KSDL: ಕರ್ನಾಟಕ ಸಾಬೂನು-ಮಾರ್ಜಕ ಸಂಸ್ಥೆ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ
ಬೆಂಗಳೂರು, ಜನವರಿ 05: ಬೆಂಗಳೂರಿನ ಯಶವಂತಪುರದಲ್ಲಿ ಇರುವ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (KSDL) ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡುವ ಜೊತೆಗೆ ಈ ವರ್ಷದ ಅಭವೃದ್ಧಿ ಯೋಜನೆಗಳನ್ನು ವಿವರಿಸಿದೆ.
100 ವರ್ಷಗಳಿಗೂ ಹೆಚ್ಚಿನ ಇತಿಹಾಸವಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (KSDL) ಸಿಬ್ಬಂದಿ ವರ್ಗಕ್ಕೆ ಇದೇ ಮೊದಲ ಬಾರಿಗೆ ಏರ್ಪಡಿಸಿದ್ದ ಸಮಗ್ರ ಆರೋಗ್ಯ ತಪಾಸಣೆ ಶಿಬಿರ ಮತ್ತು ಹೆಲ್ತ್ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಸಚಿವರು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಆವರಣದಲ್ಲಿ ಸರ್ಕಾರಿ ಕಚೇರಿಗಳಿಗೆ ಜಾಗ ಒದಗಿಸಲು ಸುಸಜ್ಜಿತ ಸಂಕೀರ್ಣ ನಿರ್ಮಿಸಲಾಗುವುದು. ಮುಂದಿನ 100 ವರ್ಷಗಳ ಅವಧಿಗೆ ಕಾರ್ಖಾನೆಯ ವಿಸ್ತರಣೆಗೆ ಬೇಕಾದ ಜಾಗವನ್ನು ಮೀಸಲಿಟ್ಟುಕೊಂಡು ಈ ಕೆಲಸ ಕೈಗೊಳ್ಳಲಾಗುವುದು ಎಂದರು.
KSDL ಸಿಬ್ಬಂದಿಗೆ 5 ಲಕ್ಷ ರೂ. ಮೊತ್ತದ ಹೆಲ್ತ್ ಕಾರ್ಡ್
KSDL ಸಿಬ್ಬಂದಿಗೆ ಇದೇ ಮೊದಲ ಬಾರಿಗೆ ಆರೋಗ್ಯ ತಪಾಸಣೆ ಶಿಬಿರ ಮತ್ತು ಐದು ಲಕ್ಷ ರೂಪಾಯಿ ಮೊತ್ತದ ಚಿಕ್ಸಿತೆ ಪಡೆಯಬಹುದಾದ ಹೆಲ್ತ್ ಕಾರ್ಡ್ ಅನ್ನು ಸಚಿವರು ವಿತರಿಸಿದರು. ಈ ಮೂಲಕ ಸಿಬ್ಬಂದಿಗೆ ಆರೋಗ್ಯ ವಿಮೆಯ ಅಭಯ ನೀಡಿದರು.
169 ಕಾಯಂ ಸಿಬ್ಬಂದಿ ಮತ್ತು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ 464 ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ಈ ವಿಮಾ ಸೌಲಭ್ಯ ಅನ್ವಯ ಆಗುತ್ತದೆ. ಮಲ್ಲಿಗೆ ಆಸ್ಪತ್ರೆ ಜತೆಗೂ ಕೆಎಸ್ಡಿಲ್ ಒಪ್ಪಂದ ಮಾಡಿಕೊಂಡಿದ್ದು ರಿಯಾಯಿತಿ ದರದಲ್ಲಿ ಚಿಕಿತ್ಸೆ ಲಭ್ಯವಾಗಲಿದೆ ಎಂದು ಸಚಿವರು ವಿವರಿಸಿದರು.

ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಖನಿಜ ಭವನದ ಆವರಣದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಂಪನಿಗಳ ಕಚೇರಿಗಳಿಗೆ ಸ್ಥಳಾವಕಾಶ ಕೊಡಲಾಗಿದೆ. ಅದೇ ಮಾದರಿಯನ್ನೂ KSDL ನಲ್ಲೂ ಅಳವಡಿಸಿಕೊಳ್ಳಲಾಗುವುದು. KSDL ವತಿಯಿಂದಲೇ ಹಂತಹಂತವಾಗಿ ಇದನ್ನು ನಿರ್ಮಿಸಲಾಗುವುದು. ಇದರಿಂದ ಸಂಸ್ಥೆಯು ಆರ್ಥಿಕ ಸ್ವಾವಲಂಬನೆ ಸಾಧಿಸುವುದು ಸುಲಭವಾಗಲಿದೆ ಎಂದು ವಿವರಿಸಿದರು.
₹5,000 ಕೋಟಿ ವಹಿವಾಟಿನ ಗುರಿ
ಮೈಸೂರು ಮಹಾರಾಜರು ಮತ್ತು ಸರ್ ಎಂ ವಿಶ್ವೇಶ್ವರಯ್ಯನವರು ಸ್ಥಾಪಿಸಿದ ಕೆಎಸ್ಡಿಎಲ್ ಸದ್ಯಕ್ಕೆ ವಾರ್ಷಿಕವಾಗಿ 1,200 ಕೋಟಿ ರೂ.ಗಳಿಗಿಂತ ಹೆಚ್ಚಿನ ವಹಿವಾಟು ನಡೆಸುತ್ತಿದ್ದು, ಲಾಭದ ಹಾದಿಯಲ್ಲಿದೆ. ಇದು 2030ರ ಹೊತ್ತಿಗೆ 5,000 ಕೋಟಿ ರೂ. ಮುಟ್ಟಬೇಕು. ವಿದೇಶಗಳಲ್ಲೂ ಮಾರುಕಟ್ಟೆ ಸೃಷ್ಟಿಗೆ ಆದ್ಯತೆ ಬೀಡಲಾಗುತ್ತಿದ್ದು, ಯೂರೋಪ್ ಮತ್ತು ಅರಬ್ ರಾಷ್ಟ್ರಗಳಿಗೆ ಕೆಎಸ್ಡಿಎಲ್ ಉತ್ಪನ್ನಗಳನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ರಫ್ತು ಮಾಡಲಿದ್ದೇವೆ ಎಂದು ಹೇಳಿದರು.
ಕೆಎಸ್ಡಿಎಲ್ ಆವರಣದಲ್ಲಿ ದಿನನಿತ್ಯದ ದಿನಸಿ ಪದಾರ್ಥಗಳು, ಡೆಟಾಲ್, ಹ್ಯಾಂಡ್ ಸೋಪ್ ಮುಂತಾದವೆಲ್ಲ ಲಭ್ಯವಾಗಬೇಕು. ಸದ್ಯಕ್ಕೆ ಸಾಬೂನು ಮತ್ತು ಮಾರ್ಜಕಗಳ ಮಾರುಕಟ್ಟೆ ವಿತರಣೆ ಚೆನ್ನಾಗಿ ನಡೆಯುತ್ತಿದೆ. ಸಂಸ್ಥೆಯು ಕಾರ್ಮಿಕರ ಯೋಗಕ್ಷೇಮಕ್ಕೂ ಆದ್ಯತೆ ನೀಡುವ ಉತ್ತರದಾಯಿತ್ವವನ್ನು ಪ್ರದರ್ಶಿಸಿದೆ ಎಂದು ತಿಳಿಸಿದರು.
ಎಂಎಸ್ಐಎಲ್ ಗೆ ಮತ್ತಷ್ಟು ಬಲ
ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (MSIL) ನಡೆಸುವ ವಹಿವಾಟನ್ನು ವಿಸ್ತರಿಸಲು ನಿರ್ಧರಿಸಲಾಗಿದ್ದು, ಕೇರಳ ಮಾದರಿಯಲ್ಲಿ ಚಿಟ್ ಫಂಡ್ ನಡೆಸಲಾಗುವುದು. ಇದರ ಮೂಲಕ ವಾರ್ಷಿಕ 10 ಸಾವಿರ ಕೋಟಿ ರೂ. ವ್ಯವಹಾರ ಬೆಳೆಸಲಾಗುವುದು. ಇದರಲ್ಲಿ ಮಹಿಳಾ ಸ್ವಸಹಾಯ ಗುಂಪುಗಳ ಸಹಕಾರ ತೆಗೆದುಕೊಂಡು, ಖಾಸಗಿಯವರಿಗೆ ಆರೋಗ್ಯಕರ ಸ್ಪರ್ಧೆ ನೀಡಲಾಗುವುದು.
ಎಂಎಸ್ಐಎಲ್ ನ 200 ಮದ್ಯ ಮಾರಾಟ ಪ್ರೀಮಿಯಂ ಬೋಟಿಕ್ ಗಳನ್ನು ಆರಂಭಿಸಲಾಗುತ್ತಿದೆ. ಇತ್ತೀಚೆಗೆ ಬಸವೇಶ್ವರ ನಗರದಲ್ಲಿ ಹೊಸ ವರ್ಷ ದಿನ ಆರಂಭಿಸಿದ್ದು ಅಲ್ಲಿ 30-40ರಷ್ಟು ವಹಿವಾಟು ಹೆಚ್ಚಾಗಿದೆ. ಯಾವ ಖಾಸಗಿ ಬೋಟಿಕ್ ಗಳಿಗೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಮಾಡಲಾಗುತ್ತಿದೆ. ಇದೇ ರೀತಿಯಲ್ಲಿ ಲೇಖಕ್ ನೋಟ್ ಪುಸ್ತಕಗಳ ಗುಣಮಟ್ಟವನ್ನೂ ಹೆಚ್ಚಿಸಲಾಗುವುದು. ಒಟ್ಟಿನಲ್ಲಿ ಸರ್ಕಾರಿ ಉದ್ದಿಮೆಗಳಿಗೆ ಕಾರ್ಪೊರೇಟ್ ಸ್ಪರ್ಶ ನೀಡಿ, ಲಾಭದ ಹಳಿಗೆ ತರಲಾಗುವುದು ಎಂದು ಯೋಜನೆ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕೆಎಸ್ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್, ಪ್ರಧಾನ ವ್ಯವಸ್ಥಾಪಕ (ಆಡಳಿತ) ಗಂಗಪ್ಪ, ಮಲ್ಲಿಗೆ ಆಸ್ಪತ್ರೆ ಸಿಇಒ ಡಾ.ಶ್ರೀನಿವಾಸ, ಕೈಗಾರಿಕಾ ಇಲಾಖೆಯ ಮಹಾಂತೇಶ ಬಿರಾದರ ಇದ್ದರು.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?










Click it and Unblock the Notifications