಯ ಅಧಿವೇಶನದಲ್ಲಿಯೇ ಮಂಡನೆ ಮಾಡಿ, ಒಪ್ಪಿಗೆ ಪಡೆಯುವ ನಿರೀಕ್ಷೆ ಇದೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗಾಗಲೇ ಸರ್ಕಾರಿ ಬಸ್ ಪ್ರಯಾಣ ದರ, ನಮ್ಮ ಮೆಟ್ರೋ ಪ್ರಯಾಣ ದರವನ್ನು ಏರಿಕೆ ಮಾಡಿದೆ. ಹಾಲಿನ ದರ, ಆಟೋ ಪ್ರಯಾಣ ದರ ಯಾವುದೇ ಕ್ಷಣದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಜಲಮಂಡಳಿ ನೀರಿನ ದರವನ್ನು ಏರಿಕೆ ಮಾಡಲು ತಯಾರಿ ನಡೆದಿದೆ.
ಬಜೆಟ್ ಮಂಡನೆ ಮಾಡುವ ಮೊದಲೇ ಸಿದ್ದರಾಮಯ್ಯ ವೃತ್ತಿಪರ ತೆರಿಗೆ ಏರಿಕೆಗೆ ಒಪ್ಪಿಗೆ ನೀಡಿದ್ದಾರೆ. ಶುಕ್ರವಾರ ಮಂಡನೆ ಮಾಡುವ ಬಜೆಟ್ನಲ್ಲಿ ರಾಜ್ಯದ ಬೊಕ್ಕಸ ತುಂಬಿಸಲು ಹೊಸದಾಗಿ ಯಾವ ತೆರಿಗೆ ಏರಿಕೆ ಮಾಡುತ್ತಾರೆ ಎಂದು ಕಾದು ನೋಡಬೇಕಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications