ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರಿಂದ ಹಿಂದಿಯಲ್ಲಿ ಭಾಷಣ
ಬೆಂಗಳೂರು, ಜ.29 : ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವಿಧಾನಸಭೆಯ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಹಿಂದಿಯಲ್ಲಿ ಭಾಷಣ ಮಾಡಲಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ. ಜಯಚಂದ್ರ ಅವರು ಹೇಳಿದ್ದಾರೆ.
ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಫೆಬ್ರವರಿ 2ರಿಂದ ಆರಂಭವಾಗಲಿದ್ದು, ಮೊದಲ ದಿನ ರಾಜ್ಯಪಾಲ ವಜುಭಾಯಿ ವಾಲಾ ಅವರು ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರೂಢಿಯಂತೆ ಸರ್ಕಾರ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಭಾಷಣ ಸಿದ್ಧಪಡಿಸಿ ರಾಜಭವನಕ್ಕೆ ಸಲ್ಲಿಸುತ್ತಿತ್ತು. ಆದರೆ, ಈ ಬಾರಿ ಹಿಂದಿಯಲ್ಲಿ ಭಾಷಣ ಸಲ್ಲಿಸಲಾಗುತ್ತದೆ. [ಕರ್ನಾಟಕದ ಪ್ರಥಮ ಪ್ರಜೆಗಳ ಪಟ್ಟಿ 1956-2014]

ವಿಧಾನಸೌಧದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಟಿ.ಬಿ.ಜಯಚಂದ್ರ ಅವರು, ಹಿಂದಿಯಲ್ಲಿ ಭಾಷಣ ಸಿದ್ಧಪಡಿಸಿಕೊಡುವಂತೆ ರಾಜ್ಯಪಾಲರು ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು. ಇದೇ ಮೊದಲ ಬಾರಿಗೆ ಹಿಂದಿಯಲ್ಲಿ ಭಾಷಣ ಸಿದ್ಧಪಡಿಸುವಂತೆ ಸೂಚನೆ ಬಂದಿದೆ. ಹಿಂದಿಗೆ ತರ್ಜುಮೆ ಮಾಡಿಸಿಕೊಡಲು ಸಿದ್ಧತೆ ನಡೆಸಲಾಗಿದೆ ಎಂದರು. [ರಾಜ್ಯಪಾಲ ವಜುಭಾಯಿ ವಾಲಾ ಪರಿಚಯ]
ಮೊದಲ ಬಾರಿ ಹಿಂದಿ ಭಾಷಣ : ಕರ್ನಾಟಕದ ಮೊದಲನೇ ರಾಜ್ಯಪಾಲ ಜಯಚಾಮರಾಜ ಒಡೆಯರ್ ಮಾತ್ರ ಕನ್ನಡಿಗರಾಗಿದ್ದರು. ನಂತರ ಬಂದ ರಾಜ್ಯಪಾಲರು ಕನ್ನಡೇತರರು. ಆದ್ದರಿಂದ ಅವರೆಲ್ಲರೂ ಇಂಗ್ಲಿಷ್ನಲ್ಲಿಯೇ ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ್ದರು. ಈ ಬಾರಿ ಹಿಂದಿಯಲ್ಲಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. [ರಾಜ್ಯಪಾಲರ ಭಾಷಣದ ಮುಖ್ಯಾಂಶಗಳು]
ಕರ್ನಾಟಕದ ರಾಜ್ಯಪಾಲರಾಗಿದ್ದ ಉತ್ತರ ಭಾರತ ಮೂಲದ ಹಲವರು ಹಿಂದಿಯನ್ನು ಬಳಸದೇ ಇಂಗ್ಲಿಷ್ನಲ್ಲಿಯೇ ಭಾಷಣ ಮಾಡಿದ್ದರು. ಇದೇ ಮೊದಲ ಬಾರಿಗೆ ಗುಜರಾತ್ ಮೂಲದವರಾದ ವಜೂಭಾಯಿ ವಾಲಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಹಿಂದಿಯಲ್ಲಿ ಭಾಷಣ ಮಾಡಲಿದ್ದಾರೆ.
ಅಂದಹಾಗೆ ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಫೆಬ್ರವರಿ 2ರಿಂದ ಆರಂಭವಾಗಲಿದ್ದು, ಮೊದಲ ದಿನ ರಾಜ್ಯಪಾಲ ವಜುಭಾಯಿ ವಾಲಾ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆಬ್ರವರಿ 13ರ ವರೆಗೂ ಅಧಿವೇಶನ ನಡೆಯಲಿದೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ












Click it and Unblock the Notifications