ಗಣಿಗಾರಿಕೆ ಆರಂಭಕ್ಕೆ ಸಿದ್ದರಾಮಯ್ಯ ಸರ್ಕಾರ ಚಿಂತನೆ
ಬೆಂಗಳೂರು,ಜು.14: ಹಟ್ಟಿ ಚಿನ್ನದ ಗಣಿ, ಕೆಜಿಎಎಫ್, ಕುದುರೆಮುಖ ಕಬ್ಬಿಣ ಅದಿರು ಗಣಿಗಾರಿಕೆ ಹೀಗೆ ಚಿನ್ನ, ಕಬ್ಬಿಣ, ತಾಮ್ರ ಸೇರಿದಂತೆ ಯಾವುದೇ ಗಣಿಗಾರಿಕೆ ಇರಲಿ ಲಾಭದಾಯಕ ಎಂದು ಕಂಡು ಬಂದರೆ ಪುನರ್ ಆರಂಭ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸದನದಲ್ಲಿ ಘೋಷಿಸಿದರು.
ರಾಯಚೂರು ಜಿಲ್ಲೆ ಹಟ್ಟಿ ಚಿನ್ನದ ಗಣಿ ಘಟಕ ವ್ಯಾಪ್ತಿಗೆ ಬರುವ ಚಿತ್ರದುರ್ಗ ಜಿಲ್ಲೆ ಹಿಂಗಳಹಾಳ ಗ್ರಾಮದ ಎರಡು ತಾಮ್ರದ ಗಣಿಗಳು ಹಾಗೂ ತುಮಕೂರು ಜಿಲ್ಲೆ ಅಚ್ಚನಹಳ್ಳಿ ಚಿನ್ನದ ಗಣಿಯನ್ನು ಸ್ಥಗಿತಗೊಳಿಸಲಾಗಿತ್ತು ಈ ಗಣಿಗಾರಿಕೆ ಲಾಭದಾಯಕ ಎಂದು ಕಂಡು ಬಂದರೆ ಗಣಿಗಾರಿಕೆ ಮರುಪ್ರಾರಂಭಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದರು. [ಉಕ್ಕು ಕಾರ್ಖಾನೆಗೆ 18 ಸಾವಿರ ಕೋಟಿ ರು ಹೂಡಿಕೆ]

ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪ್ರಶ್ನೆಗೆ ಉತ್ತರಿಸಿದ ಅವರು, ಈ ಗಣಿ ಮರುಸ್ಥಾಪನೆ ಬಗ್ಗೆ ಪ್ರಸ್ತಾವನೆ ಇಲ್ಲ. ಗಣಿ ಗುತ್ತಿಗೆ ಅವಶ್ಯವಿರುವ ಶಾಸನಬದ್ಧ ಅನುಮತಿ ಪಡೆಯುವ ಪ್ರಕ್ರಿಯೆ ಜಾರಿಯಲ್ಲಿದೆ. ಆರ್ಥಿಕವಾಗಿ ಲಾಭದಾಯಕ ಎಂದು ಕಂಡುಬಂದಲ್ಲಿ ಗಣಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು. [ಮೇಕ್ ಇನ್ ಕರ್ನಾಟಕ ಎಂದ ಸಿದ್ದರಾಮಯ್ಯ]
1993-94ರಲ್ಲಿ ತಾಮ್ರದ ಗಣಿ ಸ್ಥಗಿತಗೊಂಡಿದ್ದರೆ, 2002ರಲ್ಲಿ ಚಿನ್ನದ ಗಣಿ ಸ್ಥಗಿತಗೊಂಡಿದೆ. ಗಣಿಯಲ್ಲಿ ಕೆಲಸ ಮಾಡುತ್ತಿದ್ದ 504 ಮಂದಿ ಅಧಿಕಾರಿ ಮತ್ತು ಕಾರ್ಮಿಕರಿಗೆ ಸ್ವಯಂ ನಿವೃತ್ತಿ ಯೋಜನೆಯಡಿ ಆರ್ಥಿಕ ನೆರವು ನೀಡಲಾಗಿದೆ ಎಂದರು.
ಒಂದು ಕಾಲದಲ್ಲಿ ಸತತವಾಗಿ ಒಂದು ಸಾವಿರ ಕೋಟಿ ರೂ. ಲಾಭ ಪಡೆಯುತ್ತಿದ್ದ ಹಟ್ಟಿ ಚಿನ್ನದ ಗಣಿ ಸ್ಥಗಿತಗೊಂಡು 15 ವರ್ಷ ಮೇಲಾಗಿದೆ. ಇದೇ ರೀತಿ ಕೋಲಾರ್ ಗೋಲ್ಡ್ ಮೈನ್ಸ್(ಕೆಜಿಎಫ್), ಕೆಐಒಸಿಎಲ್ ಕೂಡಾ ಕಾರ್ಯ ನಿರ್ವಹಿಸುತ್ತಿಲ್ಲ.
ಆದರೆ, ಎಲ್ಲಾ ಗಣಿಗಳ ಸ್ಥಗಿತದಿಂದ ಪರಿಶಿಷ್ಟ ಜಾತಿ, ಪಂಗಡದ ಕುಟುಂಬಗಳು ಸಂತ್ರಸ್ತರಾಗಿದ್ದಾರೆ. ಹಟ್ಟಿ ಚಿನ್ನದ ಗಣಿ(ಎಚ್ ಜಿಎಂಎಲ್) ನಂಬಿಕೊಂಡಿದ್ದ 500ಕ್ಕೂ ಅಧಿಕ ಕುಟುಂಬ ನೋವಿನಲ್ಲಿದೆ. ಎಲ್ಲಾ ಗಣಿಗಳು ಲಾಭದಾಯಕವೇ ಇಲ್ಲವೇ ಎಂಬುದನ್ನು ಪರಿಶೀಲಿಸಿ ಕೂಡಲೇ ಕ್ರಮ ಜರುಗಿಸುವಂತೆ ಶಾಸಕ ತಿಪ್ಪಾರೆಡ್ಡಿ ಕೋರಿಕೊಂಡರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications