Get Updates
Get notified of breaking news, exclusive insights, and must-see stories!

ರಾಷ್ಟ್ರಗೀತೆ ವೇಳೆ ವೇದಿಕೆ ಬಿಟ್ಟಿಳಿದ ರಾಜ್ಯಪಾಲರು

ಬೆಂಗಳೂರು, ಮಾ.11 : ರಾಷ್ಟ್ರಗೀತೆ ನುಡಿಸುವ ವೇಳೆ ವೇದಿಕೆಯಿಂದ ರಾಜ್ಯಪಾಲ ವಜುಭಾಯಿ ವಾಲಾ ಅವರು ಕೆಳಗಿಳಿದು ಹೋದ ಘಟನೆ ಮಂಗಳವಾರ ನಡೆದಿದೆ. ಹೈಕೋರ್ಟ್ ನ್ಯಾಯಮೂರ್ತಿಗಳ ಪ್ರಮಾಣ ವಚನ ಸಮಾರಂಭದ ವೇಳೆ ಈ ಪ್ರಸಂಗ ನಡೆದಿದೆ.

ಮಂಗಳವಾರ ಬೆಳಗ್ಗೆ 9.30ಕ್ಕೆ ರಾಜಸ್ಥಾನ ಹೈಕೋರ್ಟ್‌ನಿಂದ ವರ್ಗಾಣೆಯಾಗಿ ಬಂದಿರುವ ನ್ಯಾಯಮೂರ್ತಿ ರಾಘ­ವೇಂದ್ರ ಸಿಂಗ್ ಚೌಹಾಣ್‌ ಅವರ ಪ್ರಮಾಣ­ವಚನ ಸ್ವೀಕಾರ ಸಮಾ­ರಂಭ ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು.

Vajubhai Vala

ಪ್ರಮಾಣ ವಚನದ ಬಳಿಕ ಪೊಲೀಸ್‌ ಬ್ಯಾಂಡ್‌ ರಾಷ್ಟ್ರಗೀತೆಯನ್ನು ನುಡಿ­ಸಲು ಆರಂಭಿಸಿತು. ಆಗ ರಾಜ್ಯಪಾಲ ವಜುಭಾಯಿ ವಾಲಾ ವೇದಿಕೆ ಬಿಟ್ಟು ಕೆಳಗಿಳಿದು ಹೊರಟರು. ಕೆಲವು ಹೆಜ್ಜೆ ಹಾಕಿ ಮುಂದೆ ಹೋದ ಅವರು ತಕ್ಷಣ ಮರಳಿ ವೇದಿಕೆಯೇರಿ ತಮ್ಮ ಸ್ಥಾನಕ್ಕೆ ಬಂದು ನಿಂತರು. [ರಾಜ್ಯಪಾಲರು ಹಿಂದಿಯಲ್ಲೇಕೆ ಭಾಷಣ ಮಾಡಬೇಕು?]

ಆದರೆ, ರಾಜ್ಯಪಾಲರು ವಾಪಸ್ ಬಂದು ನಿಂತುಕೊಳ್ಳುವಷ್ಟರಲ್ಲಿ ರಾಷ್ಟ್ರಗೀತೆಯ ಕೊನೆಯ ಸಾಲು ಕೇಳಿ ಬರುತ್ತಿತ್ತು. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯ­ಮೂರ್ತಿ ಡಿ.ಎಚ್‌.­ವಘೇಲಾ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್‌ ಮುಖರ್ಜಿ ಸಹ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ರಾಜಭವನದಲ್ಲಿ ನಡೆಯುವ ಕಾರ್ಯಕ್ರಮಗಳ ಮೊದಲು ಮತ್ತು ನಂತರ ರಾಷ್ಟ್ರಗೀತೆ ನುಡಿಸಲಾಗುತ್ತದೆ. ಈ ಸಮಯದಲ್ಲಿ ಶಿಷ್ಟಾಚಾರದಂತೆ ಎಲ್ಲರೂ ಎದ್ದುನಿಂತು ಗೌರವ ಸೂಚಿಸುತ್ತಾರೆ. ಆದರೆ, ರಾಜ್ಯಪಾಲರು ವೇದಿಕೆಯಿಂದ ಇಳಿದು ಹೋಗಿ ಶಿಷ್ಟಾಚಾರ ಉಲ್ಲಂಘನೆ ಮಾಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+