Get Updates
Get notified of breaking news, exclusive insights, and must-see stories!

ಕುತೂಹಲ ಮೂಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ನಡೆ: ಶ್ರುತಿಗೆ ಮತ್ತೆ ಅಧ್ಯಕ್ಷ ಸ್ಥಾನ!

ಬೆಂಗಳೂರು, ಜು. 19: ಹಿರಿಯ ಚಿತ್ರನಟಿ, ಬಿಜೆಪಿ ನಾಯಕಿ ಶ್ರುತಿ ಅವರಿಗೆ ಮತ್ತೆ ಹುದ್ದೆ ಕೊಟ್ಟು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಮಾಡಿದ್ದಾರೆ. ಕಳೆದ ಎರಡು ದಿನಗಳ ಹಿಂದಷ್ಟೇ ಯಾವುದೇ ಮಾಹಿತಿ ಕೊಡದೇ ಅವರನ್ನು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದಿಂದ ಬದಲಾಯಿಸಲಾಗಿತ್ತು. ಸಿಎಂ ಯಡಿಯೂರಪ್ಪ ಅವರು ತೆಗೆದುಕೊಂಡಿದ್ದ ಏಕಾಏಕಿ ನಿರ್ಧಾರದಿಂದ ಶ್ರುತಿ ಅವರಿಗೆ ತೀವ್ರ ಮುಜುಗುರವಾದಂತಿತ್ತು. ಅಧ್ಯಕ್ಷ ಸ್ಥಾನದಿಂದ ಅವರನ್ನು ಬದಲಾವಣೆ ಮಾಡಿದ್ದ ಕುರಿತೂ ಅವರಿಗೆ ಮಾಹಿತಿ ನೀಡಿರಲಿಲ್ಲ.

ಕೆಎಸ್‌ಟಿಡಿಸಿ ಮಾಜಿ ಅಧ್ಯಕ್ಷೆ ಶ್ರುತಿ ಅವರಿಗೆ ಇದೀಗ ಕರ್ನಾಟಕ ಮದ್ಯಪಾನ ಸ್ವಯಂ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆದೇಶ ಮಾಡಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರಯವಂತೆ ಶ್ರುತಿ ಅವರನ್ನು ಕರ್ನಾಟಕ ಮದ್ಯಪಾನ ಸ್ವಯಂ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶ ಮಾಡಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆದೇಶದ ಅನುಸಾರ ಶ್ರುತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತ ಇಲಾಖೆ ಅಧೀನ ಕಾರ್ಯದರ್ಶಿ ಎಂ. ಜೆಸಿಂತ ಅವರು ತಿಳಿಸಿದ್ದಾರೆ.

Karnataka Govt Appoints Shruti as Chairman of the Alcohol Restraint Board

Recommended Video

      Prithvi Shaw ಆಟ ಹೀಗೆ ಇದ್ದರೆ ಸಾಕು ಎಂದ ಮಾಜಿ ಕ್ರಿಕೆಟಿಗ | Oneindia Kannada

      ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಚರ್ಚೆ ತಾರಕ್ಕೇರಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆ ತೀವ್ರ ಸಂಚಲನ ಮೂಡಿಸಿತ್ತು. ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದಿಂದ ಹಿರಿಯ ನಟಿ ಶ್ರುತಿ ಅವರನ್ನು ಬದಲಾಯಿಸಿ ಅವರ ಸ್ಥಾನಕ್ಕೆ ತಮ್ಮ ಆಪ್ತ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ಸಿಎಂ ಯಡಿಯೂರಪ್ಪ ನೇಮಕ ಮಾಡಿ ಆದೇಶ ಮಾಡಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ನಡೆ ರಾಜ್ಯ ಬಿಜೆಪಿಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+