ಕರ್ನಾಟಕ: 15 ವರ್ಷದ ಹಳೆ ವಾಹನಗಳನ್ನು ಗುಜರಿಗೆ ಹಾಕುವ ಬಗ್ಗೆ ಮಹತ್ವದ ನಿರ್ಧಾರ, ಇಲ್ಲಿದೆ ವಿವರ
ಬೆಂಗಳೂರು, ಸೆಪ್ಟೆಂಬರ್, 23: ಕೇಂದ್ರ ಸರ್ಕಾರದ 2022ರ ನೋಂದಾಯಿತ ವಾಹನಗಳ ಸ್ಕ್ರಾಪಿಂಗ್ ನೀತಿಯ ಅನ್ವಯದಡಿ 15 ವರ್ಷದ ಹಳೆಯ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕುವ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಹಾಗಾದರೆ ಈ ನಿರ್ಧಾರದಿಂದ ಸರ್ಕಾರಕ್ಕೆ ತಗಲುವ ವೆಚ್ಚ ಎಷ್ಟು? ಹಾಗೂ ಕೇಂದ್ರ ಸರ್ಕಾರದಿಂದ ಬರುವ ಪ್ರೋತ್ಸಾಹ ಧನ ಎಷ್ಟು ಅನ್ನುವ ವಿವರನ್ನು ಇಲ್ಲಿ ತಿಳಿಯಿರಿ.
ಕೇಂದ್ರ ಸರ್ಕಾರದ 2022ರ ನೋಂದಾಯಿತ ವಾಹನಗಳ ಸ್ಕ್ರಾಪಿಂಗ್ ನೀತಿಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸುವ ಮೂಲಕ ಸರ್ಕಾರದ ಬಳಿಯಿರುವ 15 ವರ್ಷದ ಹಳೆ ವಾಹನಗಳನ್ನು ಗುಜರಿಗೆ ಹಾಕಲು ತೀರ್ಮಾನ ಮಾಡಲಾಗಿದೆ ಎಂದು ಸಂಪುಟ ಸಭೆಯ ನಂತರ ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರದ ಬಳಿ 15 ವರ್ಷಕ್ಕಿಂತ ಹಳೆಯ 15,295 ವಾಹನಗಳಿದ್ದು, ಇವುಗಳನ್ನು ಗುಜರಿಗೆ ಹಾಕಿ ಹೊಸ ವಾಹನಗಳನ್ನು ಪಡೆಯಬೇಕಿದೆ. ಇದರಿಂದ ಸರ್ಕಾರಕ್ಕೆ 500 ಕೋಟಿ ರೂಪಾಯಿನಷ್ಟು ವೆಚ್ಚ ತಗಲುತ್ತದೆ. ಮೊದಲ ಹಂತದಲ್ಲಿ 5,000 ವಾಹನಗಳನ್ನು ಗುಜರಿಗೆ ಹಾಕಲು ನಿರ್ಧರಿಸಲಾಗಿದ್ದು, ನಂತರ ಹಂತ ಹಂತವಾಗಿ ಉಳಿದ ವಾಹನಗಳನ್ನು ಗುಜರಿಗೆ ಹಾಕಲಾಗುವುದು. ಇದಕ್ಕೆ ಕೇಂದ್ರ ಸರ್ಕಾರದಿಂದ 100 ಕೋಟಿ ರೂಪಾಯಿನಷ್ಟು ಪ್ರೋತ್ಸಾಹ ಧನ ದೊರೆಯಲಿದೆ ಎನ್ನುವ ಮಾಹಿತಿಯನ್ನು ನೀಡಿದರು.
15 ವರ್ಷ ಹಳೆಯ ವಾಹನಗಳನ್ನಯ ಗುಜರಿಗೆ ಹಾಕುವ ಈ ನೀತಿಯು ಖಾಸಗಿ ವಾಹನಗಳಿಗೂ ಅನ್ವಯ ಆಗಲಿದೆ. ಈ ನಿಯಮವನ್ನು ಖಾಸಗಿ ವಾಹನಗಳಿಗೂ ಜಾರಿ ಮಾಡಲು ಕೇಂದ್ರ ಸರ್ಕಾರದ ಒತ್ತಡ ಇದೆ. ಸದ್ಯ ಸರ್ಕಾರಿ ವಾಹನಗಳಿಗೆ ಮಾತ್ರ ಇದು ಜಾರಿ ಆಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ










Click it and Unblock the Notifications