ಒಂದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದ ಅಣ್ಣಾಮಲೈ!

ಬೆಂಗಳೂರು, ಮೇ. 21: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಭರವಸೆಗಳನ್ನು ಜಾರಿಗೆ ತರಲು ಆದೇಶ ನೀಡಿದೆ. ಇದರ ಜೊತೆಗೆ 15ನೇ ಹಣಕಾಸು ಆಯೋಗದ 5,495 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ರಾಜ್ಯಕ್ಕೆ ಒದಗಿಸದ ಕಾರಣ ರಾಜ್ಯದ ಆರ್ಥಿಕ ನಷ್ಟಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದ ಡಿಕೆ ಶಿವಕುಮಾರ್ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೆ ವೇಳೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಜೊತೆಗೆ ಇನ್ನೂ ಎಂಟು ಶಾಸಕರು ಕರ್ನಾಟಕ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ, ಪಕ್ಷದ ಶಾಸಕರಾದ ಜಿ.ಪರಮೇಶ್ವರ ಮತ್ತು ಎಂ.ಬಿ.ಪಾಟೀಲ್ ಸೇರಿದಂತೆ ಕೆಎಚ್ ಮುನಿಯಪ್ಪ, ಕೆಜೆ ಜಾರ್ಜ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ ಮತ್ತು ಜಮೀರ್ ಅಹಮದ್ ಖಾನ್ ಎಂಟು ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು.

Karnataka Government will Collapse within a year: BJP

ಈ ಸಂದರ್ಭದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಹಿಮಾಚಲ ಸಿಎಂ ಸುಖ್ವಿಂದರ್ ಸಿಂಗ್ ಸುಖು, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್ ಸೇರಿದಂತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿರೋಧ ಪಕ್ಷಗಳ ನಾಯಕರದ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಡಿಸಿಎಂ ತೇಜಸ್ವಿ ಯಾದವ್, ಶರದ್ ಪವಾರ್, ಕಮಲ್ ಹಾಸನ್, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಫಾರೂಕ್ ಅಬ್ದುಲ್ಲಾ ಅವರು ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 'ಪ್ರಣಾಳಿಕೆಯಲ್ಲಿ ಐದು ಭರವಸೆಗಳ ಭರವಸೆ ನೀಡಲಾಗಿದ್ದು, ಮೊದಲ ಸಂಪುಟ ಸಭೆಯ ನಂತರ ಆ ಐದು ಭರವಸೆಗಳ ಅನುಷ್ಠಾನಕ್ಕೆ ಆದೇಶ ನೀಡಲಾಗಿದೆ' ಎಂದು ಹೇಳಿದ್ದಾರೆ. ಅಲ್ಲದೆ, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಸಿದ್ದರಾಮಯ್ಯ ಅವರು ಹಿಂದಿನ ಭಾರತೀಯ ಜನತಾ ಪಕ್ಷದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

"ಈ ಹಿಂದೆ ಆಡಳಿತ ನಡೆಸುತ್ತಿದ್ದ ಸರಕಾರ ನಿರುಪಯುಕ್ತವಾಗಿತ್ತು. ನಮಗೆ ತೆರಿಗೆಯ ಪಾಲು ಸರಿಯಾಗಿ ಸಿಗಲಿಲ್ಲ. ಹಣಕಾಸು ಆಯೋಗದ ಶಿಫಾರಸಿನಂತೆ ಕೇಂದ್ರವು ನಮಗೆ 5,495 ಕೋಟಿ ರೂಪಾಯಿ ನೀಡಬೇಕು' ಎಂದು ಆರೋಪಿಸಿದ್ದರು.

Karnataka Government will Collapse within a year: BJP

ಇನ್ನು ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿರುವ ಸಿದ್ದರಾಮಯ್ಯ ಅವರ ಸರ್ಕಾರ ಒಂದು ವರ್ಷದೊಳಗೆ ಪತನವಾಗಲಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಭವಿಷ್ಯ ನುಡಿದಿದ್ದಾರೆ.

"ಕರ್ನಾಟಕ ಸರ್ಕಾರವು ಒಂದು ವರ್ಷದ ನಂತರ ಪತನವಾಗಲಿದೆ. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ 2024 ರೊಳಗೆ ಹೊಡೆದಾಡದಿದ್ದರೆ, ಇಬ್ಬರಿಗೂ ನೊಬೆಲ್ ಶಾಂತಿ ಪ್ರಶಸ್ತಿ ನೀಡಬೇಕು. ಏಕೆಂದರೆ ಸರ್ಕಾರದ ರಚನೆಯೇ ದೋಷಪೂರಿತವಾಗಿದೆ. ಇಬ್ಬರೂ ನಾಯಕರು 2.5 ವರ್ಷಗಳ ಕಾಲ ಸಿಎಂ ಆಗಿರುತ್ತಾರೆ. ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಎಐಸಿಸಿ ತಲಾ 10 ಮಂತ್ರಿಗಳನ್ನು ಹೊಂದಿದ್ದಾರೆ, ಇದು ಯಾವ ರೀತಿಯ ಸರ್ಕಾರದ ರಚನೆ?' ಎಂದು ಅಣ್ಣಾಮಲೈ ಕಿಡಿಕಾರಿದ್ದಾರೆ.

ಮುಂದುವರೆದು "ಅವರು ಪ್ರತಿಪಕ್ಷಗಳ ಏಕತೆಯ ಬಗ್ಗೆ ಮಾತನಾಡುತ್ತಾರೆ, ಕಾಂಗ್ರೆಸ್‌ನಲ್ಲಿಯೇ ಒಗ್ಗಟ್ಟು ಇಲ್ಲದಿದ್ದಾಗ ಪ್ರತಿಪಕ್ಷಗಳ ನಡುವೆ ಯಾವ ರೀತಿಯ ಒಗ್ಗಟ್ಟು ಇರುತ್ತದೆ? ಅಲ್ಲದೆ, ಪ್ರತಿಪಕ್ಷದ ನಾಯಕರಾದ ಅರವಿಂದ್ ಕೇಜ್ರಿವಾಲ್, ಕೆಸಿಆರ್ ಮತ್ತು ಮಮತಾ ಬ್ಯಾನರ್ಜಿ ಇಂದು ಪ್ರಮಾಣ ವಚನ ಸಮಾರಂಭದಲ್ಲಿ ಇರಲಿಲ್ಲ" ಎಂದು ಉಲ್ಲೇಖಿಸಿದ್ದಾರೆ.

Karnataka Government will Collapse within a year: BJP

ಮತ್ತೊಂದೆಡೆ, ಭಾರತೀಯ ಜನತಾ ಪಕ್ಷವು ಆಡಳಿತ ಪಕ್ಷದ ಘೋಷಣೆಗಳು ಮತ್ತು ಚುನಾವಣಾ ಭರವಸೆಗಳ ನಡುವೆ "ದೊಡ್ಡ ವ್ಯತ್ಯಾಸ' ಇದೆ ಎಂದು ಆರೋಪಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. "ಕಾಂಗ್ರೆಸ್ ಸರಕಾರ ನೀಡಿದ ಭರವಸೆಗಳಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಸಚಿವ ಸಂಪುಟದ ನಂತರ ನೀಡಿದ ಘೋಷಣೆಗಳಿಗೂ ಸಾಕಷ್ಟು ವ್ಯತ್ಯಾಸವಿದೆ. ಜನರು ಸಾಕಷ್ಟು ಘೋಷಣೆಗಳು ಮತ್ತು ತಕ್ಷಣದ ಅನುಷ್ಠಾನವನ್ನು ನಿರೀಕ್ಷಿಸಿದ್ದರು. ಕೆಲವು ಮಹಿಳೆಯರು ಬಸ್ ಗಳಲ್ಲಿ ಉಚಿತ ಪ್ರಯಾಣ ಆರಂಭಿಸಿದ್ದರು. ಇಂದಿನ ಘೋಷಣೆಗಳು ಜನರಿಗೆ ನಿರಾಸೆ ತಂದಿದೆ" ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+