Get Updates
Get notified of breaking news, exclusive insights, and must-see stories!

ಕರ್ನಾಟಕದಲ್ಲಿ ದೀಪಾವಳಿ ಆಚರಿಸುವವರಿಗೆ ಸರ್ಕಾರದ ಸಿಹಿಸುದ್ದಿ

ಬೆಂಗಳೂರು, ನವೆಂಬರ್.06: ದೀಪಾವಳಿ ಹೊಸ್ತಿಲಿನಲ್ಲೇ ರಾಜ್ಯದಲ್ಲಿ ಎಲ್ಲ ಮಾದರಿ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ಇದರ ಬೆನ್ನಲ್ಲೇ ಸಿಹಿಸುದ್ದಿ ನೀಡಿದೆ.

ರಾಜ್ಯದ ಹಿಂದೂಗಳ ಭಾವನೆಗಳಿಗೆ ಬೆಲೆಕೊಟ್ಟು ಪಟಾಕಿಗಳ ಸಂಪೂರ್ಣ ನಿಷೇಧವನ್ನು ಹಿಂಪಡೆದು ಹಸಿರು ಪಟಾಕಿಗಳನ್ನು ಬಳಸಲು ಸರ್ಕಾರವು ಅನುಮತಿ ನೀಡಿದೆ. ದೀಪಾವಳಿ ಹಬ್ಬದ ದಿನ ಪಟಾಕಿ ಮಾರುವುದು ಮತ್ತು ಸಿಡಿಸುವುದನ್ನು ನಿಷೇಧಿಸುವ ಬಗ್ಗೆ ಸಾರ್ವಜನಿಕರಿಂದ ಹಲವಾರು ಸಲಹೆಗಳು ಬಂದಿರುತ್ತವೆ.

ಕೊವಿಡ್-19 ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರವು ಈಗಾಗಲೇ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ರಾಜ್ಯದಲ್ಲಿನ ಸಾರ್ವಜನಿಕರು ಮತ್ತು ಮಕ್ಕಳ ಆರೋಗ್ಯ ಹಾಗೂ ಹಿತದೃಷ್ಟಿಯಿಂದ ದೀಪಾವಳಿ ಹಬ್ಬವನ್ನು ಸರಳ ಮತ್ತು ಅರ್ಥಗರ್ಭಿತವಾಗಿ, ಭಕ್ತಿಪೂರ್ವಕವಾಗಿ ಆಚರಿಸುವುದು ಸೂಕ್ತವಾಗಿದೆ.

Karnataka Govt Allowed To Use Green Firecrackers In Deepavali


ಹಸಿರು ಪಟಾಕಿ ಬಳಕೆಗೆ ಅನುಮತಿ:

ದೀಪಾವಳಿ ಹಬ್ಬದ ದಿನ ಹಸಿರು ಪಟಾಕಿಗಳನ್ನು ಮಾತ್ರ ಬಳಸಿ ಸರಳ ಮತ್ತು ಸುಂದರವಾಗಿ ಹಬ್ಬವನ್ನು ಆಚರಿಸಲು ಮನವಿ ಮಾಡಿಕೊಳ್ಳಲಾಗಿದೆ. ರಾಜ್ಯದ ಎಲ್ಲ ಪ್ರಜೆಗಳಿಗೂ ಮುಂಚಿತವಾಗಿ ದೀಪಾವಳಿ ಹಬ್ಬದ ಹಾರ್ದಿಕ ಶುಭಾಷಯಗಳು ಎಂದು ಸರ್ಕಾರವು ಆದೇಶ ಹೊರಡಿಸಿದೆ.

ಸರ್ಕಾರವು ಈ ಆದೇಶ ಹೊರಡಿಸುವುದಕ್ಕೂ ಮೊದಲು ರಾಜ್ಯದಲ್ಲಿ ಎಲ್ಲಾ ಮಾದರಿಯ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿತ್ತು. ಕೊರೊನಾವೈರಸ್ ಸೋಂಕು ಹರಡುವಿಕೆ ಪ್ರಮಾಣ ಇನ್ನೂ ಕಡಿಮೆಯಾಗದ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಸರ್ಕಾರವು ಸ್ಪಷ್ಟಪಡಿಸಿತ್ತು. ಆದರೆ ಪಟಾಕಿ ಸಂಪೂರ್ಣ ನಿಷೇಧಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆ ಹಸಿರು ಪಟಾಕಿಗಳನ್ನು ಬಳಸುವುದಕ್ಕೆ ಇದೀಗ ಅನುಮತಿ ನೀಡಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+