ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಖಾತೆಗೆ ಹಣ ಹಾಕಲು ಅನುಮತಿ ಕೊಡಿ: ಆಯೋಗಕ್ಕೆ ರಾಜ್ಯ ಪತ್ರ

|
Google Oneindia Kannada News

ಬೆಂಗಳೂರು, ಮಾರ್ಚ್ 27: ಸಾಲಮನ್ನಾ ಫಲಾನುಭವಿ ರೈತರುಗಳ ಖಾತೆಗೆ ಹಣ ಹಾಕಲು ಅವಕಾಶ ಮಾಡಿಕೊಡಿ ಎಂದು ರಾಜ್ಯ ಸರ್ಕಾರವು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಚುನಾವಣಾ ನೀತಿ ಸಂಹಿತೆ ಇರುವ ಕಾರಣ ರಾಜ್ಯ ಸರ್ಕಾರದ ಯೋಜನೆಯಾದ ಸಾಲ ಮನ್ನಾದ ಹಣವನ್ನು ರೈತರ ಖಾತೆಗೆ ಹಾಕದಂತೆ ಚುನಾವಣಾ ಆಯೋಗ ಸೂಚಿಸಿತ್ತು.

ಆದರೆ ಪ್ರಧಾನಿ ಅವರ 'ಕಿಸ್ಸಾನ್ ಸಮ್ಮಾನ್ ನಿಧಿ' ಯೋಜನೆಯ ಮೂಲಕ ರೈತರ ಖಾತೆಗೆ 2000 ರೂಪಾಯಿ ಹಣ ವರ್ಗಾವಣೆ ಆಗುತ್ತಿರುವುದು ನಿಂತಿಲ್ಲ ಹೀಗಾಗಿ, ನಮಗೂ ರೈತರ ಖಾತೆಗೆ ಹಣ ಹಾಕಲು ಅವಕಾಶ ಕೊಡಿ ಎಂದು ರಾಜ್ಯ ಸರ್ಕಾರವು ಪತ್ರ ಬರೆದಿದೆ.

Karnataka government wrote letter to ECI about farmer loan wavier release

ಸರ್ಕಾರದ ಪರವಾಗಿ ರಾಜ್ಯದ ಮುಖ್ಯ ಕಾರ್ಯದರ್ಶಿ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ರೈತರ ಖಾತೆಗೆ ಹಣ ವರ್ಗಾಯಿಸಲು ಅವಕಾಶ ಕೊಡಿ ಎಂದು ಕೋರಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬಗ್ಗೆ ಸಂಪೂರ್ಣ ಮಾಹಿತಿ

ಇದೇ ವಿಷಯವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಹ ತೀವ್ರ ಅಸಮಾಧಾನವನ್ನು ಕೆಲವು ದಿನಗಳ ಹಿಂದೆ ವ್ಯಕ್ತಪಡಿಸಿದ್ದರು. ಕೇಂದ್ರದ ಯೋಜನೆಗೆ ನೀತಿ ಸಂಹಿತೆ ವಿಧಿಸಲಾಗಿಲ್ಲ, ಆದರೆ ನಮ್ಮ ಯೋಜನೆಗೆ ಮಾತ್ರ ನೀತಿ ಸಂಹಿತೆ ಹೇರಲಾಗಿದೆ ಎಂದು ಅವರು ಆಕ್ರೋಶ ಹೊರಹಾಕಿದ್ದರು.

English summary
The Chief Secretary of Karnataka has written to the ECI, requesting permission to continue releasing the farmers loan waiver funds to beneficiaries. ECI allowed d union govt to continue d disbursement of funds under the PMKSN.The State too is expecting a positive response from d ECI.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X