ಸ್ವಿಗ್ಗಿ-ಜೊಮ್ಯಾಟೋ, ಓಲಾ-ಉಬರ್ಗೆ ರಾಜ್ಯ ಸರ್ಕಾರದಿಂದ ಶಾಕ್!
ಕರ್ನಾಟಕ ಸರ್ಕಾರವು ಸ್ವಿಗ್ಗಿ, ಜೊಮಾಟೊ, ಡಂಜೊ ಮತ್ತು ಓಲಾ ಮುಂತಾದ ಅಗ್ರಿಗೇಟರ್ ಪ್ಲಾಟ್ಫಾರ್ಮ್ಗಳ ಪ್ರತಿಯೊಂದು ವಹಿವಾಟಿನ (ಸಾಗಾಟ) ಮೇಲೆ ಸೆಸ್ ವಿಧಿಸಲು ಚಿಂತನೆ ನಡೆಸಿದೆ. ಈ ಬಗ್ಗೆ ಪರ ವಿರೋಧದ ಚರ್ಚೆಗಳು ಜೋರಾಗಿ ನಡೆಯುತ್ತಿದೆ.
ಜೊಮ್ಯಾಟೋ, ಸ್ವಿಗ್ಗಿ, ಜೆಪ್ಟೊ, ಓಲಾ, ಉಬರ್, ರಾಪಿಡೊ, ಅಮೇಜಾನ್ ಮತ್ತು ಫ್ಲಿಪ್ಕಾರ್ಟ್ನಂತಹ ಅಗ್ರಿಗೇಟರ್ ಪ್ಲಾಟ್ಫಾರ್ಮ್ಗಳ ವಹಿವಾಟುಗಳ ಮೇಲೆ ಶೇ 1ರಿಂದ ಶೇ 2ರಷ್ಟು ಸೆಸ್ ವಿಧಿಸುವ ಹೊಸ ನಿಯಮ ಪರಿಚಯಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್, ಸ್ವಿಗ್ಗಿ, ಜೊಮಾಟೊ, ಡಂಜೊ ಮತ್ತು ಓಲಾ ಮುಂತಾದ ಅಗ್ರಿಗೇಟರ್ ಪ್ಲಾಟ್ಫಾರ್ಮ್ಗಳ ಪ್ರತಿಯೊಂದು ವಹಿವಾಟಿನ ಮೇಲೆ ಸೆಸ್ ವಿಧಿಸಲು ರಾಜ್ಯ ಸರ್ಕಾರ ಪ್ರಸ್ತಾಪಿಸಿದ್ದು, ಗಿಗ್ ಕಾರ್ಮಿಕರಿಗಾಗಿ ಕಲ್ಯಾಣ ನಿಧಿ ರಚಿಸಲಾಗುವುದು ಎಂದು ಹೇಳಿದ್ದಾರೆ.
ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಆಹಾರ ವಿತರಣೆ, ಲಾಜಿಸ್ಟಿಕ್ಸ್, ಇ-ಕಾಮರ್ಸ್ ಇತ್ಯಾದಿ ಸೇವೆಗಳಂತಹ ಅಗ್ರಿಗೇಟರ್ ಪ್ಲಾಟ್ಫಾರ್ಮ್ಗಳ ಮೇಲಿನ ಪ್ರತಿಯೊಂದು ವಹಿವಾಟಿನ ಮೇಲೆ ಸೆಸ್ ವಿಧಿಸಲು ನಿರ್ಧರಿಸಿದೆ. ಹಣವನ್ನು ಗಿಗ್ ಕಾರ್ಮಿಕರ ಕಲ್ಯಾಣ ನಿಧಿಗೆ ಬಳಸುವುದಾಗಿ ಹೇಳಿಕೊಂಡಿದೆ.

ಇನ್ನು ರಾಜ್ಯ ಸರ್ಕಾರದ ಸೆಸ್ ಕೇವಲ ಸಾಗಣೆಗೆ ಮಾತ್ರ ವಿಧಿಸಲಾಗುವುದೇ ಹೊರತು ಖರೀದಿಸಿದ ಉತ್ಪನ್ನಕ್ಕೆ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ. ಗ್ರಾಹಕರು ಖರೀದಿಸುವ ಉತ್ಪನ್ನಗಳು ಅಥವಾ ಸರಕುಗಳಿಗೆ ನಾವು ಯಾವುದೇ ತೆರಿಗೆ ವಿಧಿಸುತ್ತಿಲ್ಲ. ಬದಲಾಗಿ ಅವುಗಳ ಸಾಗಾಟದ ಮೇಲೆ ಮಾತ್ರವೇ ಸೆಸ್ ವಿಧಿಸಲಾಗುತ್ತದೆ ಎಂದು ಸಚಿವ ಸಂತೋಷ್ ಲಾಡ್ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕದ ಕಾರ್ಮಿಕ ಇಲಾಖೆಯು ಜೊಮಾಟೊ, ಡಂಜೊ, ಸ್ವಿಗ್ಗಿ, ಜೆಪ್ಟೊ, ಓಲಾ ಮತ್ತು ಇತರ ಅಗ್ರಿಗೇಟರ್ ಪ್ಲಾಟ್ಫಾರ್ಮ್ಗಳ ಮೇಲಿನ ಪ್ರತಿಯೊಂದು ವಹಿವಾಟಿನ ಮೇಲೆ ಸೆಸ್ ವಿಧಿಸಿ, ಅದರಿಂದ ಸಂಗ್ರಹವಾಗುವ ಹಣವನ್ನು ಗಿಗ್ ಕಾರ್ಮಿಕರ ಕಲ್ಯಾಣ ನಿಧಿಗೆ ಬಳಸಲಾಗುತ್ತದೆ ಎಂದೂ ಹೇಳಿದ್ದಾರೆ.
ಈ ಅಗ್ರಿಗೇಟರ್ಗಳ ಸೇವೆಗಳ ಮೇಲೆ ಸೆಸ್ ವಿಧಿಸುವುದರಿಂದ ಆ ಸೇವೆಗಳು ಹಾಗೂ ಗ್ರಾಹಕರು ಖರೀದಿಸುವ ಉತ್ಪನ್ನಗಳ ಬೆಲೆ ಕೂಡ ಹೆಚ್ಚಾಗುವ ಸಾಧ್ಯತೆಯೂ ಇದೆ. ಸೆಸ್ ಅನ್ನು ಗ್ರಾಹಕರ ವೇದಿಕೆಗಳಿಂದಲೇ ಸಂಗ್ರಹಿಸಲಾಗುತ್ತದೆ. ಅಗ್ರಿಗೇಟರ್ಗಳು ಸೆಸ್ ಅನ್ನು ಕಲ್ಯಾಣ ಮಂಡಳಿಗೆ ವರ್ಗಾಯಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ. ಅಲ್ಲದೆ ಪ್ರತಿ ವಹಿವಾಟಿನ ಮೇಲೆ ಸೆಸ್ ಅನ್ವಯಿಸುವುದರಿಂದ ಗ್ರಾಹಕರ ಮೇಲೂ ಹೆಚ್ಚು ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಬಿಜೆಪಿ ನಾಯಕರಿಂದ ಆಕ್ಷೇಪವೂ ವ್ಯಕ್ತವಾಗಿದೆ. ಸರ್ಕಾರದ ಈ ನಿರ್ಧಾರವನ್ನು ಕರ್ನಾಟಕ ವಿಧಾನ ಪರಿಷತ್ ವಿಪಕ್ಷ ನಾಯಕ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿ ಖಂಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ. ಅವರ ಖಜಾನೆಯಲ್ಲಿ ಒಂದು ನಯಾಪೈಸೆಯೂ ಇಲ್ಲ. ಅವರ ಬಳಿ ಹಣವಿಲ್ಲದ ಕಾರಣ ಸ್ವಿಗ್ಗಿ, ಉಬರ್ ಇತ್ಯಾದಿಗಳ ಮೇಲೆ ಈ ರೀತಿಯ ತೆರಿಗೆಯನ್ನು ವಿಧಿಸಲು ಅವರು ಬಯಸಿದ್ದಾರೆ. ಹೇಗಾದರೂ ಮಾಡಿ ಹಣ ದೋಚುವುದೇ ಅವರ ಉದ್ದೇಶ ಎಂದಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications