ಸರ್ಕಾರಿ ನೌಕರರ ಮುಷ್ಕರ, ಹೇಗಿದೆ ಬೆಂಬಲ?
ಬೆಂಗಳೂರು, ಜೂನ್ 02 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ಮುಷ್ಕರಕ್ಕೆ ಕರೆ ನೀಡಿದೆ. ರಾಜ್ಯದ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಮುಷ್ಕರದ ಬಿಸಿ ತಟ್ಟಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
ಸುಮಾರು 6 ಲಕ್ಷ ಸರ್ಕಾರಿ ನೌಕರರು ಇಂದು ಮುಷ್ಕರದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಸರ್ಕಾರ ಮುಷ್ಕರ ನಡೆದಂತೆ ಆದೇಶ ಹೊರಡಿಸಿದೆ. ಆದರೆ, ಈ ಆದೇಶವನ್ನೂ ಮೀರಿ ಮುಷ್ಕರಕ್ಕೆ ಬೆಂಬಲ ವ್ಯಕ್ತವಾಗಿದೆ. ತುಮಕೂರು, ಹಾಸನ, ಬೀದರ್ ಜಿಲ್ಲೆಗಳಲ್ಲಿ ಮುಷ್ಕರಕ್ಕೆ ನೌಕರರು ಬೆಂಬಲ ಕೊಟ್ಟಿದ್ದಾರೆ. [ನೌಕರರ ಬೇಡಿಕೆಗಳೇನು?]

ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನೌಕರರು ಮುಷ್ಕರಕ್ಕೆ ಬೆಂಬಲ ಕೊಟ್ಟಿದ್ದಾರೆ. ಆದರೆ, ಕೆಲಸಕ್ಕೆ ಹಾಜರಾಗಿದ್ದಾರೆ. ಆದ್ದರಿಂದ ಸಂಚಾರ ವ್ಯವಸ್ಥೆ ಎಂದಿನಂತೆ ಇದೆ. ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧದ ನೌಕರರು ಮುಷ್ಕರಕ್ಕೆ ಬೆಂಬಲ ಕೊಟ್ಟಿದ್ದು, ಹಲವು ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ. [ಜೂನ್ 4ರಂದು ಪೊಲೀಸರ ಪ್ರತಿಭಟನೆ]
ಸರ್ಕಾರಿ ಕಾರು ಚಾಲಕರು ಮುಷ್ಕರಕ್ಕೆ ಬೆಂಬಲ ಕೊಟ್ಟಿದ್ದಾರೆ. ಇದರಿಂದಾಗಿ ವಿಧಾನಸೌಧದಕ್ಕೆ ಹಲವು ಐಎಎಸ್ ಅಧಿಕಾರಿಗಳು ಖಾಸಗಿ ಕಾರಿನಲ್ಲಿ ಆಗಮಿಸಿದ್ದಾರೆ. ವಿಧಾನಸೌಧಕ್ಕೆ ನೌಕರರನ್ನು ಕರೆತರುವ ಬಿಎಂಟಿಸಿ ಬಸ್ಸುಗಳು ಖಾಲಿಯಾಗಿವೆ.
* ಬೆಂಗಳೂರಿನ ಕೆ.ಆರ್.ಸರ್ಕಲ್ನಲ್ಲಿ ಸರ್ಕಾರಿ ಕಾರಗಳನ್ನು ತಡೆಯಲಾಗಿದೆ
ನೌಕರರ ಪ್ರಮುಖ ಬೇಡಿಕೆಗಳು
* ಕೇಂದ್ರ ಸರ್ಕಾರಿ ನೌಕರರ ವೇತನ ನೀಡಬೇಕು
* ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು
* ಹಳೆ ಪಿಂಚಣಿ ಯೋಜನೆ ಮುಂದುವರಿಸಬೇಕು
* ಖಾಲಿ ಇರುವ ಹುದ್ದೆ ಭರ್ತಿ ಮಾಡಬೇಕು
* 7ನೇ ವೇತನ ಆಯೋಗ ರಚಿಸಿ, ವೇತನ ಪರಿಷ್ಕರಣೆ












Click it and Unblock the Notifications