ಕರ್ನಾಟಕದಲ್ಲಿ ಜಿಮ್ ಕೇಂದ್ರ ತೆರೆಯಲು ಅನುಮತಿ: ಷರತ್ತುಗಳು ಅನ್ವಯ
ಬೆಂಗಳೂರು, ಏಪ್ರಿಲ್ 04: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ನಡುವೆ ಕರ್ನಾಟಕ ಸರ್ಕಾರ ಮಾರ್ಗಸೂಚಿಯಲ್ಲಿ ತಿದ್ದುಪಡಿ ಮಾಡಿದೆ. ರಾಜ್ಯದ ಜಿಮ್ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದ್ದು, ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.
ಕರ್ನಾಟಕದಲ್ಲಿ ಏಪ್ರಿಲ್ 2ರಂದು ಕೊರೊನಾವೈರಸ್ ಮಾರ್ಗಸೂಚಿ ಬಿಡುಗಡೆಗೊಳಿಸಲಾಗಿದ್ದು, ಏಪ್ರಿಲ್ 20ರವರೆಗೂ ಈ ನಿಯಮಗಳು ಜಾರಿಯಲ್ಲಿರುತ್ತವೆ ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿತ್ತು. ಆದರೆ ಜಿಮ್ ಕೇಂದ್ರಗಳನ್ನು ಮುಚ್ಚುವುದಕ್ಕೆ ಸರ್ಕಾರ ನೀಡಿದ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.
ಕೋವಿಡ್ ಮಾರ್ಗಸೂಚಿಗೆ ಜಿಮ್ ಅಸೋಸಿಯೇಷನ್ ತೀವ್ರ ಆಕ್ಷೇಪ
ರಾಜ್ಯ ಸರ್ಕಾರದ ನೂತನ ಆದೇಶಕ್ಕೆ ರಾಜ್ಯ ಜಿಮ್ ಅಸೋಸಿಯೇಷನ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ದಿಢೀರನೇ ಜಿಮ್ ಬಂದ್ ಮಾಡುವಂತೆ ಆದೇಶ ಹೊರಡಿಸಿದರೆ ಹೇಗೆ. ಕಟ್ಟಡದ ಬಾಡಿಗೆ ಕಟ್ಟಲಾಗದೇ ಆರ್ಥಿಕ ಹೊರೆಯನ್ನು ಎದುರಿಸಬೇಕಾಗುತ್ತದೆ. ಈ ಸಮಸ್ಯೆಗಳನ್ನು ಯಾರು ನಿಭಾಯಿಸಬೇಕು ಎಂದು ಅಸೋಸಿಯೇಷನ್ ಅಧ್ಯಕ್ಷ ರವಿ ಪ್ರಶ್ನೆ ಮಾಡಿದ್ದರು. ಇದೀಗ ಆದೇಶವನ್ನು ಹಿಂಪಡೆದ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ.
ಸರ್ಕಾರದ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಇದೀಗ ಜಿಮ್ ಕೇಂದ್ರಗಳನ್ನು ತೆರೆಯಲು ಷರತ್ತುಬದ್ಧ ಅನುಮತಿ ನೀಡಲಾಗಿದೆ.

ಜಿಮ್ ಕೇಂದ್ರಗಳನ್ನು ತೆರೆಯಲು ಅನುಮತಿ; ಷರತ್ತುಗಳು ಅನ್ವಯ
- ಯಾವುದೇ ಕಾರಣಕ್ಕೂ ಶೇ.50ಕ್ಕಿಂತ ಹೆಚ್ಚು ಜನರನ್ನು ಜಿಮ್ ಕೇಂದ್ರಗಳಲ್ಲಿ ಸೇರಿಸುವಂತಿಲ್ಲ
- ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಕಡ್ಡಾಯ
- ಪ್ರತಿ ಬಾರಿ ಬಳಸಿದ ಸಾಮಗ್ರಿಗಳ ಮೇಲೆ ಸ್ಯಾನಿಟೈಸರ್ ಸಿಂಪಡಿಸುವುದು ಕಡ್ಡಾಯ
- ಒಂದು ವೇಳೆ ಕೊವಿಡ್-19 ನಿಯಮಗಳ ಉಲ್ಲಂಘನೆ ಬಗ್ಗೆ ಕಂಡು ಬಂದಲ್ಲಿ ಸಾಂಕ್ರಾಮಿಕ ಪಿಡುಗು ಅಂತ್ಯದವರೆಗೂ ಆ ಜಿಮ್ ಕೇಂದ್ರವನ್ನು ಮುಚ್ಚುವುದು
Recommended Video
ಕರ್ನಾಟಕದಲ್ಲಿ ಕೊರೊನಾವೈರಸ್ ದಾಖಲೆ:
ರಾಜ್ಯದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹೊಸ ದಾಖಲೆ ಬರೆದಿದೆ. ಕಳೆದ 24 ಗಂಟೆಗಳಲ್ಲಿ 4553 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 15 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ 2060 ಸೋಂಕಿತರು ಗುಣಮುಖರಾಗಿದ್ದಾರೆ. ಭಾನುವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 1015155ಕ್ಕೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ಈ ಪೈಕಿ 963419 ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಈವರೆಗೂ 12625 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 39092 ಸಕ್ರಿಯ ಪ್ರಕರಣಗಳಿವೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications