Get Updates
Get notified of breaking news, exclusive insights, and must-see stories!

73 ಕೈಗಾರಿಕಾ ಯೋಜನೆಗಳು, ₹3,935 ಕೋಟಿ ಹೂಡಿಕೆಗೆ ಒಪ್ಪಿಗೆ: ಉದ್ಯೋಗ ಸೃಷ್ಟಿ ಲೆಕ್ಕ ಕೊಟ್ಟ ಸರ್ಕಾರ

ಬೆಂಗಳೂರು, ಜನವರಿ 14: ಕರ್ನಾಟಕದಲ್ಲಿ ಹಂತ ಹಂತವಾಗಿ ಬಂಡವಾಳ ಹೂಡಿಕೆ ಪ್ರಮಾಣ ಹೆಚ್ಚಾಗುತ್ತಿದೆ. ಇದೀಗ ಬರೋಬ್ಬರಿ ರೂ.3,935 ಕೋಟಿಗೂ ಹೆಚ್ಚಿನ ಹೂಡಿಕೆಗೆ ಅನುಮೋದನೇ ಸಿಕ್ಕಿದೆ. ಇದರಿಂದ ಸಾವಿರಾರು ಉದ್ಯೋಗ ಸೃಷ್ಟಿಯಾಗಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಹಾಗಾದರೆ ಹೂಡಿಕೆ ಮೊತ್ತ ವೆಷ್ಟು, ಉದ್ಯೋಗ ಸೃಷ್ಟಿ ಎಷ್ಟು, ಯೋಜನೆಗಳ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ, ಒಟ್ಟು ₹3,935 ಕೋಟಿಗೂ ಹೆಚ್ಚಿನ ಹೂಡಿಕೆಯ 73 ಯೋಜನೆಗಳನ್ನು ಅನುಷ್ಠಾನ ಗೊಳಿಸುವ ಪ್ರಸ್ತಾವನೆಗೆ ಸರ್ಕಾರ ಮತ್ತು ಸಮಿತಿಯಿಂದ ಒಪ್ಪಿಗೆ ದೊರೆತಿದೆ. ಎಲ್ಲವು ಅಂದುಕೊಂಡಂತಾದರೆ ಈ ಎಲ್ಲ ಯೋಜನೆಗಳಿಂದ ಒಟ್ಟು 14,497 ಉದ್ಯೋಗಾವಕಾಶ ಸೃಷ್ಟಿ ಆಗಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಮಾಹಿತಿ ನೀಡಿದರು.

Karnataka Govt Approved For 73 Projects of Industry Related ₹3,935 Crore Investment,

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಟ್ಟು ಯೋಜನೆಗಳ ಪೈಕಿ 10 ಯೋಜನೆಗಳಲ್ಲಿ ತಲಾ 50 ಕೋಟಿ ರೂ.ಗೂ ಹೆಚ್ಚು ಹೂಡಿಕೆ ಆಗಲಿದೆ. ಈ ಯೋಜನೆಗಳಲ್ಲಿ ಇಟಿಎಲ್ ಸೆಕ್ಯೂರ್ ಸ್ಪೇಸ್, ದಶ್ ಪಿ.ವಿ.ಟೆಕ್ನಾಲಜೀಸ್, ಮೈಲಾರ್ ಇನ್ಫ್ರಾ, ಸ್ಯಾಂಗೋ ಆಟೋಮೋಟೀವ್ ಪಾರ್ಟ್ಸ್, ವೇನಾಸ್ ಲ್ಯಾಬ್ಸ್, ಸಿಂಬಯೋ ಜನರಿಕ್ಸ್ ಇಂಡಿಯಾ, ಎಂಎಎಫ್ ಕ್ಲಾತಿಂಗ್, ಎಸ್ಎಎ ಪ್ರಾಕ್ಟ್ಸ್, ನಿಫ್ಕೋ ಸೌತ್ ಇಂಡಿಯಾ ಮ್ಯಾನಫ್ಯಾಕ್ಚರಿಂಗ್ ಮತ್ತು ರೆನ್ಸ್ ಬಯೋಟೆಕ್ ಕಂಪನಿಗಳು ಸೇರಿವೆ' ಎಂದು ಅವರು ವಿವರಿಸಿದರು.

ಈ ಭಾಗದಲ್ಲಿ 9,200 ಉದ್ಯೋಗ ಸೃಷ್ಟಿ

ಈ ಕಂಪನಿಗಳು ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ, ಶಿರಾ ಕೈಗಾರಿಕಾ ಪ್ರದೇಶ, ಹೂವಿನ ಹಡಗಲಿ, ರಾಮನಗರ, ಕಡೇಚೂರು, ಚಾಮರಾಜನಗರ, ಗೌರಿಬಿದನೂರು ಮತ್ತು ತುಮಕೂರಿನ ವಸಂತ ನರಸಾಪುರಗಳಲ್ಲಿ ಹೂಡಿಕೆ ಮಾಡಲಿವೆ. ಇಲ್ಲಿ ಒಟ್ಟು 9,200 ಉದ್ಯೋಗಗಳನ್ನು ಸೃಜನೆಯಾಗಲಿವೆ

ಈ ಮೇಲ್ಕಂಡ ಉದ್ದಿಮೆಗಳು ಕನಿಷ್ಠ 96 ಕೋಟಿ ರೂ.ಗಳಿಂದ ಹಿಡಿದು ಗರಿಷ್ಠ 490.50 ಕೋಟಿ ರೂ.ವರೆಗೂ ಬಂಡವಾಳ ತೊಡಗಿಸಲಿವೆ. ಅಷ್ಟೇ ಅಲ್ಲದೇ ಕನಿಷ್ಠ 15 ಕೋಟಿ ರೂ.ಗಳಿಂದ ಹಿಡಿದು ಗರಿಷ್ಠ 50 ಕೋಟಿ ರೂ.ವರೆಗೂ ಹೂಡಿಕೆ ಮಾಡುವ ಪ್ರಸ್ತಾವನೆ ಸಲ್ಲಿಸಿದ್ದ 59 ಹೊಸ ಯೋಜನೆಗಳಿಗೂ ಒಪ್ಪಿಗೆ ನೀಡಲಾಗಿದೆ.

Karnataka Govt Approved For 73 Projects of Industry Related ₹3,935 Crore Investment,

ಹೆಚ್ಚುವರಿ ಬಂಡವಾಳ ಹೂಡಿಕೆಗೆ ಅನುಮೋದನೆ

ಇದರಿಂದ 5,297 ಮಂದಿಗೆ ಉದ್ಯೋಗ ಸಿಗಲಿದೆ. ಜೊತೆಗೆ, ಹೆಚ್ಚುವರಿ ಬಂಡವಾಳ ಹೂಡಿಕೆಯ 5 ಯೋಜನೆಗಳಿಗೂ ಅನುಮೋದನೆ ಕೊಟ್ಟಿದ್ದು, ಇದರಿಂದ 87.67 ಕೋಟಿ ರೂ. ಬಂಡವಾಳ ರಾಜ್ಯಕ್ಕೆ ಹರಿದು ಬರಲಿದೆ ಎಂದು ತಿಳಿಸಿದರು.

ರಾಜ್ಯ ಸರಕಾರವು ಉದ್ಯಮಸ್ನೇಹಿಯಾಗಿದ್ದು, ಹೂಡಿಕೆದಾರರಿಗೆ ಸುಗಮ ಒಪ್ಪಿಗೆ ಸಿಗುವಂತೆ ನಿಜವಾದ ಅರ್ಥದಲ್ಲಿ ಏಕಗವಾಕ್ಷಿ ಪದ್ಧತಿಯನ್ನು ಜಾರಿಗೆ ತಂದಿದೆ. ಹೂಡಿಕೆದಾರರನ್ನು ಉತ್ತೇಜಿಸವಂತಹ ಹಲವು ಅಂಶಗಳನ್ನು 2020-25ರ ಕೈಗಾರಿಕಾ ನೀತಿಯಲ್ಲಿ ಅಳವಡಿಸಿಕೊಂಡಿದ್ದು, ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಆದ್ಯತೆ ಕೊಡಲಾಗಿದೆ. ಇದರಲ್ಲಿ ಪ್ರಾದೇಶಿಕ ಅಸಮಾನತೆ ನಿವಾರಣೆಗೂ ಗಮನ ಹರಿಸಲಾಗಿದೆ. ರಾಜ್ಯದ ಎಲ್ಲ ಭಾಗಗಳಲ್ಲೂ ಹೂಡಿಕೆ ಆಗುವಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ವ್ಯವಸ್ಥಾಪಕ ನಿರ್ದೇಶಕ ಡಾ.ಮಹೇಶ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ್ ಮತ್ತಿತರರು ಪಾಲ್ಗೊಂಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+