ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇದೇ ತಿಂಗಳು ನಡೆಯಬೇಕಿದ್ದ ಗ್ರಾ.ಪಂ. ಚುನಾವಣೆ ಮುಂದೂಡಿಕೆ

|
Google Oneindia Kannada News

ಬೆಂಗಳೂರು, ಮೇ 05: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ನಿಂದಾಗಿ ದೇಶದಲ್ಲಿ ಅಲ್ಲೊಲ ಕಲ್ಲೊಲ ಉಂಟಾಗಿದೆ. ಕೊರೊನಾ ಮಹಾ‌ಮಾರಿಯ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯ್ತಿಗಳ ಚುನಾವಣೆಯನ್ನು ಮುಂದೂಡಿ ಮಧ್ಯಂತರ ಅವಧಿಗೆ ಆಡಳಿತ ಸಮಿತಿ ಅಥವಾ ಆಡಳಿತಾಧಿಕಾರಿಗಳನ್ನು ನೇಮಿಸುವ ಕುರಿತು ತೀರ್ಮಾನ ಮಾಡಲಾಗಿದೆ.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಚಿವರ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ರಾಜ್ಯದ ಗ್ರಾಮ ಪಂಚಾಯ್ತಿಗಳ ಸಾರ್ವತ್ರಿಕ ಚುನಾವಣೆಯು ಇದೇ ತಿಂಗಳಿ(ಮೇ)ನಲ್ಲಿ ನಡೆಯಬೇಕಾಗಿತ್ತು. ಕೊರೊನ ಮಹಾಮಾರಿಯ ತುರ್ತು ಪರಿಸ್ಥಿತಿಯಿಂದಾಗಿ ಅನಿವಾರ್ಯವಾಗಿ ಚುನಾವಣೆಯನ್ನು ಮುಂದೂಡಲು ತೀರ್ಮಾನಿಸಲಾಗಿದೆ. ಈ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ.

state government decided to postpone the gram panchayat election and appoint administrator

ಗ್ರಾಮ ಪಂಚಾಯ್ತಿ ಚುನಾವಣೆ ಮುಂದೂಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸೂಚನೆಯಂತೆ ಸಚಿವರಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್, ಕೋಟ ಶ್ರೀನಿವಾಸ ಪೂಜಾರಿ, ಜೆ.ಸಿ. ಮಾಧುಸ್ವಾಮಿ ಅವರು ಸಭೆ ನಡೆಸಿ, ಚರ್ಚಿಸಿದರು.

English summary
In the wake of the Corona pandemic, it has been decided to postpone the election of gram panchayat and appoint a governing body or administrator for an interim period.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X