BPL Card: ಬಿಪಿಎಲ್ ಕಾರ್ಡ್ ವಿತರಣೆ: ಸಚಿವ ಕೆ.ಎಚ್. ಮುನಿಯಪ್ಪ ಮಹತ್ವದ ಹೇಳಿಕೆ
ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಜಾರಿಯಾದ ಬಳಿಕ ಸರ್ಕಾರ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ಗಳಿಗೆ ಅರ್ಜಿ ಸ್ವೀಕರಿಸುವುದನ್ನು ನಿಲ್ಲಿಸಿತ್ತು. ಬಿಪಿಎಲ್ ಕಾರ್ಡ್ ವಿತರಣೆ ಬಗ್ಗೆ ಸರ್ಕಾರ ಈಗ ಮಹತ್ವದ ಸಂದೇಶ ನೀಡಿದೆ. ಅತಿ ಶೀಘ್ರದಲ್ಲೇ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದೆ.
2017 ರಿಂದ ಈ ವರೆಗೆ ಆಹಾರ ಇಲಾಖೆಗೆ 3.9 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಂದಿರುವುದರಿಂದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರ ಚೀಟಿಗಳನ್ನು ನೀಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಮಂಗಳವಾರ ಹೇಳಿದ್ದಾರೆ.

2017 ರಿಂದ 3.9 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಅರ್ಜಿಗಳು ಮತ್ತು 7.11 ಲಕ್ಷ ಎಪಿಎಲ್ ಅರ್ಜಿಗಳು ಬಾಕಿ ಉಳಿದಿವೆ ಎಂದು ಡಿಹೆಚ್ ವರದಿ ಮಾಡಿದೆ. ಈ ಅರ್ಜಿಗಳನ್ನು ಆದ್ಯತೆ ಮೇರೆಗೆ ತೆರವುಗೊಳಿಸಲು ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಸಚಿವ ಮುನಿಯಪ್ಪ ಸುದ್ದಿಗಾರರಿಗೆ ತಿಳಿಸಿದರು.
ಕೇಂದ್ರ ಸರ್ಕಾರ ಇನ್ನೂ ಅನುಮೋದನೆ ನೀಡದ 40 ಲಕ್ಷ ಫಲಾನುಭವಿಗಳಿಗೆ ಅಕ್ಕಿ ನೀಡಲು ಸರ್ಕಾರ ಪ್ರತ್ಯೇಕ ಯೋಜನೆ ರೂಪಿಸುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ ಎಂದು ಡಿಹೆಚ್ ವರದಿ ಮಾಡಿದೆ. ಅವರನ್ನು ಅನ್ನಭಾಗ್ಯ ಯೋಜನೆಯ ವ್ಯಾಪ್ತಿಗೆ ತರಲು ಸರ್ಕಾರ 1680 ಕೋಟಿ ರೂಪಾಯಿ ವ್ಯವಿಸಲಿದೆ ಎಂದು ಹೇಳಿದರು.
ಅಸ್ತಿತ್ವದಲ್ಲಿರುವ 22 ಲಕ್ಷ ಬಿಪಿಎಲ್ ಕಾರ್ಡ್ ಹೊಂದಿರುವವರು ಸತ್ತರೂ ಅಥವಾ ಅವರು ಪ್ರತ್ಯೇಕವಾಗಿ ವಾಸಿಸುತ್ತಿದ್ದರೂ, ಕುಟುಂಬದ ಮುಖ್ಯಸ್ಥರ ಹೆಸರನ್ನು ಕಾರ್ಡ್ನಲ್ಲಿ ಬದಲಾಯಿಸದಿರುವಂತಹ ವಿವಿಧ ಕಾರಣಗಳಿಂದ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಹಣವನ್ನು ಪಡೆಯಲು ಸಾಧ್ಯವಾಗದೆ ಸಹಾಯ ಮಾಡಲು ರಾಜ್ಯವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಚಿವರು ಹೇಳಿದರು.
ಹೆಚ್ಚುವರಿ ಅಕ್ಕಿ ವಿತರಣೆ ತಡ ಆಗಬಹುದು
ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿ ನೀಡಲು ಇನ್ನೂ ಹಲವು ತಿಂಗಳು ತಡವಾಗಬಹುದು ಎಂದು ಸಚಿವ ಮುನಿಯಪ್ಪ ಹೇಳಿದರು. ಬಿಪಿಎಲ್ ಕಾರ್ಡ್ದಾರರಿಗೆ ಹೆಚ್ಚುವರಿ ಅಕ್ಕಿ ಬದಲು ಹಣ ಹಾಕಲಾಗುತ್ತಿದೆ. ಒಂದು ಕೋಟಿ ಕುಟುಂಬಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಪಡಿತರ ವ್ಯವಸ್ಥೆಯನ್ನು ಸುಲಭವಾಗಿಸಲು ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸಚಿವರು ಹೇಳಿದರು. ಅರ್ಹರಿಗೆ ಅನುಕೂಲ ಮಾಡಿಕೊಡುವುದು ಮತ್ತು ಅನರ್ಹರು ಈ ಯೋಜನೆ ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆಯಲು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.












Click it and Unblock the Notifications