ಯಡಿಯೂರಪ್ಪ ಸರಕಾರದಿಂದ ಹೊರಬಿದ್ದ ಮೊದಲ ಆದೇಶ
Recommended Video
ಬೆಂಗಳೂರು, ಜುಲೈ 28: ಅಧಿಕಾರ ಸ್ವೀಕರಿಸಿದ ಎರಡನೇ ದಿನದಲ್ಲಿ ಯಡಿಯೂರಪ್ಪ ಸರಕಾರದ ಮೊದಲ ಆದೇಶ ಹೊರಬಿದ್ದಿದೆ.
ಹಿರಿಯ ವಕೀಲ ಪ್ರಭುಲಿಂಗ ಕೆ ನಾವಡಗಿ ಅವರನ್ನು ನೂತನ ರಾಜ್ಯದ ಅಡ್ವೋಕೇಟ್ ಜನರಲ್ ಆಗಿ ನೇಮಿಸಿ, ರಾಜ್ಯಪಾಲ ವಜುಭಾಯಿ ವಾಲ ಶನಿವಾರ (ಜುಲೈ 27) ಸಂಜೆ ಆದೇಶ ಹೊರಡಿಸಿದ್ದಾರೆ.
ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಈ ಹುದ್ದೆಯಲ್ಲಿದ್ದ ಉದಯ್ ಹೊಳ್ಳ ರಾಜೀನಾಮೆ ನೀಡಿದ ನಂತರ, ರಾಜ್ಯಪಾಲರು ನಾವಡಗಿ ಅವರನ್ನು ಈ ಆಯಕಟ್ಟಿನ ಹುದ್ದೆಗೆ ನೇಮಿಸಿದ್ದಾರೆ.

ನಾವಡಗಿ ಅವರು 2015 ರಿಂದ ಭಾರತ ಸರ್ಕಾರಕ್ಕೆ (ಕರ್ನಾಟಕದ ಹೈಕೋರ್ಟ್) ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಕೆಲಸ ನಿರ್ವಹಿಸಿದ್ದರು. ಮಾಜಿ ಹೈಕೋರ್ಟ್ ನ್ಯಾಯಮೂರ್ತಿ ಕೆ ಬಿ ನಾವಡಗಿ ಅವರ ಪುತ್ರರಾಗಿರುವ ಪ್ರಭುಲಿಂಗ ನಾವಡಗಿ, 2011ರಲ್ಲಿ ಕರ್ನಾಟಕದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿಯೂ ಸೇವೆ ಸಲ್ಲಿಸಿದ್ದರು.
ಕಳೆದ ವರ್ಷ ಮೂರು ದಿನಕ್ಕೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆಯೂ, ನಾವಡಗಿ ಅವರನ್ನು ಆ ಹುದ್ದೆಗೆ ನೇಮಿಸಲಾಗಿತ್ತು. ಆದರೆ, ಬಿಎಸ್ವೈ ಬಹುಮತ ಸಾಬೀತು ಪಡಿಸುವಲ್ಲಿ ವಿಫಲರಾದ ನಂತರ ನಾವಡಗಿ ಆ ಹುದ್ದೆಗೆ ರಾಜೀನಾಮೆ ನೀಡಿದ್ದರು.
ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ಹಿನ್ನೆಲೆಯಲ್ಲಿ ಆ ಸರ್ಕಾರದ ಅವಧಿಯಲ್ಲಿ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಂಡಿದ್ದ ಉದಯ್ ಹೊಳ್ಳ ಅವರು ಶುಕ್ರವಾರ (ಜುಲೈ 26) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications