Breaking; ಕೋವಿಡ್ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ
ಬೆಂಗಳೂರು, ಜೂನ್ 14; ಕೋವಿಡ್ ಸೋಂಕಿನಿಂದಾಗಿ ಕುಟುಂಬದಲ್ಲಿ ವಯಸ್ಕರು ಮೃತಪಟ್ಟಿದ್ದರೆ ಅವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ. ಇಂತಹ ಘೋಷಣೆ ಮಾಡಿದ ಮೊದಲ ರಾಜ್ಯ ಕರ್ನಾಟಕ.
Recommended Video
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೋಮವಾರ ಈ ಕುರಿತು ಘೋಷಣೆ ಮಾಡಿದರು. ಕುಟುಂಬದಲ್ಲಿ ದುಡಿಯುವ ವ್ಯಕ್ತಿ ಮೃತಪಟ್ಟರೆ ಒಂದು ಕುಟುಂಬದಲ್ಲಿ ಒಬ್ಬರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದರು.

"ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ಕೋವಿಡ್ನಿಂದ ದುಡಿಯುವ ವ್ಯಕ್ತಿ ಮೃತಪಟ್ಟಿದ್ದರೆ ಒಬ್ಬರಿಗೆ ಪರಿಹಾರವನ್ನು ನೀಡಲಾಗುತ್ತದೆ. ಇದರಿಂದ ಒಟ್ಟು 20 ರಿಂದ 30 ಸಾವಿರ ಕುಟುಂಬಕ್ಕೆ ನೆರವು ಸಿಗಲಿದೆ" ಎಂದು ಯಡಿಯೂರಪ್ಪ ಹೇಳಿದರು.
ಕೋವಿಡ್ ಸೋಂಕಿಗೆ ಕುಟುಂಬದಲ್ಲಿ ಅಪ್ರಾಪ್ತರು ಬಲಿಯಾಗಿದ್ದರೆ ಪರಿಹಾರ ಸಿಗುವುದಿಲ್ಲ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ವಯಸ್ಕರು ಮೃತಪಟ್ಟಿದ್ದರೆ ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ 1 ಲಕ್ಷ ರೂ. ಪರಿಹಾರ ಸಿಗಲಿದೆ.
ಯಡಿಯೂರಪ್ಪ ಈ ಕುರಿತು ಇಂದು ಘೋಷಣೆ ಮಾಡಿದ್ದು, ಈ ಕುರಿತ ವಿವರವಾದ ಮಾರ್ಗಸೂಚಿ ಇನ್ನೂ ಪ್ರಕಟವಾಗಬೇಕಿದೆ. ದೇಶದಲ್ಲಿಯೇ ಇಂತಹ ಘೋಷಣೆಯನ್ನು ಮಾಡಿರುವ ಮೊದಲ ರಾಜ್ಯ ಕರ್ನಾಟಕವಾಗಿದೆ.
ಕೋವಿಡ್ ಕಾರಣದಿಂದಾಗಿ ಹಲವಾರು ಕುಟುಂಬದಲ್ಲಿ ದುಡಿಯುವವರು ಮೃತಪಟ್ಟಿದ್ದಾರೆ. ಕುಟುಂಬದ ಆಧಾರ ಸ್ತಂಭವನ್ನೇ ಕಳೆದುಕೊಂಡು ಹಲವು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಇಂತಹ ಕುಟುಂಬಗಳ ನೆರವಿಗೆ ಸರ್ಕಾರ ಈಗ ಧಾವಿಸಿದೆ.
'ಕೋವಿಡ್ ಸೋಂಕಿನಿಂದ ದುಡಿಯುವ ವ್ಯಕ್ತಿಗಳು ಮೃತಪಟ್ಟು ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದೆ. ಇದನ್ನು ಮನಗಂಡು, ಬಿಪಿಎಲ್ ಕುಟುಂಬಗಳಲ್ಲಿ ಕೋವಿಡ್ ಸೋಂಕಿನಿಂದ ವಯಸ್ಕರು ಮೃತಪಟ್ಟಲ್ಲಿ, ಆ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಕುಟುಂಬಕ್ಕೆ ಒಬ್ಬ ವ್ಯಕ್ತಿಯ ಮರಣಕ್ಕೆ ಪರಿಹಾರ ವಿತರಿಸಲಾಗುವುದು' : ಸಿಎಂ @BSYBJP pic.twitter.com/LuWDOhQEmt
— CM of Karnataka (@CMofKarnataka) June 14, 2021
ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ, "ಇದಕ್ಕಾಗಿ ಸುಮಾರು 250 ರಿಂದ 300 ಕೋಟಿ ರೂ. ಖರ್ಚಾಗುತ್ತದೆ. ದೇಶದಲ್ಲೇ ಮೊದಲು ಇಂತಹ ಹಣಕಾಸು ಯೋಜನೆಯನ್ನು ನಾವು ನೀಡುತ್ತಿದ್ದೇವೆ. ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ" ಎಂದರು.
ಈ ಘೋಷಣೆಗೂ ಮೊದಲು ಹಣಕಾಸು ಸಚಿವರೂ ಆಗಿರುವ ಯಡಿಯೂರಪ್ಪ ಆರ್ಥಿಕ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ. ಎಸ್. ಎನ್. ಪ್ರಸಾದ್, ಇಲಾಖೆ ಕಾರ್ಯದರ್ಶಿಗಳಾದ ಪಿ. ಸಿ. ಜಾಫರ್, ಏಕ ರೂಪ್ ಕೌರ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications