ತೀವ್ರ ಕುತೂಹಲ ಮೂಡಿಸಿದ ಸಿಎಂ ಯಡಿಯೂರಪ್ಪ ನಡೆ: ಶ್ರುತಿ ಸ್ಥಾನಕ್ಕೆ ಸಿದ್ದಲಿಂಗಸ್ವಾಮಿ ನೇಮಕ ಯಾಕೆ?
ಬೆಂಗಳೂರು, ಜು. 19: ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಚರ್ಚೆ ತಾರಕ್ಕೇರಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆ ತೀವ್ರ ಸಂಚಲನ ಮೂಡಿಸಿದೆ. ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದಿಂದ ಹಿರಿಯ ನಟಿ ಶ್ರುತಿ ಅವರನ್ನು ಬದಲಾಯಿಸಲಾಗಿದೆ. ಅವರ ಜಾಗಕ್ಕೆ ಯಡಿಯೂರಪ್ಪ ಅವರ ಆಪ್ತ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ನೇಮಕ ಮಾಡಿ ಆದೇಶ ಮಾಡಲಾಗಿದೆ. ಇದು ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ ಕಾರಣವಾಗಿದೆ.
ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಕೆಎಸ್ಟಿಡಿಸಿ ಅಧ್ಯಕ್ಷ ಸ್ಥಾನದಿಂದ ಶ್ರುತಿ ಅವರನ್ನು ವಜಾ ಮಾಡಲಾಗಿದೆ. ಕನಿಷ್ಠ ಈ ವಿಚಾರವನ್ನೂ ಅವರ ಗಮನಕ್ಕೆ ತರಲಾಗಿಲ್ಲ ಎಂಬುದು ಗಮನಿಸಬೇಕಾದ ಅಂಶವಾಗಿದೆ.
ಸರಿಯಾಗಿ ಕೆಲಸ ಮಾಡದಿರುವ ಹಾಲಿ ನಿಗಮ-ಮಂಡಳಿ, ಪ್ರಾಧಿಕಾರಗಳಿಗೆ ನೇಮಕಾತಿ ಮಾಡಿರುವವರನ್ನು ವಜಾ ಮಾಡಬೇಕು. ಉಳಿದ 2 ವರ್ಷಗಳ ಅವಧಿಗೆ ಪಕ್ಷದ ಬೇರೆ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡಬೇಕು. ಅದಕ್ಕಾಗಿ ಒಂದು ಪಟ್ಟಿಯನ್ನೂ ಮಾಡಬೇಕು ಸಿದ್ಧಪಡಿಸಬೇಕು ಎಂಬ ಚರ್ಚೆ ಕಳೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಡೆದಿತ್ತು. ಆದರೆ ಅದು ಕಾರ್ಯರೂಪಕ್ಕೆ ಬರುವ ಮೊದಲೇ ಸಿಎಂ ಯಡಿಯೂರಪ್ಪ ಈ ಬದಲಾವಣೆಯನ್ನು ಮಾಡಿದ್ದಾರೆ.

ಮತ್ತೊಂದೆಡೆ ಸಿಎಂ ಯಡಿಯೂರಪ್ಪ ಅವರ ದೆಹಲಿ ಭೇಟಿ ಬಳಿಕ ತೆಗೆದುಕೊಂಡಿರುವ ಮೊದಲ ನಿರ್ಧಾರ ಇದಾಗಿದೆ. ಹೀಗಾಗಿ ಸಿಎಂ ಯಡಿಯೂರಪ್ಪ ಅವರು ಈ ನೇಮಕಾತಿಯ ಮೂಲಕ ರಾಜ್ಯದಲ್ಲಿ ನಡೆಯಬಹುದಾದ ಬಹುದೊಡ್ಡ ರಾಜಕೀಯ ಸ್ಥಿತ್ಯಂತರದ ಮುನ್ಸೂಚನೆ ಕೊಟ್ಟಿರಬಹುದಾ? ಎಂಬ ಚರ್ಚೆಗಳು ಈಗ ನಡೆಯುತ್ತಿವೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಜೀನಾಮೆ ಕೊಡುವಂತೆ ಹೈಕಮಾಂಡ್ ಸೂಚಿಸಿದೆ. ಆ ಹಿನ್ನೆಲೆಯಲ್ಲಿ ತಮ್ಮ ಆಪ್ತರಿಗೆ ಅವರು ಅಧಿಕಾರದ ಸ್ಥಾನಗಳನ್ನು ಒದಗಿಸುತ್ತಿದ್ದಾರೆ. ಒಂದೊಮ್ಮೆ ತಾವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾದ ಸಂದರ್ಭ ಬಂದಲ್ಲಿ ತಮ್ಮ ಆಪ್ತರಿಗೆ ಸ್ಥಾನಮಾನ ಕೊಡಿಸಿಯೇ ಹೋಗುತ್ತಾರೆ ಎಂಬ ಮಾತುಗಳೂ ಕೇಳಿ ಬಂದಿವೆ.
ಕಾಪು ಸಿದ್ದಲಿಂಗಸ್ವಾಮಿ ಅವರು ಸಿಎಂ ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿದ್ದರು. ಅವರು ಮುಖ್ಯಮಂತ್ರಿ ಆಗುವುದಕ್ಕಿಂತಲೂ ಮೊದಲಿನಿಂದಲೂ
ಯಡಿಯೂರಪ್ಪ ಅವರೊಂದಿಗೆ ಇದ್ದರು. ಆದರೆ ಬದಲಾದ ಸ್ಥಿತಿಯಲ್ಲಿ ಕಳೆದ 2012ರಿಂದ ಸಿದ್ದಲಿಂಗಸ್ವಾಮಿ ಅವರನ್ನು ಯಡಿಯೂರಪ್ಪ ದೂರ ಇಟ್ಟಿದ್ದರು ಎನ್ನಲಾಗಿದೆ. ನಂತರ 2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೆಜೆಪಿಯಿಂದ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರ ಎದುರು ಸ್ಪರ್ಧಿಸಿ ಸೋತಿದ್ದರು. ನಂತರ 2018ರ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆಯಲು ಸಿದ್ದಲಿಂಗಸ್ವಾಮಿ ಅವರು ಪ್ರಯತ್ನಿಸಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications