ಶೇ.30ರಷ್ಟು ವೇತನ ಹೆಚ್ಚಳಕ್ಕೆ ಆಗ್ರಹಿಸಿದ ಸರ್ಕಾರಿ ನೌಕರರು!
ಬೆಂಗಳೂರು, ಸೆ. 12: ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಿರುವ ಶ್ರೀನಿವಾಸಮೂರ್ತಿ ನೇತೃತ್ವದ ಆರನೇ ವೇತನ ಆಯೋಗದ ಅವಧಿಯನ್ನು 2018ರ ಜನವರಿ 31ರವರೆಗೆ ವಿಸ್ತರಿಸಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಆದರೆ, ವೇತನ ಪರಿಷ್ಕರಣೆ ವಿಳಂಬವಾಗಲಿದ್ದು, ಮಧ್ಯಂತರ ಪರಿಹಾರ ರೂಪದಲ್ಲಿ ಶೇ.30ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ. ಮಂಜೇಗೌಡ ಅವರು ಈ ಬಗ್ಗೆ ಮಾತನಾಡಿ, ಇತ್ತೀಚೆಗೆ ವೇತನ ಆಯೋಗ ಮತ್ತೆ ನಾಲ್ಕು ತಿಂಗಳು ಸಮಯ ನೀಡುವಂತೆ ಕೋರಿದೆ ಮತ್ತು ಸರ್ಕಾರ ಆಯೋಗದ ಅವಧಿಯನ್ನು ಈಗ ವಿಸ್ತರಿಸಿದೆ. ಮಧ್ಯಂತರ ಪರಿಹಾರಕ್ಕೆ ನಾಲ್ಕು ತಿಂಗಳು ಕಾಯುವಂತೆ ನಮಗೆ ಹೇಳಲಾಗಿತ್ತು. ಆದರೆ ಹೊಸ ವಿಸ್ತರಣೆಯ ಯೋಜನೆಯ ಅನ್ವಯ ಸರ್ಕಾರಕ್ಕೆ ಮಧ್ಯಂತರ ಪರಿಹಾರವಾಗಿ ಇದೇ ವರ್ಷ ಏಪ್ರಿಲ್ 01ರಿಂದ ಶೇ.30ರಷ್ಟು ವೇತನಗಳನ್ನು ಹೆಚ್ಚಿಸಲು ಕೋರುತ್ತಿದ್ದೇವೆ ಎಂದರು.

ಐಎಎಸ್ ನಿವೃತ್ತ ಅಧಿಕಾರಿ ಎಂ.ಆರ್. ಶ್ರೀನಿವಾಸ ಮೂರ್ತಿ ಅಧ್ಯಕ್ಷತೆಯಲ್ಲಿ ಇದೇ ವರ್ಷದ ಜೂನ್ 1ರಂದು ವೇತನ ಆಯೋಗ ರಚಿಸಿ ಆದೇಶ ಹೊರಡಿಸಿದ್ದ ಸರ್ಕಾರ, ನಾಲ್ಕು ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಸೂಚಿಸಿತ್ತು. ಆದರೆ, ಈಗ ನವೆಂಬರ್ ತಿಂಗಳೊಳಗೆ ವರದಿ ಸಲ್ಲಿಸಲಿ ಹಾಗೂ ಈಗ ಮಧ್ಯಂತರ ಪರಿಹಾರ ನೀಡಲಿ ಎಂದು 6.4 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರ ಪರವಾಗಿ ಬಿಪಿ ಮಂಜೇಗೌಡ ಅವರು ವಾದಿಸಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications