ಕರ್ನಾಟಕದಲ್ಲಿ ದೀಪಾವಳಿ ಆಚರಿಸುವವರಿಗೆ ಸರ್ಕಾರದ ಸಿಹಿಸುದ್ದಿ
ಬೆಂಗಳೂರು, ನವೆಂಬರ್.06: ದೀಪಾವಳಿ ಹೊಸ್ತಿಲಿನಲ್ಲೇ ರಾಜ್ಯದಲ್ಲಿ ಎಲ್ಲ ಮಾದರಿ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ಇದರ ಬೆನ್ನಲ್ಲೇ ಸಿಹಿಸುದ್ದಿ ನೀಡಿದೆ.
ರಾಜ್ಯದ ಹಿಂದೂಗಳ ಭಾವನೆಗಳಿಗೆ ಬೆಲೆಕೊಟ್ಟು ಪಟಾಕಿಗಳ ಸಂಪೂರ್ಣ ನಿಷೇಧವನ್ನು ಹಿಂಪಡೆದು ಹಸಿರು ಪಟಾಕಿಗಳನ್ನು ಬಳಸಲು ಸರ್ಕಾರವು ಅನುಮತಿ ನೀಡಿದೆ. ದೀಪಾವಳಿ ಹಬ್ಬದ ದಿನ ಪಟಾಕಿ ಮಾರುವುದು ಮತ್ತು ಸಿಡಿಸುವುದನ್ನು ನಿಷೇಧಿಸುವ ಬಗ್ಗೆ ಸಾರ್ವಜನಿಕರಿಂದ ಹಲವಾರು ಸಲಹೆಗಳು ಬಂದಿರುತ್ತವೆ.
ಕೊವಿಡ್-19 ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರವು ಈಗಾಗಲೇ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ರಾಜ್ಯದಲ್ಲಿನ ಸಾರ್ವಜನಿಕರು ಮತ್ತು ಮಕ್ಕಳ ಆರೋಗ್ಯ ಹಾಗೂ ಹಿತದೃಷ್ಟಿಯಿಂದ ದೀಪಾವಳಿ ಹಬ್ಬವನ್ನು ಸರಳ ಮತ್ತು ಅರ್ಥಗರ್ಭಿತವಾಗಿ, ಭಕ್ತಿಪೂರ್ವಕವಾಗಿ ಆಚರಿಸುವುದು ಸೂಕ್ತವಾಗಿದೆ.

ಹಸಿರು ಪಟಾಕಿ ಬಳಕೆಗೆ ಅನುಮತಿ:
ದೀಪಾವಳಿ ಹಬ್ಬದ ದಿನ ಹಸಿರು ಪಟಾಕಿಗಳನ್ನು ಮಾತ್ರ ಬಳಸಿ ಸರಳ ಮತ್ತು ಸುಂದರವಾಗಿ ಹಬ್ಬವನ್ನು ಆಚರಿಸಲು ಮನವಿ ಮಾಡಿಕೊಳ್ಳಲಾಗಿದೆ. ರಾಜ್ಯದ ಎಲ್ಲ ಪ್ರಜೆಗಳಿಗೂ ಮುಂಚಿತವಾಗಿ ದೀಪಾವಳಿ ಹಬ್ಬದ ಹಾರ್ದಿಕ ಶುಭಾಷಯಗಳು ಎಂದು ಸರ್ಕಾರವು ಆದೇಶ ಹೊರಡಿಸಿದೆ.
ಸರ್ಕಾರವು ಈ ಆದೇಶ ಹೊರಡಿಸುವುದಕ್ಕೂ ಮೊದಲು ರಾಜ್ಯದಲ್ಲಿ ಎಲ್ಲಾ ಮಾದರಿಯ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿತ್ತು. ಕೊರೊನಾವೈರಸ್ ಸೋಂಕು ಹರಡುವಿಕೆ ಪ್ರಮಾಣ ಇನ್ನೂ ಕಡಿಮೆಯಾಗದ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಸರ್ಕಾರವು ಸ್ಪಷ್ಟಪಡಿಸಿತ್ತು. ಆದರೆ ಪಟಾಕಿ ಸಂಪೂರ್ಣ ನಿಷೇಧಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆ ಹಸಿರು ಪಟಾಕಿಗಳನ್ನು ಬಳಸುವುದಕ್ಕೆ ಇದೀಗ ಅನುಮತಿ ನೀಡಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications