ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಂಡಾಯ ಶಮನಕ್ಕಾಗಿ ಜೂನ್ 17ರಂದು ಸಚಿವ ಸಂಪುಟ ವಿಸ್ತರಣೆ

By Sachhidananda Acharya
|
Google Oneindia Kannada News

ಬೆಂಗಳೂರು, ಜೂನ್ 14: ಅಂದುಕೊಂಡಂತೆ ನಡೆದರೆ ಇದೇ ಜೂನ್ 17ರಂದು ಭಾನುವಾರ ಎಚ್.ಡಿ. ಕುಮಾರಸ್ವಾಮಿ ಸರಕಾರದ ಸಂಪುಟ ವಿಸ್ತರಣೆ ನಡೆಯಲಿದೆ. ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಭಿನ್ನಮತೀಯ ಚಟುವಟಿಕೆಗಳಿಗೆ ಲಗಾಮು ಹಾಕಲು ಈ ನಿರ್ಧಾರಕ್ಕೆ ಬರಲಾಗಿದೆ.

ಒಟ್ಟು ಜೆಡಿಎಸ್ ಖೋಟಾದಲ್ಲಿ 1 ಮತ್ತು ಕಾಂಗ್ರೆಸ್ ಖೋಟಾದಲ್ಲಿ 6 ಸಚಿವ ಸ್ಥಾನಗಳು ಖಾಲಿ ಇವೆ. ಇದರಲ್ಲಿ ಕಾಂಗ್ರೆಸ್ ತನ್ನ ಖೋಟಾದ 4 ಸ್ಥಾನಗಳನ್ನು ಭರ್ತಿ ಮಾಡಲು ಮುಂದಾಗಿದೆ ಎಂದು ಮೂಲಗಳು ಹೇಳಿವೆ.

Karnataka govt cabinet expansion on June 17

ತಮ್ಮ ಪಕ್ಷದಲ್ಲಿ ಬಂಡಾಯ ಚಟುವಟಿಕೆಗಳು ಜೋರಾಗಿರುವುದನ್ನು ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಕುಮಾರಸ್ವಾಮಿಯವರ ಗಮನಕ್ಕೆ ತಂದಿರುವುದಲ್ಲದೆ, ಸಚಿವ ಸಂಪುಟ ವಿಸ್ತರಣೆಗೆ ಅವರ ಮನವೊಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಹೀಗಾಗಿ ಇದೇ ಭಾನುವಾರ ಮತ್ತೊಂದು ಸುತ್ತಿನ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ನಿಂದ ಯಾರೆಲ್ಲಾ ಸಚಿವರಾಗುತ್ತಾರೆ? ಅತೃಪ್ತ ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗಾ ರೆಡ್ಡಿ, ಎಚ್.ಕೆ. ಪಾಟೀಲ್ ರಂಥ ಪ್ರಮುಖರಿಗೆ ಮಣೆ ಹಾಕ್ತಾರಾ ಕಾದು ನೋಡಬೇಕಿದೆ.

English summary
The Cabinet expansion of HD Kumaraswamy government will be held on June 17th Sunday. The decision has been taken to accommodate the posts to dissident MLAs in the Congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X