Industry Reservation: ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಿಗಳ ಮೀಸಲು ಜಾಗ ಪ್ರಮಾಣ ಏರಿಕೆ
ಬೆಂಗಳೂರು, ಫೆಬ್ರವರಿ 27: ಕರ್ನಾಟಕ ರಾಜ್ಯ ಸರ್ಕಾರವು ದಲಿತ ಉದ್ಯಮಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಈ ದಲಿತ ಉದ್ಯಮಿಗಳಿಗೂ ರಾಜ್ಯ ಕೈಗಾರಿಕೆ ಪ್ರದೇಶಗಳಲ್ಲಿ ಮೀಸಲು ಜಾಗ ಸಿಗಲಿದೆ.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಲಿಯಿಂದ ಅಭಿವೃದ್ಧಿಪಡಿಸಲಾಗಿರುವ ಕೈಗಾರಿಕಾ ಪ್ರದೇಶಗಳಲ್ಲಿ ಇನ್ನು ಮುಂದೆ ದಲಿತ ಉದ್ಯಮಿಗಳಿಗೆ ನಿಯಮಾನುಸಾರವಾಗಿ ಶೇಕಡ 24.1ರಷ್ಟು ಜಾಗವನ್ನು ಮೀಸಲಿಡಲಾಗುವುದು. ಈ ವಿಚಾರದಲ್ಲಿ ನಿಯಮಗಳ ಉಲ್ಲಂಘನೆಗೆ ಅವಕಾಶ ಕೊಡುವುದಿಲ್ಲ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದರು.

ಸೋಮವಾರ ಖನಿಜ ಭವನದಲ್ಲಿ ತಮ್ಮನ್ನು ಭೇಟಿಯಾಗಿ ಈ ವಿಚಾರವನ್ನು ಪ್ರಸ್ತಾಪಿಸಿದ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಕಾರ್ಯಾಧ್ಯಕ್ಷ ಶ್ರೀನಿವಾಸನ್ ನೇತೃತ್ವದ ನಿಯೋಗಕ್ಕೆ ಅವರು ಈ ಜಾಗ ಮೀಸಲು ಭರವಸೆ ನೀಡಿದರು.
ಶೇ.16ರಿಂದ ಶೇ.24.1ಕ್ಕೆ ಹೆಚ್ಚಳ
ನಿಯೋಗವು ಸಚಿವರ ಜತೆ ಕೆಲವು ವಿಚಾರಗಳನ್ನು ಚರ್ಚಿಸಿತು. ಕೆಐಎಡಿಬಿ ಅಭಿವೃದ್ಧಿಪಡಿಸುವ ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಗಳಿಗೆ ನಿಯಮಾನುಸಾರ ಶೇಕಡ 24.1ರಷ್ಟು ಜಾಗವನ್ನು ಮೀಸಲಿಡಬೇಕು. ಆದರೆ ವಾಸ್ತವದಲ್ಲಿ ಇದು ಶೇ.16ರಷ್ಟು ಮಾತ್ರ ಜಾರಿಯಲ್ಲಿದೆ.
ವಿಶೇಷವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಯ 12 ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಿಗಳಿಗೆ 653 ಎಕರೆ ಜಾಗ ಕೊಡುವುದು ಬಾಕಿ ಇದೆ ಎಂದು ಶ್ರೀನಿವಾಸ ಅವರು ಸಚಿವರ ಗಮನಕ್ಕೆ ತಂದರು.

ಅಕ್ಕಪಕ್ಕದ ಕೈಗಾರಿಕಾ ಪ್ರದೇಶಗಳಲ್ಲಿ ಮೀಸಲು
ಇದಕ್ಕೆ ಸ್ಪಂದಿಸಿದ ಸಚಿವರು, ಈಗಾಗಲೇ ಉದ್ದಿಮೆಗಳು ನೆಲೆಯೂರಿರುವ ಕೈಗಾರಿಕಾ ಪ್ರದೇಶಗಳಲ್ಲಿ ಏನನ್ನೂ ಮಾಡುವ ಸ್ಥಿತಿಯಲ್ಲಿಲ್ಲ. ಆದರೆ, ಅಕ್ಕಪಕ್ಕದ ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ಯಮಿಗಳಿಗೆ ಶೇಕಡ 24.1ರಷ್ಟು ಜಾಗವನ್ನು ಮೀಸಲಿಡಲಾಗುವುದು. ಈ ವಿಷಯದಲ್ಲಿ ಸರ್ಕಾರ ಬದ್ಧತೆಯ ಬಗ್ಗೆ ಅನುಮಾನ ಬೇಡ ಎಂದರು.
ದಲಿತ ಉದ್ಯಮಿಗಳಿಗೆ ಜಾಗ ಮೀಸಲು ಕುರಿತು ಅಧಿಕಾರಿಗಳಿಗೆ ಈ ಬಗ್ಗೆ ತಕ್ಷಣವೇ ಸೂಚನೆ ಕೊಡಲಾಗುವುದು. ಜತೆಗೆ ನಿಮ್ಮ ಸಂಘದ ಜೊತೆ ಇನ್ನೊಂದು ಸುತ್ತಿನ ಸಭೆ ನಡೆಸಲಾಗುವುದು ಎಂದು ಆಶ್ವಾಸನೆ ಕೊಟ್ಟರು.
ಇದು ದಲಿತಪರ ಸರ್ಕಾರ
ದಲಿತ ಉದ್ಯಮಿಗಳಿಗೆ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅನ್ಯಾಯವಾಗಿಲ್ಲ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಈ ಸಮಸ್ಯೆ ಉಂಟಾಗಿದೆ. ನಮ್ಮ ಸರ್ಕಾರವು ದಲಿತರ ಪರವಾಗಿದೆ. ಇದಕ್ಕೆ ತಕ್ಕಂತೆ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಅವರು ವಿವರಿಸಿದರು.
ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ ಉಪಸ್ಥಿತರಿದ್ದರು.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್











Click it and Unblock the Notifications