Rangayan: ರಾಜ್ಯದ 6 ರಂಗಾಯಣಳಿಗೆ ನೂತನ ನಿರ್ದೇಶಕರ ನೇಮಕ, ಪಟ್ಟಿ ಇಲ್ಲಿದೆ
ಬೆಂಗಳೂರು, ಆಗಸ್ಟ್ 13: ಕರ್ನಾಟಕ ರಾಜ್ಯ 06 ರಂಗಾಯಣಗಳಿಗೆ (Rangayana) ನಿರ್ದೇಶಕರನ್ನು ಹಾಗೂ ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಮುಂದಿನ ಮೂರು ವರ್ಷದ ಅವಧಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಸದಸ್ಯರನ್ನು ನೇಮಕಾ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.
ಇನ್ನೂ ಉತ್ತರ ಕರ್ನಾಟಕದ ಭಾಗದಲ್ಲಿ ಕಲಿಯುಗ ಕುಡುಕ ನಾಟಕದಿಂದಲೇ ಜನಜನಿತವಾದ ಇತ್ತೀಚಿನ ದಿನಗಳಲ್ಲಿ ಸಿನಿಮಾಗಳಲ್ಲೂ ನಟಿಸಿ ಸೈ ಎನಿಸಿಕೊಂಡ ರಾಜು ತಾಳಿಕೋಟೆ ಅವರಿಗೂ ರಂಗಾಯಣದ ನಿರ್ದೇಶಕ ಸ್ಥಾನ ಲಭಿಸಿದೆ.

ಆರು ನೂತನ ನಿರ್ದೇಶಕರ ಪಟ್ಟಿ
* ಧಾರವಾಡ ರಂಗಾಯಣ - ರಾಜು ತಾಳಿಕೋಟೆ
* ಮೈಸೂರು ರಂಗಾಯಣ - ಸತೀಶ್ ತಿಪಟೂರು
* ಶಿವಮೊಗ್ಗ ರಂಗಾಯಣ - ಪ್ರಸನ್ನ ಡಿ. ಸಾಗರ,
* ಕಲಬುರ್ಗಿ ರಂಗಾಯಣ - ಡಾ. ಸುಜಾತ ಜಂಗಮ ಶೆಟ್ಟಿ,
* ದಾವಣಗೆರೆ ವೃತ್ತಿ ರಂಗಭೂಮಿ ರಂಗಾಯಣ- ಮಲ್ಲಿಕಾರ್ಜುನ ಕಡಕೋಳ
* ಕಾರ್ಕಳ ಯಕ್ಷ ರಂಗಾಯಣ- ವೆಂಕಟರಮಣ ಐತಾಳ ಅವರನ್ನು ನಿರ್ದೇಶಕರಾಗಿ ನೇಮಿಸಲಾಗಿದೆ.
ಇನ್ನೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ 15-03-2024ರಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಲ್ಲಿ ಸದಸ್ಯರ ಸ್ನಾನಕ್ಕೆ ನೇಮಕಗೊಂಡಿರುವ ಡಾ.ವಿಜಯಲಕ್ಷ್ಮೀ ನಾಯಕ್, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯಲ್ಲಿ ಸದಸ್ಯರ ಸ್ಥಾನಕ್ಕೆ ನೇಮಕವಾಗಿರುವ ರಾಮಮೂರ್ತಿ ಮತ್ತು ನಾಗರಾಜ್ ಶಿಲ್ಪಿ ಹಾಗೂ ಕರ್ನಾಟಕ ಲಲಿತಕಲಾ ಅಕಾಡೆಮಿಯಲ್ಲಿ ಸದಸ್ಯರ ಸ್ಥಾನಕ್ಕೆ ನೇಮಕಗೊಂಡ ಆರ್.ಶಂಕರ್ ಅವರನ್ನು ಸದಸ್ಯರಾಗಿ ಮುಂದುವರೆಯಲು ನಿರಾಕರಿಸಲಾಗಿದೆ. ಹೀಗಾಗಿ ಅವರನ್ನು ರದ್ದುಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಈ ಕೆಳಗಿನವರನ್ನು ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರದ ಸದಸ್ಯರ ಸ್ಥಾನಗಳಿಗೆ ನಾಮನಿರ್ದೇಶನಗೊಳಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ. ಈ ನೇಮಕಾತಿ ಮುಂದಿನ ಮೂರು ವರ್ಷದ ಅವಧಿಗೆ ಇರುತ್ತದೆ ಎಂದು ಆದೇಶದಲ್ಲಿ ಸಚಿವರು ತಿಳಿಸಿದ್ದಾರೆ.
* ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿ ಸದಸ್ಯರಾಗಿ 'ಅಕ್ಷತಾ ಎಂ.ನಾಯಕ್' ನೇಮಕ
* ಕರ್ನಾಟಕ ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ 'ವಿನೋದ್ ಮೂಡಗಡದ್ದೆ' ನೇಮಕ
* ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಸದಸ್ಯರಾಗಿ 'ರಾಘವೇಂದ್ರ ಕಿನ್ನಾಳ' (ಕೊಪ್ಪಳ) ನೇಮಕ
* ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಸದಸ್ಯರಾಗಿ 'ಶಿವಪ್ರಸಾದ್' (ಚನ್ನಪಟ್ಟಣ) ನೇಮಕ
* ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಸದಸ್ಯರಾಗಿ 'ಎಚ್ಎಸ್ ಮಂಜುನಾಥ್' (ಹಾಸನ) ನೇಮಕ
* ಕರ್ನಾಟಕ ಬಯಲಾಟ ಅಕಾಡೆಮಿ ಸದಸ್ಯರಾಗಿ 'ಲಕ್ಷ್ಮಣ ಹಣಮಂತ ದೇಸಾರಟ್ಟಿ' (ಬಾಗಲಕೋಟೆ) ಅವರನ್ನು ನೇಮಕ ಮಾಡಲಾಗಿದೆ...
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications