Breaking; ಕರ್ನಾಟಕದಲ್ಲಿ ಲಾಕ್ಡೌನ್ನಲ್ಲಿ ಕೆಲವು ವಿನಾಯಿತಿ
ಬೆಂಗಳೂರು, ಜೂನ್ 02; ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಸರ್ಕಾರ ಜೂನ್ 3ರ ಗುರುವಾರದಿಂದ ಜಾರಿಗೆ ಬರುವಂತೆ ಲಾಕ್ಡೌನ್ನಲ್ಲಿ ಕೆಲವು ವಿನಾಯಿತಿಗಳನ್ನು ಘೋಷಣೆ ಮಾಡಿದೆ.
Recommended Video
ಬುಧವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವರು, ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ ತೀರ್ಮಾನವನ್ನು ಕೈಗೊಳ್ಳಲಾಗಿದೆ. ರಫ್ತು ಆಧರಿತ ಉದ್ಯಮಗಳ ಪ್ರಾರಂಭಕ್ಕೆ ಗುರುವಾರದಿಂದಲೇ ಅನುಮತಿ ನೀಡಲಾಗಿದೆ.
ಕೃಷಿ ಉತ್ಪನ್ನಗಳು, ಟ್ರ್ಯಾಕ್ಟರ್ ಉತ್ಪಾದನೆ, ಸಿದ್ಧ ಉಡುಪುಗಳು, ಎಲೆಕ್ಟ್ರಾನಿಕ್ಸ್ ಉತ್ಪನ್ನಗಳು, ಆಟೋಮೊಬೈಲ್ ಉತ್ಪಾದಿಸುವ ಕೈಗಾರಿಕೆಗಳಿಗೆ ಅವಕಾಶವನ್ನು ನೀಡಲಾಗಿದೆ. ಶೇ 50ರಷ್ಟು ಕೆಲಸಗಾರರನ್ನಿಟ್ಟುಕೊಂಡು ಕೆಲಸ ಮಾಡಬೇಕು.

ಕೆಲಸದ ಅವಧಿಯಲ್ಲಿ ಕೋವಿಡ್ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು. ವಾರಕ್ಕೆರಡು ಬಾರಿ ಕೋವಿಡ್ ಪರೀಕ್ಷೆಗಳ್ನು ನೌಕರರು, ಸಿಬ್ಬಂದಿಗೆ ಮಾಡಿಸಬೇಕು ಎಂದು ಷರತ್ತು ಹಾಕಲಾಗಿದೆ.
ಸರ್ಕಾರದ ಆದೇಶ
ರಫ್ತು ಆಧಾರಿತ ಕೈಗಾರಿಕೆಗಳು ಹಾಗೂ ಕಂಪನಿಗಳು ಶೇ 5೦% ಸಿಬ್ಬಂದಿಗಳೊಂದಿಗೆ ಕೆಲಸ ಆರಂಭಿಸಲು ಸರ್ಕಾರದ ಅನುಮತಿ
— oneindiakannada (@OneindiaKannada) June 2, 2021
ಅಂತೆಯೇ 1೦೦೦ ಕ್ಕೂ ಹೆಚ್ಚು ಕೆಲಸಗಾರರು ಅಥವಾ ಕಾರ್ಮಿಕರಿರುವ ಕೈಗಾರಿಕೆಗಳು ನಿಯಮಿತವಾಗಿ ವಾರಕ್ಕೆ ಎರಡು ಭಾರಿ ಆರ್ ಟಿಪಿಸಿಆರ್ ಪರೀಕ್ಷೆ ನಡೆಸುವಂತೆ ಕಡ್ಡಾಯಗೊಳಿಸಿ ಸರ್ಕಾರದ ಆದೇಶ.
#government #RTPCR pic.twitter.com/bj1lAdV3Rw
ಅಂತೆಯೇ 1000ಕ್ಕೂ ಹೆಚ್ಚು ಕೆಲಸಗಾರರು ಅಥವಾ ಕಾರ್ಮಿಕರಿರುವ ಕೈಗಾರಿಕೆಗಳು ನಿಯಮಿತವಾಗಿ ವಾರಕ್ಕೆ ಎರಡು ಭಾರಿ ಆರ್ಟಿಪಿಸಿಆರ್ ಪರೀಕ್ಷೆ ನಡೆಸುವಂತೆ ಸರ್ಕಾರ ನಿರ್ದೇಶನ ನೀಡಿದೆ.
ಬುಧವಾರ ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಯಡಿಯೂರಪ್ಪ, ರಫ್ತು ಆಧಾರಿತ ಕೈಗಾರಿಕೆ ಅಥವಾ ಸಂಸ್ಥೆಗಳಿಗೆ ಲಾಕ್ಡೌನ್ನಿಂದ ವಿನಾಯಿತಿ ನೀಡುವುದಾಗಿ ಹೇಳಿದ್ದರು. ಸಂಜೆ ಈ ಕುರಿತು ಅಧಿಕೃತ ಆದೇಶ ಪ್ರಕಟವಾಗಿದೆ.
ಲಾಕ್ಡೌನ್ ವಿಸ್ತರಣೆ; ಕರ್ನಾಟಕದಲ್ಲಿ ಜೂನ್ 7ರ ತನಕ ಲಾಕ್ಡೌನ್ ಜಾರಿಯಲ್ಲಿರುತ್ತದೆ. ಲಾಕ್ಡೌನ್ ವಿಸ್ತರಣೆ ವಿಚಾರದಲ್ಲಿ ಸಚಿವರು, ಮುಖ್ಯಮಂತ್ರಿಗಳ ನಡುವೆ ಒಮ್ಮತ ಮೂಡಿಲ್ಲ.
ಈ ಹಿನ್ನಲೆಯಲ್ಲಿ ಶನಿವಾರ ಮತ್ತೊಂದು ಸುತ್ತಿನ ಸಭೆ ಕರೆಯಲು ಮುಖ್ಯಮಂತ್ರಿಗಳು ತೀರ್ಮಾನಿಸಿದ್ದಾರೆ. ಆ ಸಭೆಯಲ್ಲಿ ಲಾಕ್ಡೌನ್ ವಿಸ್ತರಣೆ ಮಾಡುವ ಕುರಿತು ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ.












Click it and Unblock the Notifications