ಕರ್ನಾಟಕ: ಹಿಂದುತ್ವ, ಕನ್ನಡಪರ ಹೋರಾಟಗಾರರ ಮೇಲಿನ 33 ಕೇಸ್ ವಾಪಸ್ಗೆ ನಿರ್ಧಾರ
ಬೆಂಗಳೂರು ಸೆಪ್ಟಂಬರ್ 20: ಸಂಪುಟ ಉಪಸಮಿತಿಯ ಮಾಡಿರುವ ಶಿಫಾರಸುಗಳನ್ನು ಆಧರಿಸಿ ರಾಜ್ಯದಲ್ಲಿ 33 ಹಿಂದುತ್ವ ಹಾಗೂ ಕನ್ನಡಪರ ಹೋರಾಟಗಾರರ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ಹಿಂಪಡೆಯಲು ಸಚಿವ ಸಂಪುಟವು ಸೋಮವಾರ ನಿರ್ಧರಿಸಿದೆ.
ರಾಜ್ಯ ಸರ್ಕಾರದ ಈ ನಿರ್ಧಾರದಲ್ಲಿ ರೈತರು ಸೇರಿದಂತೆ ವಿದ್ಯಾರ್ಥಿಗಳ ವಿರುದ್ಧ ಮೊಕದ್ದಮೆ ಹಿಂಪಡೆಯಲಾಗುವುದು. ಮುಖ್ಯವಾಗಿ ಇದರಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತದರ ಅಂಗ ಸಂಸ್ಥೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಳೂರಿನ ಅಧಿಕೃತ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದ್ದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು ಇದ್ದಾರೆ ಎಂದು ಸಂಪುಟದ ವರದಿ ತಿಳಿಸಿದೆ.
ಇದಕ್ಕೂ ಮೊದಲು ಸಚಿವ ಸಂಪುಟ ಸಭೆ ಪೌರ ಕಾರ್ಮಿಕರನ್ನು ಸೇವೆಯಲ್ಲಿ ಹಂತ ಹಂತವಾಗಿ ಕಾಯಂ ಮಾಡಲು ನಿರ್ಧರಿಸಿತು. ಅಲ್ಲದೇ ಅವರಲ್ಲಿ 11,133 ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರನ್ನಾಗಿ ತೆಗೆದುಕೊಳ್ಳಲು ಸಹ ಅನುಮತಿಸಲಾಗಿದೆ. ಅವರಿಗೆ ವೇತನ ಶ್ರೇಣಿ 17,000 ರಿಂದ 28,980 ರೂ.ವರೆಗೆ ನೀಡಲು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಮುಂದಿನ ಹಂತದಲ್ಲಿ 15ಸಾವಿರ ಪೌರ ಕಾರ್ಮಿಕರ ಪರಿಗಣನೆ
ಪೌರ ಕಾರ್ಮಿಕರು ಬಹುಕಾಲದಿಂದಲೂ ಕೆಲಸ ಖಾಯಂಮಾತಿಗೆ ಒತ್ತಾಯಿಸುತ್ತಲೆ ಬಂದಿದ್ದರು. ಇದೀಗ ಮೊದಲ ಹಂತದಲ್ಲಿ 11,133 ಮಂದಿಯನ್ನು ಪರಿಗಣಿಸಲಾಗುತ್ತಿದೆ. ಬಾಕಿ ಇರುವ 15,000 ಪೌರ ಕಾರ್ಮಿಕರನ್ನು ಮುಂದಿನ ಹಂತಗಳಲ್ಲಿ ಸರ್ಕಾರದಲ್ಲಿನ ಆರ್ಥಿಕ ಸಂಪನ್ಮೂಲಗಳ ಲಭ್ಯತೆ ಆಧಾರದಲ್ಲಿ ಪರಿಗಣಿಸುವ ಚಿಂತನೆ ಇದೆ ಎಂದು ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಸರ್ಕಾರ ಪರಿಗಣಿಸಿರುವ 11ಸಾವಿರಕ್ಕೂ ಅಧಿಕ ಪೌರ ಕಾರ್ಮಿಕರ ಪೈಕಿ 3,673 ಮಂದಿ ರಾಜಧಾನಿ ಬೆಂಗಳೂರಿನಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅದರಲ್ಲಿ 5,333 ಮಂದಿ ಇನ್ನಿತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ, ಟೌನ್ ಮುನ್ಸಿಪಲ್ ಕೌನ್ಸಿಲ್ (ಟಿಎಂಸಿ) ಮತ್ತು ಪಟ್ಟಣ ಪಂಚಾಯಿತಿಗಳಡಿ ಮತ್ತು 1,927 ಮಂದಿ ಬೆಂಗಳೂರು ಹೊಲ ವಲಯದ ಇತರ ಹತ್ತು ನಗರ ಪಾಲಿಕೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ವಿವರಿಸಿದರು.

ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್ಟಿ)ಗೆ ಸೇರಿದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಗೃಹ ಉದ್ದೇಶಗಳಿಗಾಗಿ 75 ಯೂನಿಟ್ವರೆಗೆ ಉಚಿತ ವಿದ್ಯುತ್ ಒದಗಿಸಲು ಸಂಪುಟ ಒಪ್ಪಿಗೆ ಸೂಚಿಸಿದೆ. ಇದರಿಂದ ಸಾಕಷ್ಟು ಬಡ ವರ್ಗದ ಕೆಳ ಸಮುದಾಯಗಳಿಗೆ ಅನುಕೂಲವಾಗಲಿದೆ ಎಂದರು.
-
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications