'ಕಾನೂನು ತಂತ್ರಗಾರಿಕೆಯಲ್ಲಿ ದಾರಿ ತಪ್ಪಿತು ರಾಜ್ಯ ಸರ್ಕಾರ'
ಬೆಂಗಳೂರು, ಸೆಪ್ಟೆಂಬರ್ 12: ಕಾವೇರಿ ನೀರು ಹಂಚಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಕಾನೂನು ತಂತ್ರಗಾರಿಕೆಯನ್ನು ಸರಿಯಾಗಿ ರೂಪಿಸದೆ ದಾರಿ ತಪ್ಪಿದೆ ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಟೀಕಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮೇಲ್ಮನವಿ ಸಲ್ಲಿಸಿದ ನಂತರ ರಾಜೀವ್ ಚಂದ್ರಶೇಖರ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ.[Live : 12 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ]

ಕಳೆದ ವಾರ ಹಿರಿಯ ವಕೀಲ ಫಾಲಿ ನಾರಿಮನ್ ನೀರು ಬಿಡುವ ವಿಚಾರವಾಗಿ ಸುಪ್ರೀಂ ಕೋರ್ಟ್ ಗೆ ತಿಳಿಸುವ ಮುನ್ನ ರಾಜ್ಯ ಸರಕಾರದ ಬಳಿ ಮಾತುಕತೆ ನಡೆಸಿರಲಿಲ್ಲ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದು, ಆ ಹಿನ್ನೆಲೆಯಲ್ಲಿ ಅವರು ಮಾತನಾಡಿದ್ದಾರೆ.
ರಾಜ್ಯ ಸರಕಾರದ ಕ್ರಮವನ್ನು ಟೀಕಿಸಿದ್ದಾರೆ. "ಈ ಪ್ರಕರಣದಲ್ಲಿ ರಾಜ್ಯದ ಕಾನೂನು ತಂತ್ರಗಾರಿಕೆ ದಾರಿ ತಪ್ಪಿದೆ. ಸರಕಾರದ ಪ್ರತಿನಿಧಿಯೊಬ್ಬರು 10 ಸಾವಿರ ಕ್ಯೂಸೆಕ್ ನೀರು ಬಿಡುವ" ಪ್ರಸ್ತಾವ ಇರಿಸಿದ್ದರು ಎಂದು ಅವರು ಹೇಳಿದ್ದಾರೆ.[ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ]
ಕರ್ನಾಟಕಕ್ಕೆ ಹಿನ್ನಡೆಯಾದ ಹಿನ್ನೆಲೆಯಲ್ಲಿ ವಕೀಲ ಫಾಲಿ ನಾರಿಮನ್ ಬದಲಿಸಬೇಕು ಎಂಬ ಒತ್ತಡದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದಕ್ಕೆ ವಕೀಲರು ಹೊಣೆಯಲ್ಲ, ಕರ್ನಾಟಕ ಜವಾಬ್ದಾರಿ ಎಂದಿದ್ದಾರೆ. ನಾರಿಮನ್ ಬಗ್ಗೆ ಗೌರವದಿಂದ ಮಾತನಾಡಿರುವ ಅವರು, 32 ವರ್ಷಗಳಿಂದ ನಾರಿಮನ್ ಕರ್ನಾಟಕದ ಕಾನೂನು ಸಲಹೆಗಾರರಾಗಿದ್ದಾರೆ. ದೇಶದ ಪ್ರಕಾಂಡ ಕಾನೂನು ಪಂಡಿತರ ಪೈಕಿ ಅವರೂ ಒಬ್ಬರು ಎಂದು ಹೇಳಿದ್ದಾರೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಪ್ರಕರಣದಲ್ಲಿ 2014ರಲ್ಲಿ ಜಯಲಲಿತಾ ಪರವಾಗಿ ವಾದಿಸಿದ್ದ ನಾರಿಮನ್, ಆಕೆಗೆ ಜಾಮೀನು ಸಿಗುವಂತೆ ಮಾಡಿದ್ದರು. ಇದು "ಹಿತಾಸಕ್ತಿ ಸಂಘರ್ಷ"ದ ವಿಚಾರವೇ ಎಂಬ ಪ್ರಶ್ನೆಗೆ ರಾಜೀವ್ ಚಂದ್ರಶೇಖರ್ ಸ್ಪಷ್ಟವಾಗಿ ನಿರಾಕರಿಸಿದ್ದಾರೆ.
ಮಹದಾಯಿ ಜಲ ವಿವಾದದಲ್ಲೂ ಕರ್ನಾಟಕ ಸರಕಾರ ಕಾನೂನು ವಿಚಾರದಲ್ಲಿ ಗಲಿಬಿಲಿ ಮಾಡಿದೆ. ಮಧ್ಯಂತರ ಅರ್ಜಿಯನ್ನು ಸಲ್ಲಿಸುವುದು ಬೇಡ ಎಂದು ಕಾನೂನು ತಜ್ಞರ ತಂಡದ ಸಲಹೆಯನ್ನೂ ಮೀರಿ, ಜುಲೈನಲ್ಲಿ ಅರ್ಜಿ ಸಲ್ಲಿಸಿದೆ. ಸರಕಾರ ಆ ತಕ್ಷಣದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆಯೇ ವಿನಾ ದೀರ್ಘಾವಧಿ ಆಲೋಚನೆ ಮಾಡುತ್ತಿಲ್ಲ ಎಂದು ಅವರು ಅರೋಪಿಸಿದ್ದಾರೆ.[ಕಾವೇರಿ ವಿವಾದ : ಸುಪ್ರೀಂಗೆ ಸಲ್ಲಿಸಿರುವ ಅರ್ಜಿಯಲ್ಲೇನಿದೆ?]
ಸರಕಾರ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಕಳೆದ ವರ್ಷ ರೈತರಿಗೆ ಬೆಳೆವಿಮೆ ನೀಡಬೇಕಿತ್ತು. ಕುಡಿಯುವ ನೀರಿನ ಪರ್ಯಾಯ ಯೋಜನೆಗಳ ಬಗ್ಗೆಯೂ ಆಲೋಚಿಸಬೇಕು. ರೈತರಿಗೆ ಕೃಷಿ ಚಟುವಟಿಕೆಗಳಿಗೆ ನೀರು ಹರಿಸುವುದಕ್ಕೆ, ಬೆಂಗಳೂರಿಗೆ ಕುಡಿಯುವ ನೀರಿಗೆ ಏನು ಮಾಡುತ್ತಾರೆ ಎಂಬುದಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ












Click it and Unblock the Notifications