ಕರ್ನಾಟಕದಲ್ಲಿ ದೀಪಾವಳಿ ಆಚರಿಸುವವರಿಗೆ ಸರ್ಕಾರದ ಸಿಹಿಸುದ್ದಿ
ಬೆಂಗಳೂರು, ನವೆಂಬರ್.06: ದೀಪಾವಳಿ ಹೊಸ್ತಿಲಿನಲ್ಲೇ ರಾಜ್ಯದಲ್ಲಿ ಎಲ್ಲ ಮಾದರಿ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ಇದರ ಬೆನ್ನಲ್ಲೇ ಸಿಹಿಸುದ್ದಿ ನೀಡಿದೆ.
ರಾಜ್ಯದ ಹಿಂದೂಗಳ ಭಾವನೆಗಳಿಗೆ ಬೆಲೆಕೊಟ್ಟು ಪಟಾಕಿಗಳ ಸಂಪೂರ್ಣ ನಿಷೇಧವನ್ನು ಹಿಂಪಡೆದು ಹಸಿರು ಪಟಾಕಿಗಳನ್ನು ಬಳಸಲು ಸರ್ಕಾರವು ಅನುಮತಿ ನೀಡಿದೆ. ದೀಪಾವಳಿ ಹಬ್ಬದ ದಿನ ಪಟಾಕಿ ಮಾರುವುದು ಮತ್ತು ಸಿಡಿಸುವುದನ್ನು ನಿಷೇಧಿಸುವ ಬಗ್ಗೆ ಸಾರ್ವಜನಿಕರಿಂದ ಹಲವಾರು ಸಲಹೆಗಳು ಬಂದಿರುತ್ತವೆ.
ಕೊವಿಡ್-19 ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರವು ಈಗಾಗಲೇ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ. ರಾಜ್ಯದಲ್ಲಿನ ಸಾರ್ವಜನಿಕರು ಮತ್ತು ಮಕ್ಕಳ ಆರೋಗ್ಯ ಹಾಗೂ ಹಿತದೃಷ್ಟಿಯಿಂದ ದೀಪಾವಳಿ ಹಬ್ಬವನ್ನು ಸರಳ ಮತ್ತು ಅರ್ಥಗರ್ಭಿತವಾಗಿ, ಭಕ್ತಿಪೂರ್ವಕವಾಗಿ ಆಚರಿಸುವುದು ಸೂಕ್ತವಾಗಿದೆ.

ಹಸಿರು ಪಟಾಕಿ ಬಳಕೆಗೆ ಅನುಮತಿ:
ದೀಪಾವಳಿ ಹಬ್ಬದ ದಿನ ಹಸಿರು ಪಟಾಕಿಗಳನ್ನು ಮಾತ್ರ ಬಳಸಿ ಸರಳ ಮತ್ತು ಸುಂದರವಾಗಿ ಹಬ್ಬವನ್ನು ಆಚರಿಸಲು ಮನವಿ ಮಾಡಿಕೊಳ್ಳಲಾಗಿದೆ. ರಾಜ್ಯದ ಎಲ್ಲ ಪ್ರಜೆಗಳಿಗೂ ಮುಂಚಿತವಾಗಿ ದೀಪಾವಳಿ ಹಬ್ಬದ ಹಾರ್ದಿಕ ಶುಭಾಷಯಗಳು ಎಂದು ಸರ್ಕಾರವು ಆದೇಶ ಹೊರಡಿಸಿದೆ.
ಸರ್ಕಾರವು ಈ ಆದೇಶ ಹೊರಡಿಸುವುದಕ್ಕೂ ಮೊದಲು ರಾಜ್ಯದಲ್ಲಿ ಎಲ್ಲಾ ಮಾದರಿಯ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿತ್ತು. ಕೊರೊನಾವೈರಸ್ ಸೋಂಕು ಹರಡುವಿಕೆ ಪ್ರಮಾಣ ಇನ್ನೂ ಕಡಿಮೆಯಾಗದ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಸರ್ಕಾರವು ಸ್ಪಷ್ಟಪಡಿಸಿತ್ತು. ಆದರೆ ಪಟಾಕಿ ಸಂಪೂರ್ಣ ನಿಷೇಧಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆ ಹಸಿರು ಪಟಾಕಿಗಳನ್ನು ಬಳಸುವುದಕ್ಕೆ ಇದೀಗ ಅನುಮತಿ ನೀಡಲಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications