ವಸತಿ ಪ್ರದೇಶದಲ್ಲಿ ಬೇಕಾಬಿಟ್ಟಿ ಟವರ್ ನಿರ್ಮಾಣಕ್ಕೆ ಮೂಗುದಾರ
ವಸತಿ ಪ್ರದೇಶಗಳಲ್ಲಿ ಬೇಕಾಬಿಟ್ಟಿ ಮೊಬೈಲ್ ಫೋನ್ ಟವರ್ ನಿರ್ಮಾಣಕ್ಕೆ ಕಡಿವಾಣ ಹಾಕಲು ಕರ್ನಾಟಕ ಸರಕಾರ ಮುಂದಾಗಿದೆ. ಈ ಕುರಿತು ನಿಯಮಾವಳಿಗಳು ಸದ್ಯದಲ್ಲೇ ಜಾರಿಗೆ ತರಲಿದೆ.
ಬೆಂಗಳೂರು, ಫೆಬ್ರವರಿ 8: ವಸತಿ ಪ್ರದೇಶಗಳಲ್ಲಿ ಬೇಕಾಬಿಟ್ಟಿ ಮೊಬೈಲ್ ಟವರ್ ನಿರ್ಮಾಣಕ್ಕೆ ಕಡಿವಾಣ ಹಾಕಲು ಕರ್ನಾಟಕ ಸರಕಾರ ಮುಂದಾಗಿದೆ. ಈ ಕುರಿತು ನಿಯಮಾವಳಿಗಳು ಸದ್ಯದಲ್ಲೇ ಜಾರಿಗೆ ತರಲಿದೆ.
ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿರುವ ನಗರಾಡಳಿತ ಸಚಿವ ಈಶ್ವರ್ ಖಂಡ್ರೆ ವಸತಿ ಪ್ರದೇಶಗಳಲ್ಲಿ ಟವರ್ ಗಳ ನಿರ್ಮಾಣ ಹೆಚ್ಚಾಗುತ್ತಿರುವುದನ್ನು ನಿಯಂತ್ರಣಕ್ಕೆ ತರಲು ಕರ್ನಾಟಕ ಸರಕಾರ ಚಿಂತನೆ ನಡೆಸಿದೆ. ಇದಕ್ಕಾಗಿ ಈಗಾಗಲೇ ನಿಯಮಾವಳಿಗಳ ಕರಡು ಪ್ರತಿ ಸಿದ್ಧವಾಗಿದೆ ಎಂದಿದ್ದಾರೆ.[ಅಧಿವೇಶನದಲ್ಲಿ ವಿದ್ಯುತ್ ದರ ಏರಿಕೆ ಸುಳಿವು ನೀಡಿದ ಡಿಕೆಶಿ!]

ಸರಿಸುಮಾರು ಒಂದು ವರ್ಷದ ಹಿಂದೆ ಅಂದರೆ ಫೆಬ್ರವರಿ 24, 2016ರಂದೇ ಕರಡು ನಿಯಮಾವಳಿಯನ್ನು ಸಾರ್ವಜನಿಕರ ಮುಂದಿಡಲಾಗಿತ್ತು. ಮತ್ತು ಇದಕ್ಕೆ ಆಕ್ಷೇಪ ಮತ್ತು ತಿದ್ದುಪಡಿಗಳೇನಾದರೂ ಇದ್ದರೆ ಸೂಚಿಸುವಂತೆ ಕೋರಿಕೊಳ್ಳಲಾಗಿತ್ತು. ಇದೀಗ ಅಂತಿಮವಾಗಿ ಜನರ ಅಭಿಪ್ರಾಯ ಪಡೆದುಕೊಂಡು ಅಧಿಸೂಚನೆ ಹೊರಡಿಸಲು ಸರಕಾರ ನಿರ್ಧರಿಸಿದೆ.[ವರ್ಷ 2, ಹೂಡಿಕೆ 67,000ಕೋಟಿ; ಕರ್ನಾಟಕ ದೇಶಕ್ಕೆ ನಂ.1]
"ಈಗಾಗಲೇ ಹಲವು ಟವರುಗಳು ಸರಕಾರದ ಒಪ್ಪಿಗೆ ಇಲ್ಲದೆ ಸ್ಥಾಪನೆಯಾಗಿವೆ. ಆದರೆ ಜನರಿಗೆ ಟವರುಗಳಿಂದ ತೊಂದರೆಯಾಗದಂತೆ ಸರಕಾರ ನೋಡಿಕೊಳ್ಳಲಿದೆ," ಎಂದಿದ್ದಾರೆ. ಒಮ್ಮೆ ನಿಯಮಾವಳಿ ಜಾರಿಗೆ ಬರುತ್ತಿದ್ದಂತೆ ಅವುಗಳ ಪಾಲನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಖಂಡ್ರೆ ಭರವಸೆ ನೀಡಿದ್ದಾರೆ.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications