RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್: ಸಚಿವ ಸಂಪುಟದಲ್ಲಿ ನಿರ್ಧಾರ
ಬೆಂಗಳೂರು, ಅಕ್ಟೋಬರ್ 16: ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಶಾಲಾ, ಕಾಲೇಜುಗಳ ಆವರಣ (ಸರ್ಕಾರಿ ಜಾಗಗಳಲ್ಲಿ) ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಚಟುವಟಿಕೆಗಳು ಸೇರಿದಂತೆ ಖಾಸಗಿ ಕಾರ್ಯಕ್ರಮಗಳನ್ನು ನಿಷೇಧಿಸಿದಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಗುರುವಾರ ಮಹತ್ವ ನಿರ್ಧಾರ ಕೈಗೊಂಡಿದೆ. ವಿಶೇಷವೆಂದರೆ ಆರ್ಎಸ್ಎಸ್ ಹೆಸರು ಉಲ್ಲೇಖಿಸದೇ ಜಾಣ ನಡೆ ಪ್ರದರ್ಶಿಸಿದೆ.
ಹೌದು, ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ ಚಟುವಟಿಕೆ ನಿಷೇಧಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದು ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಗೆ ಕಡಿವಾಣ ಹಾಕುವ ಬಗ್ಗೆ ಇಂದಿನ ಸಭೆಯಲ್ಲಿ ತಿರ್ಮಾನಿಸಲಾಗುವುದು. ತಮಿಳುನಾಡು ಮಾದರಿ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸಭೆ ಮುನ್ನ ತಿಳಿಸಿದ್ದರು.

ನಂತರ ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ಸಚಿವರು, ಸಿಎ, ಡಿಸಿಎಂ ಚರ್ಚಿಸಿದರು. ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಧರ್ಮದ ಖಾಸಗಿ ಕಾರ್ಯಕ್ರಮಗಳಿಗೆ ಸರ್ಕಾರಿ ಜಾಗಗಳಲ್ಲಿ ನಿಷೇಧಿಸಲಾಗಿದೆ. ಇದು ಕೇವಲ ಆರ್ಎಸ್ಎಸ್ ಮಾತ್ರವಲ್ಲ ಇತರ ಖಾಸಗಿ ಸಂಘಟನೆ, ಸಂಸ್ಥೆಗಳಿಗೂ ಅನ್ವಯವಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಈ ಮೂಲಕ ಆರ್ಎಸ್ಎಸ್ ಚಟುವಟಿಕೆಗೆ ಸರ್ಕಾರ ಮೂಗುದಾರ ಹಾಕಿದೆ. ಆರ್ಎಸ್ಎಸ್ ಬೈಠಕ್, ಕವಾಯಿತಿ ನಿರ್ಬಂಧಿಸಿದಂತಾಗಿದೆ.
ತಮಿಳುನಾಡು ಮಾದರಿ ಅನುಸರಿಸಿದ ರಾಜ್ಯ ಸರ್ಕಾರ ಈ ತಿರ್ಮಾನಕ್ಕೆ ಬಂದಿದೆ. ಅಲ್ಲಿ ಸರ್ಕಾರಿ ಜಾಗಗಳಲ್ಲಿ ಯಾವುದೊ ಒಂದು ಖಾಸಗಿ ಸಂಸ್ಥೆ, ಸಂಘಟನೆ ಯಾವುದಾದರೂ ಕಾರ್ಯಕ್ರಮ ನಡೆಸಲು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಅದೇ ರೀತಿ ಇಲ್ಲಿಯೂ ಮಾಡಲಾಗಿದೆ. ಶೀಘ್ರವೇ ಈ ಕುರಿತು ಹೊಸ ನಿಯಮ ಜಾರಿಗೆ ತರಲು ಸರ್ಕಾರ ನಿರ್ಧಾರ. ಸಂಪುಟದಲ್ಲಿ ಖಾಸಗಿ ಸಂಘಟನೆ, ಸಂಸ್ಥೆ ಎಂದಿರುವ ನಾಯಕರು ಎಲ್ಲಿಯೂ ಆರ್ಎಸ್ಎಸ್ ಎಂದು ಉಲ್ಲೇಖಿಸದೇ ನಿರ್ಬಂಧ ನಿಯಮ ಜಾರಿಗೆ ತಂದಿದೆ.
ಟಾರ್ಗೆಟ್ ರಾಜಕಾರಣ ಬೇಕಿಲ್ಲ: ಸಚಿವೆ
ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಚಟುವಟಿಕೆ ನಿಷೇಧಿಸಿದ ಸಂಪುಟ ನಿರ್ಧಾರದ ಕುರಿತು ಬೆಂಗಳೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರತಿಕ್ರಿಯಿಸಿದರು. ನಮಗೆ ಟಾರ್ಗೆಟ್ ರಾಜಕಾರಣ ಬೇಕಿಲ್ಲ. ಈ ಹಿಂದೆ 2013ರಲ್ಲಿ ಬಿಜೆಪಿ ಸರ್ಕಾರ ಮಾಡಿದ್ದ ಆದೇಶ ಮಾಡಿದ್ದನ್ನೇ ನಾವು ಮುಂದುವರಿಸಿದ್ದೇವೆ. ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಮಾಡಿದರೆ ಇತರರಿಗೆ ತೊಂದರೆ ಆಗುತ್ತದೆ ಎಂದು ಹೇಳಿದರು.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications