Get Updates
Get notified of breaking news, exclusive insights, and must-see stories!

KAS Officers Transfer: ರಾಜ್ಯ ಸರ್ಕಾರದಿಂದ 6 ಮಂದಿ ಕೆಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

KAS Officers Transfer: ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಸರ್ಜರಿ ಮಾಡುತ್ತಲಿರುತ್ತದೆ. ಹಾಗೆಯೇ ಇದೀಗ ಮತ್ತೆ 6 ಮಂದಿ ಕೆಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರು ಎಲ್ಲಿಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ, ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.

Karnataka Government Transfers Six KAS Officers in Latest Administrative Reshuffle

ಯಾರು ಎಲ್ಲಿಗೆ ವರ್ಗಾವಣೆ?

* ನಂಜುಂಡೇಗೌಡ, ಕೆಎಎಸ್: ಪ್ರಧಾನ ವ್ಯವಸ್ಥಾಪಕರು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ

* ನಂದಿನಿ ಪಿ.ಎಂ ಕೆ.ಎ.ಎಸ್ (ಹಿರಿಯ ಶ್ರೇಣಿ) ಅವರನ್ನು ನಿರ್ದೇಶಕರು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಇಲ್ಲಿಂದ ವಿಶೇಷ ಭೂಸ್ವಾಧೀನಾಧಿಕಾರಿ-6, ಡಾ.ಶಿವರಾಮ್‌ ಕಾರಂತ ಬಡಾವಣೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಇಲ್ಲಿಗೆ ನೇಮಕ ಮಾಡಲಾಗಿದೆ.

* ಸಿದ್ದಪ್ಪ ಹುಲ್ಲೋಳಿ ಅವರನ್ನು ಕೆ.ಎ.ಎಸ್ (ಕಿರಿಯ ಶ್ರೇಣಿ), ಮುಖ್ಯ ಆಡಳಿತಾಧಿಕಾರಿ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಳಗಾವಿ ಇಲ್ಲಿಂದ ಉಪ ಆಯುಕ್ತರು, ಮಹಾನಗರ ಪಾಲಿಕೆ ಬೆಳಗಾವಿ, ಶ್ರೀಮತಿ ರೇಷ್ಮಾ ತಾಳಿಕೋಟೆ, ಕೆ.ಎ.ಎಸ್ ಇವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಳಕ್ಕೆ ನೇಮಕ ಮಾಡಲಾಗಿದೆ. ಕಾರ್ಯದರ್ಶಿ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ, ಸವದತ್ತಿ, ಬೆಳಗಾವಿ ಜಿಲ್ಲೆ ಇಲ್ಲಿನ ಹುದ್ದೆಗೆ ಕ.ನಾ.ಸೇ ನಿಯಮ-68ರ ಅನ್ವಯ ಅಧಿಕ ಪ್ರಭಾರದಲ್ಲಿ ಮುಂದುವರೆಸಿದೆ.

* ರೇಷ್ಮಾ ತಾಳಿಕೋಟೆ ಅವರನ್ನು ಕೆ.ಎ.ಎಸ್ (ಕಿರಿಯ ಶ್ರೇಣಿ) ಉಪ ಆಯುಕ್ತರು ಮಹಾನಗರ ಪಾಲಿಕೆ, ಬೆಳಗಾವಿ ಇಲ್ಲಿಂದ ಮುಖ್ಯ ಆಡಳಿತಾಧಿಕಾರಿ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬೆಳಗಾಳಿ ಡಾ.ಸಿದ್ಧಪ್ಪ ಹುಲ್ಲೋಳಿ, ಕೆ.ಎ.ಎಸ್ (ಕಿರಿಯ ಶ್ರೇಣಿ) ಇವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಳಕ್ಕೆ ನೇಮಕ ಮಾಡಲಾಗಿದೆ.

* ಶಿವಾನಂದ ಪಿ ಸಾಗರ್ ಅವರನ್ನು ಕೆ.ಎ.ಎಸ್ (ಕಿರಿಯ ಶ್ರೇಣಿ) ಸಹಾಯಕ ಆಯುಕ್ತರು ವಿಶೇಷಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರಿಯವರ ಕಛೇರಿ ಇಲ್ಲಿದೆ ವರ್ಗಾಹಿಸಿರುವ ಆದೇಶವನ್ನು ಮಾರ್ಪಡಿಸಿ ವಿಶೇಷ ಭೂಸ್ವಾಧೀನಾಧಿಕಾರಿ ಮಲಪ್ರಭ ಯೋಜನೆ-3, ಧಾರವಾಡ ಇಲ್ಲಿಗೆ ನೇಮಕ ಮಾಡಲಾಗಿದೆ.

* ಡಾ.ಹಂಪಣ್ಣ ಅವರನ್ನು ಕೆ.ಎ.ಎಸ್ (ಕಿರಿಯ ಶ್ರೇಣಿ), ಸಹಾಯಕ ಕಾರ್ಯದರ್ಶಿ, ಕಲಬುರಗಿ ಜಿಲ್ಲಾ ಪಂಚಾಯತಿ ಇಲ್ಲಿಂದ ಉಪವಿಭಾಗಾಧಿಕಾರಿ, ರಾಯಚೂರು ಇಲ್ಲಿಗೆ ನೇಮಕ ಮಾಡಲಾಗಿದೆ.

ವರ್ಗಾವಣೆ ಮಾಡಿದ ಅಧಿಕಾರಿಗಳ ಪಟ್ಟಿ

* ನಂಜುಡೇಗೌಡ
* ನಂದಿನಿ ಪಿ.ಎಂ
* ಡಾ.ಸಿದ್ಧಪ್ಪ ಹುಲ್ಲೋಳಿ
* ರೇಷ್ಮಾ ತಾಳಿಕೋಟೆ
* ಶಿವಾನಂದ ಪಿ ಸಾಗರ್
* ಡಾ.ಹಂಪಣ್ಣ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+